Home / ಲೇಖನ / ಇತರೆ / ಯಾವುದು ಸತ್ಯ?

ಯಾವುದು ಸತ್ಯ?

ಬಹಳ ಹಿಂದೆ- ಭವ್ಯ ಭಾರತ ಕಂಡ ಅಪ್ರತಿಮ ಅಧ್ಯಾತ್ಮಿಕ ತತ್ವ ಸಿದ್ಧಾಂತಿ ಮಹಾ ಸಿದ್ಧಿ ಸಾಧಕರೊಬ್ಬರಿದ್ದರು. ಅವರ ಹೆಸರು- ರಮಣ ಮಹರ್ಷಿಗಳೆಂದು. ಅವರಿಗೆ ಬಹಳ ಜನ ಶಿಷ್ಯರಿದ್ದರು. ಅವರಲ್ಲಿ ಮರುಳ ಸಿದ್ದಯ್ಯ, ಬಸಪ್ಪಯ್ಯ ವಲಿಯ, ಸೀನ, ಮೃತ್ಯುಂಜಯ, ರಾಜ, ಕೊಟ್ರಯ್ಯ… ಎಂದೂ ಇದ್ದರು.

ಒಮ್ಮೆ- ಉಪದೇಶದ ಮಧ್ಯೆ ರಮಣ ಮಹರ್ಷಿಗಳು “ಅಯ್ಯಾ ಸತ್ಯ ಯಾವುದು? ನಿಮ್ಮಲ್ಲಿ ಯಾರು ಹೇಳ ಬಲ್ಲಿರಿ?” ಎಂದು ಅಲ್ಲಿದ್ದ ತಮ್ಮ ಶಿಷ್ಯರೆಲ್ಲರನೂ… ಒಂದು ಕಡೆಯಿಂದ ಕೇಳುತ್ತಾ ಹೋದರು. ಆಗ ಶಿಷ್ಯರೆಲ್ಲರು ತಲೆ ಕೆರೆಯುತ್ತಾ ಕುಳಿತರು.

“ಸ್ವಾಮಿಗಳೆ… ನಾವು ಕಾಣುವುದೆಲ್ಲ ಸತ್ಯ! ಉಳಿದ್ದಿದ್ದೆಲ್ಲ ಮಿಥ್ಯ” ಎಂದು ಮರುಳ ಸಿದ್ಧಯ್ಯ ಸ್ವಾಮಿಗಳು ಅಂದರು.

ಮೃತ್ಯುಂಜಯ ಎದ್ದು ನಿಂತು- “ಸ್ವಾಮಿಗಳೆ ಯಾವುದು ಸತ್ಯವಲ್ಲ! ಸತ್ಯವಿದ್ದರೆಲ್ಲವೇ ಸತ್ಯವೆನ್ನುವುದು! ಮಿಥ್ಯವನ್ನು ನಾವು ಸತ್ಯವೆಂದು ನಂಬಿದ್ದೇವೆ. ಕಾಣುವುದೆಲ್ಲ ಮಿಥ್ಯ ಸತ್ಯ ಇಲ್ಲದೇ ಇಲ್ಲ…” ಎಂದು ವಾದ ಮಾಡುತ್ತಾ ನಿಂತ.

ರಮಣ ಮಹರ್ಷಿಗಳು- “ಶಿಷ್ಯ ಮೃತ್ಯುಂಜಯ ಕೇಳಿದಕ್ಕೆ ಮಾತ್ರ ಉತ್ತರಿಸು ನೀ ಕುಳಿತುಕೋ.” ಎಂದು ಮೃತ್ಯುಂಜಯನ ಮೇಲೆ ಸಿಟ್ಟಾದರು.

ಸೀನ ಎದ್ದು ನಿಂತು “ಸ್ವಾಮಿಗಳೆ ಸತ್ಯ ಮಿಥ್ಯ ಎರಡು ಕಣ್ಣಿಗೆ ಹತ್ತಿರ. ಯಾವುದು ಸತ್ಯ ಯಾವುದು ಮಿಥ್ಯ ಕಣ್ಣಿಗೆ ತಿಳಿಯದ ಸಂಗತಿಗಳು” ಎಂದ.

“ಸ್ವಾಮಿಗಳೆ… ನಾನು ಮೃತ್ಯುಂಜಯ ಹಾಗೂ ಸೀನ ಹೇಳಿದ್ದನ್ನೇ ಅನುಮೋದಿಸುತ್ತೇನೆ. ನನಗೇನು ಹೆಚ್ಚಿಗೆ ತಿಳಿಯದು” ಎಂದು ವಲಿಯ ಹೇಳಿ ಕುಳಿತ.

ಬಸಪ್ಪಯ್ಯ ಎದ್ದು ನಿಂತು- “ಸ್ವಾಮಿಗಳೆ ನನಗೇನು ಹೊಳೆಯದು. ನನಗೆ ಎರಡು ದಿನ ಕಾಲಾವಕಾಶ ನೀಡಿದಲ್ಲಿ ಅಧ್ಯಯನ ಮಾಡಿ ಬಂದು ಅರುಹುವೆ” ಎಂದ.

ಅಲ್ಲಿದ್ದ ರಾಜ, ಕೊಟ್ರಯ್ಯ ತಲೆ ತಗ್ಗಿಸಿ- “ಮೌನಂ ಸರ್ವತ್ರ ಸಾಧನಂ…” ಎಂದು ಕುಳಿತ್ತಿದ್ದರು.

“ಅಯ್ಯಾ ಶಿಷ್ಯರೆ.. ನಾ ಎನ್ನುವ ಪ್ರಜ್ಞೆಯಷ್ಟೇ ಸತ್ಯಾಸ್ಯ ಸತ್ಯ! ಉಳಿದಿದ್ದೆಲ್ಲ ಮಿಥ್ಯಸ್ಯಾ ಮಿಥ್ಯ… ನೋಡಿ ಎಷ್ಟು ಸರಳ ಸುಂದರವಾಗಿದೆ” ಎಂದು ರಮಣ ಮಹರ್ಷಿಗಳು ಅಂದರು.

ಅಲ್ಲಿಗೆ ಅಂದಿನ ಕಾರ್ಯಕ್ರಮವು ಮುಗಿಯಿತು. ಶಿಷ್ಯರೆಲ್ಲ ಎದ್ದು ಹೊರಟರು. ಸ್ವಾಮಿಗಳು ಧ್ಯಾನಸ್ಥರಾದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...