Home / ಲೇಖನ / ಇತರೆ / ಕೋಳಿ ಮೊದಲೋ… ಮೊಟ್ಟೆ ಮೊದಲೋ…

ಕೋಳಿ ಮೊದಲೋ… ಮೊಟ್ಟೆ ಮೊದಲೋ…

ಒಮ್ಮೆ- ಅಕ್ಷರ ಮಹಾರಾಜ ಸಭೆಯ ಮಧ್ಯದಲ್ಲಿ ವಿನೋದಕ್ಕಾಗಿ “ಕೋಳಿ ಮೊದಲೋ? ಮೊಟ್ಟೆ ಮೊದಲೋ?? ಇದನ್ನು ಜಾಣ್ಮೆಯಲ್ಲಿ ಉತ್ತರಿಸಬೇಕು. ಇಲ್ಲವಾದರೆ ತಲೆ ದಂಡ ಖಂಡಿತ” ಎಂದು ಆಸ್ಥಾನಿಕರೆಲ್ಲರನೂ ಕೇಳುತ್ತಾ ಹೋದ.

ಒಬ್ಬ ಪಂಡಿತ ಎದ್ದು ನಿಂತು – “ಪ್ರಭು ಕೋಳಿ ಮೊದಲು, ಕೋಳಿ ಇದ್ದರಲ್ಲದೇ ಮೊಟ್ಟೆ ಉತ್ಪತ್ತಿಯಾಗುವುದು” ಎಂದ. ಅಲ್ಲಿದ್ದವರೆಲ್ಲಗೊಳ್ಳನೆ ನಕ್ಕರು.

ಅಲ್ಲಿದ್ದ ಕವಿಯೊಬ್ಬ ಎದ್ದು ನಿಂತು “ಪ್ರಭು… ಮೊಟ್ಟೆ ಮೊದಲು. ಮೊಟ್ಟೆಯಿದ್ದರಲ್ಲವೇ ಕೋಳಿ ಜನ್ಮಿಸುವುದು…” ಎಂದು ವಾದ ಮಂಡಿಸಿದ.

ಅಲ್ಲಿದ್ದವರೆಲ್ಲ ಮತ್ತೇ ಬಿದ್ದು ಬಿದ್ದು ನಕ್ಕರು.

ಇನ್ನೊಬ್ಬ ಪಂಡಿತ ಎದ್ದು ನಿಂತು “ಪ್ರಭು… ಕೋಳಿ ಮತ್ತು ಮೊಟ್ಟೆ ಏಕಕಾಲಕ್ಕೆ ಅಸ್ಥಿತ್ವಕ್ಕೆ ಬಂದಿವೆ. ಇಲ್ಲಿ ಯಾವುದು ಮೊದಲು ಯಾವುದು ಆನಂತರ ಎನ್ನುವುದು ಮುಖ್ಯವಲ್ಲ. ಕೋಳಿ ಮತ್ತು ಮೊಟ್ಟೆ ನಮಗೆ ಎರಡೂ ಮುಖ್ಯ” ಎಂದ.

ಆಸ್ಥಾನಿಕರೆಲ್ಲ ತಲೆದೂಗಿ ಕಣ್ಣು ಕಿವಿ ಮೂಗು ಅರಳಿಸಿ ಕುಳಿತರು.

ಅನುಭಾವಿಯೊಬ್ಬ ಎದ್ದು ನಿಂತು “ಮಹಾಪ್ರಭು… ಕೋಳಿ ಎನ್ನುವುದೂ ಸತ್ಯ ಮೊಟ್ಟೆ ಎನ್ನುವುದೂ ಸತ್ಯ. ಯಾವುದು ಮೊದಲು ಯಾವುದು ಅನಂತರ ಎನ್ನುವುದೆಲ್ಲ ಗೊಂದಲ…” ಎಂದು ವಾದ ಮಂಡಿಸುತ್ತಾ ನಿಂತ.

ಅಕ್ಷರ ಮಹಾರಾಜರದ್ದು ತಲೆ ಕೆಟ್ಟು ಹೋಯಿತು.

ಅಷ್ಟರಲ್ಲಿ- ಬೀರಬಲ್ಲ ಎದ್ದು ನಿಂತು ಮಹಾರಾಜರಿಗೆ, ಸಭೆಗೆ, ವಂದಿಸಿ. “ಮಹಾಪ್ರಭು ದೇವರು ಆರಂಭದಲ್ಲಿ ಅನಂತ ಸೃಷ್ಟಿ ಕ್ರಿಯೆಗಳಲ್ಲಿ ಪಕ್ಷಿಗಳನ್ನು ಮೊದಲು ಸೃಷ್ಠಿಸಿದ! ಆ ಪಕ್ಷಿ ಪ್ರಭೇದಗಳಲ್ಲಿ ಕೋಳಿಯೂ ಒಂದು ಎಂದು ಬ್ರಹ್ಮಾಂಡ ಸೃಷ್ಠಿ ಪುರಾಣಗಳಲ್ಲಿ ಸ್ಪಷ್ಟ ಉಲ್ಲೇಖವಿದೆ. ಕೋಳಿಯಿಂದ ಮೊದಲು ಮೊಟ್ಟೆ ! ನಂತರ ಮೊಟ್ಟೆಯಿಂದ ಕೋಳಿ ಹೀಗೆ ಸೃಷ್ಟಿ ಪ್ರತಿ ಸೃಷ್ಠಿಯಾಗುತ್ತಾ ನಿರಂತರವಾಗಿ ಸಾಗಿದೆಯೇ ವಿನಹ… ಕೂದಲು ಸೀಳುವ ಕೆಲಸದಿಂದ ಯಾರಿಗೆ ಲಾಭವಿಲ್ಲ… ಕೋಳಿ ಮೊದಲೋ ಮೊಟ್ಟೆ ಮೊದಲೋ… ಎನ್ನುವ ಪ್ರಶ್ನೆಯೇ ಅಲ್ಲ! ಆದ್ದರಿಂದ – ಗತ್ತಿನಲ್ಲಿ ಕೋಳಿ ಮೊದಲು, ಕೋಳಿಯಿಂದ ಮೊಟ್ಟೆ ಅನಂತರ ಬಂದಿದೆ… ಅದಕ್ಕೆ ಸೃಷ್ಠಿ ಪುರಾಣ ಕಥೆಯೇ ಮೂಲ ಆಧಾರ..” ಎಂದು ತನ್ನ ವಾದ ಮಂಡಿಸುತ್ತಾ ನಿಂತ.

“ಶಹಭಾಶ್… ಬೀರಬಲ್ಲ….! ನಿನ್ನ ವಾದ ಪ್ರೌಢಿಮೆ, ಜಾಣತನ, ನಿನ್ನ ತರ್ಕ ವಿನೋದ ಸದಾ ಚೈತನ್ಯದ ಚಿಲುಮೆ. ಮೆಚ್ಚಿದೆ. ನಿನ್ನ ವಾದವನ್ನು ನಾನೂ ಅನುಮೊದಿಸಿದ್ದೇನೆ” ಎಂದು ಸ್ವತಃ ಪ್ರಭುಗಳೇ ಎದ್ದು ನಿಂತು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.

ಉಳಿದವರೆಲ್ಲ ಎದ್ದು ನಿಂತು ಜೋರಾಗಿ ಚಪ್ಪಾಳೆ ತಟ್ಟಿದರು. ಅಲ್ಲಿಗೆ ಸಭೆಯು ಮುಕ್ತಾಯವಾಗಿತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...