Home / ಲೇಖನ / ಇತರೆ / ಮೂರು ಕತೆ

ಮೂರು ಕತೆ

ಒಮ್ಮೆ- ರಮಣಮಹರ್ಷಿಗಳು ತಮ್ಮ ಶಿಷ್ಯರಿಗೆ ಉಪದೇಶ ನೀಡುತ್ತಿದ್ದರು. ಉಪದೇಶದ ಮಧ್ಯೆ ಒಂದು ಪ್ರಶ್ನೆ ಎತ್ತಿದರು. ‘ಜೀವನದಲ್ಲಿ ಮೂರು ಸೂತ್ರಗಳ್ಯಾವುವು?’ ಎಂದು ಅಲ್ಲಿದ್ದ ಶಿಷ್ಯರೆಲ್ಲರನ್ನೂ ಕೇಳುತ್ತಾ ಹೋದರು.

ಮೊತ್ತ ಮೊದಲು ಮರುಳ ಸಿದ್ದಯ್ಯ ಸ್ವಾಮಿಗಳದ್ದು- ಸ್ವಾಮಿಗಳ ಜೀವನದಲ್ಲಿ ಮಾತು, ಮಾನ, ಮರ್‍ಯಾದೆ ಎಂಬ ಮೂರು ಮುತ್ತುಗಳು ಒಡೆದು ಹೋಗದಂತೆ ಬಲು ಎಚ್ಚರಿಕೆಯಿಂದ ಬದುಕಬೇಕು…’ ಎಂದ.

“ಜೀವನದಲ್ಲಿ ನಾಲಿಗೆ-ಕಚ್ಛೆ-ಪಂಚೆ ಈ ಮೂರು ಜಾರದಂತೆ ಎಚ್ಚರಿಕೆ ವಹಿಸಬೇಕು. ಈ ಮೂರು ಒಮ್ಮೆ ಜಾರಿದರೆ ಇನ್ನೂ ಫಲವಿಲ್ಲ ಸ್ವಾಮಿಗಳೆ…” ಎಂದ ಮೃತ್ಯುಂಜಯ.

ಅಲ್ಲಿದ್ದ ಸೀನ್ಯ ಎದ್ದು ನಿಂತು ‘ಬಾಲ್ಯ, ಪ್ರೌಢ, ಯೌವ್ವನ ಈ ಮೂರು ಹಂತಗಳು ಹಾಳಾಗದಂತೆ ಬಲು ಎಚ್ಚರಿಕೆಯಿಂದ ಜೋಪಾನ ಮಾಡತಕ್ಕದ್ದು’ ಎಂದ.

ಗೌಡಪ್ಪನ ಸರದಿ ಬಂತು “ಸ್ವಾಮಿ… ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಆಡಬೇಡ, ಕೆಟ್ಟದ್ದನ್ನು ಕೇಳಬೇಡ ಎಂಬ ಮೂರು ಸೂತ್ರ ಪಾಲಿಸಿದರೆ ಯಾವುದೇ ಭಯವಿಲ್ಲ” ಎಂದ.

ವಲಿಯ ಎದ್ದು ನಿಂತ ‘ಸ್ವಾಮಿ… ಬ್ರಹ್ಮ ವಿಷ್ಣು ಮಹೇಶ್ವರರ ನಿತ್ಯ ಮರೆಯಬಾರದು ಅವರೇ ಜೀವನ ಆಧಾರವೆಂದ.’

ಎಲಿವಾಳ ಅವರು ಎದ್ದು ನಿಂತು – ‘ಗುರುಗಳೆ ಜೀವನದಲ್ಲಿ ನಾನು ಎಂಬುದ ಬಿಡಬೇಕು. ನಾವು ಎಂಬುದ ಹಿಡಿಬೇಕು. ಇನ್ನೊಬ್ಬರ ಬಗ್ಗೆ ಅಸಹ್ಯ ಪಡುವುದ ಬಿಡಬೇಕು’ ಎಂದ.

ರಮಣ ಮಹರ್ಷಿಗಳು ಕ್ಷಣ ಮೌನ ವಹಿಸಿ- ‘ಶಿಷ್ಯರೆ… ಮಾನವ ಜನ್ಮ ದೊಡ್ಡದು. ಅದನ್ನು ಸಾರ್ಥಕ ಮಾಡಿಕೊಳ್ಳಬೇಕೆಂದರೆ…. ಮೊದಲು ಸರಳ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಎರಡನೆಯದಾಗಿ ಮೌನವೇ ಆಭರಣ ಎಂಬುದನ್ನು ಪಾಲಿಸಬೇಕು. ದೇವರಿಗೆ ಸದಾ ಶರಣಾಗುವುದು. ಈ ಮೂರು ಸೂತ್ರದಲ್ಲಿ ಏನೆಲ್ಲ ಅಡಗಿದೆ. ಈ ಮೂರು ತತ್ವಗಳ ಪಾಲಿಸುವುದು ಕಡು ಕಷ್ಟ. ಈ ಮೂರು ಸೂತ್ರ ಪಾಲಿಸಿದರೆ ೧೪ ಲೋಕಂಗಳ ಗೆಲ್ಲಬಹುದು…’ ಎಂದರು.

ಶಿಷ್ಯರೆಲ್ಲ.. ಗುರುಗಳಿಗೆ ಅಡ್ಡ ಬಿದ್ದರು. ಮಹರ್ಷಿಗಳು ಹರ್ಷದಿ ಆಶೀರ್‍ವಾದಿಸಿದರು.

ಅಲ್ಲಿಗೆ ಅಂದಿನ ಉಪದೇಶಾಮೃತ ಮುಕ್ತಾಯಗೊಂಡಿತು. ಗುರುಗಳು ಧ್ಯಾನಸಕ್ತರಾದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...