Home / ಲೇಖನ / ಇತರೆ / ಯಾವುದು ಸತ್ಯ?

ಯಾವುದು ಸತ್ಯ?

ಬಹಳ ಹಿಂದೆ- ಭವ್ಯ ಭಾರತ ಕಂಡ ಅಪ್ರತಿಮ ಅಧ್ಯಾತ್ಮಿಕ ತತ್ವ ಸಿದ್ಧಾಂತಿ ಮಹಾ ಸಿದ್ಧಿ ಸಾಧಕರೊಬ್ಬರಿದ್ದರು. ಅವರ ಹೆಸರು- ರಮಣ ಮಹರ್ಷಿಗಳೆಂದು. ಅವರಿಗೆ ಬಹಳ ಜನ ಶಿಷ್ಯರಿದ್ದರು. ಅವರಲ್ಲಿ ಮರುಳ ಸಿದ್ದಯ್ಯ, ಬಸಪ್ಪಯ್ಯ ವಲಿಯ, ಸೀನ, ಮೃತ್ಯುಂಜಯ, ರಾಜ, ಕೊಟ್ರಯ್ಯ… ಎಂದೂ ಇದ್ದರು.

ಒಮ್ಮೆ- ಉಪದೇಶದ ಮಧ್ಯೆ ರಮಣ ಮಹರ್ಷಿಗಳು “ಅಯ್ಯಾ ಸತ್ಯ ಯಾವುದು? ನಿಮ್ಮಲ್ಲಿ ಯಾರು ಹೇಳ ಬಲ್ಲಿರಿ?” ಎಂದು ಅಲ್ಲಿದ್ದ ತಮ್ಮ ಶಿಷ್ಯರೆಲ್ಲರನೂ… ಒಂದು ಕಡೆಯಿಂದ ಕೇಳುತ್ತಾ ಹೋದರು. ಆಗ ಶಿಷ್ಯರೆಲ್ಲರು ತಲೆ ಕೆರೆಯುತ್ತಾ ಕುಳಿತರು.

“ಸ್ವಾಮಿಗಳೆ… ನಾವು ಕಾಣುವುದೆಲ್ಲ ಸತ್ಯ! ಉಳಿದ್ದಿದ್ದೆಲ್ಲ ಮಿಥ್ಯ” ಎಂದು ಮರುಳ ಸಿದ್ಧಯ್ಯ ಸ್ವಾಮಿಗಳು ಅಂದರು.

ಮೃತ್ಯುಂಜಯ ಎದ್ದು ನಿಂತು- “ಸ್ವಾಮಿಗಳೆ ಯಾವುದು ಸತ್ಯವಲ್ಲ! ಸತ್ಯವಿದ್ದರೆಲ್ಲವೇ ಸತ್ಯವೆನ್ನುವುದು! ಮಿಥ್ಯವನ್ನು ನಾವು ಸತ್ಯವೆಂದು ನಂಬಿದ್ದೇವೆ. ಕಾಣುವುದೆಲ್ಲ ಮಿಥ್ಯ ಸತ್ಯ ಇಲ್ಲದೇ ಇಲ್ಲ…” ಎಂದು ವಾದ ಮಾಡುತ್ತಾ ನಿಂತ.

ರಮಣ ಮಹರ್ಷಿಗಳು- “ಶಿಷ್ಯ ಮೃತ್ಯುಂಜಯ ಕೇಳಿದಕ್ಕೆ ಮಾತ್ರ ಉತ್ತರಿಸು ನೀ ಕುಳಿತುಕೋ.” ಎಂದು ಮೃತ್ಯುಂಜಯನ ಮೇಲೆ ಸಿಟ್ಟಾದರು.

ಸೀನ ಎದ್ದು ನಿಂತು “ಸ್ವಾಮಿಗಳೆ ಸತ್ಯ ಮಿಥ್ಯ ಎರಡು ಕಣ್ಣಿಗೆ ಹತ್ತಿರ. ಯಾವುದು ಸತ್ಯ ಯಾವುದು ಮಿಥ್ಯ ಕಣ್ಣಿಗೆ ತಿಳಿಯದ ಸಂಗತಿಗಳು” ಎಂದ.

“ಸ್ವಾಮಿಗಳೆ… ನಾನು ಮೃತ್ಯುಂಜಯ ಹಾಗೂ ಸೀನ ಹೇಳಿದ್ದನ್ನೇ ಅನುಮೋದಿಸುತ್ತೇನೆ. ನನಗೇನು ಹೆಚ್ಚಿಗೆ ತಿಳಿಯದು” ಎಂದು ವಲಿಯ ಹೇಳಿ ಕುಳಿತ.

ಬಸಪ್ಪಯ್ಯ ಎದ್ದು ನಿಂತು- “ಸ್ವಾಮಿಗಳೆ ನನಗೇನು ಹೊಳೆಯದು. ನನಗೆ ಎರಡು ದಿನ ಕಾಲಾವಕಾಶ ನೀಡಿದಲ್ಲಿ ಅಧ್ಯಯನ ಮಾಡಿ ಬಂದು ಅರುಹುವೆ” ಎಂದ.

ಅಲ್ಲಿದ್ದ ರಾಜ, ಕೊಟ್ರಯ್ಯ ತಲೆ ತಗ್ಗಿಸಿ- “ಮೌನಂ ಸರ್ವತ್ರ ಸಾಧನಂ…” ಎಂದು ಕುಳಿತ್ತಿದ್ದರು.

“ಅಯ್ಯಾ ಶಿಷ್ಯರೆ.. ನಾ ಎನ್ನುವ ಪ್ರಜ್ಞೆಯಷ್ಟೇ ಸತ್ಯಾಸ್ಯ ಸತ್ಯ! ಉಳಿದಿದ್ದೆಲ್ಲ ಮಿಥ್ಯಸ್ಯಾ ಮಿಥ್ಯ… ನೋಡಿ ಎಷ್ಟು ಸರಳ ಸುಂದರವಾಗಿದೆ” ಎಂದು ರಮಣ ಮಹರ್ಷಿಗಳು ಅಂದರು.

ಅಲ್ಲಿಗೆ ಅಂದಿನ ಕಾರ್ಯಕ್ರಮವು ಮುಗಿಯಿತು. ಶಿಷ್ಯರೆಲ್ಲ ಎದ್ದು ಹೊರಟರು. ಸ್ವಾಮಿಗಳು ಧ್ಯಾನಸ್ಥರಾದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...