Home / ಲೇಖನ / ಇತರೆ / ಮೂರು ಕತೆ

ಮೂರು ಕತೆ

ಒಮ್ಮೆ- ರಮಣಮಹರ್ಷಿಗಳು ತಮ್ಮ ಶಿಷ್ಯರಿಗೆ ಉಪದೇಶ ನೀಡುತ್ತಿದ್ದರು. ಉಪದೇಶದ ಮಧ್ಯೆ ಒಂದು ಪ್ರಶ್ನೆ ಎತ್ತಿದರು. ‘ಜೀವನದಲ್ಲಿ ಮೂರು ಸೂತ್ರಗಳ್ಯಾವುವು?’ ಎಂದು ಅಲ್ಲಿದ್ದ ಶಿಷ್ಯರೆಲ್ಲರನ್ನೂ ಕೇಳುತ್ತಾ ಹೋದರು.

ಮೊತ್ತ ಮೊದಲು ಮರುಳ ಸಿದ್ದಯ್ಯ ಸ್ವಾಮಿಗಳದ್ದು- ಸ್ವಾಮಿಗಳ ಜೀವನದಲ್ಲಿ ಮಾತು, ಮಾನ, ಮರ್‍ಯಾದೆ ಎಂಬ ಮೂರು ಮುತ್ತುಗಳು ಒಡೆದು ಹೋಗದಂತೆ ಬಲು ಎಚ್ಚರಿಕೆಯಿಂದ ಬದುಕಬೇಕು…’ ಎಂದ.

“ಜೀವನದಲ್ಲಿ ನಾಲಿಗೆ-ಕಚ್ಛೆ-ಪಂಚೆ ಈ ಮೂರು ಜಾರದಂತೆ ಎಚ್ಚರಿಕೆ ವಹಿಸಬೇಕು. ಈ ಮೂರು ಒಮ್ಮೆ ಜಾರಿದರೆ ಇನ್ನೂ ಫಲವಿಲ್ಲ ಸ್ವಾಮಿಗಳೆ…” ಎಂದ ಮೃತ್ಯುಂಜಯ.

ಅಲ್ಲಿದ್ದ ಸೀನ್ಯ ಎದ್ದು ನಿಂತು ‘ಬಾಲ್ಯ, ಪ್ರೌಢ, ಯೌವ್ವನ ಈ ಮೂರು ಹಂತಗಳು ಹಾಳಾಗದಂತೆ ಬಲು ಎಚ್ಚರಿಕೆಯಿಂದ ಜೋಪಾನ ಮಾಡತಕ್ಕದ್ದು’ ಎಂದ.

ಗೌಡಪ್ಪನ ಸರದಿ ಬಂತು “ಸ್ವಾಮಿ… ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಆಡಬೇಡ, ಕೆಟ್ಟದ್ದನ್ನು ಕೇಳಬೇಡ ಎಂಬ ಮೂರು ಸೂತ್ರ ಪಾಲಿಸಿದರೆ ಯಾವುದೇ ಭಯವಿಲ್ಲ” ಎಂದ.

ವಲಿಯ ಎದ್ದು ನಿಂತ ‘ಸ್ವಾಮಿ… ಬ್ರಹ್ಮ ವಿಷ್ಣು ಮಹೇಶ್ವರರ ನಿತ್ಯ ಮರೆಯಬಾರದು ಅವರೇ ಜೀವನ ಆಧಾರವೆಂದ.’

ಎಲಿವಾಳ ಅವರು ಎದ್ದು ನಿಂತು – ‘ಗುರುಗಳೆ ಜೀವನದಲ್ಲಿ ನಾನು ಎಂಬುದ ಬಿಡಬೇಕು. ನಾವು ಎಂಬುದ ಹಿಡಿಬೇಕು. ಇನ್ನೊಬ್ಬರ ಬಗ್ಗೆ ಅಸಹ್ಯ ಪಡುವುದ ಬಿಡಬೇಕು’ ಎಂದ.

ರಮಣ ಮಹರ್ಷಿಗಳು ಕ್ಷಣ ಮೌನ ವಹಿಸಿ- ‘ಶಿಷ್ಯರೆ… ಮಾನವ ಜನ್ಮ ದೊಡ್ಡದು. ಅದನ್ನು ಸಾರ್ಥಕ ಮಾಡಿಕೊಳ್ಳಬೇಕೆಂದರೆ…. ಮೊದಲು ಸರಳ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಎರಡನೆಯದಾಗಿ ಮೌನವೇ ಆಭರಣ ಎಂಬುದನ್ನು ಪಾಲಿಸಬೇಕು. ದೇವರಿಗೆ ಸದಾ ಶರಣಾಗುವುದು. ಈ ಮೂರು ಸೂತ್ರದಲ್ಲಿ ಏನೆಲ್ಲ ಅಡಗಿದೆ. ಈ ಮೂರು ತತ್ವಗಳ ಪಾಲಿಸುವುದು ಕಡು ಕಷ್ಟ. ಈ ಮೂರು ಸೂತ್ರ ಪಾಲಿಸಿದರೆ ೧೪ ಲೋಕಂಗಳ ಗೆಲ್ಲಬಹುದು…’ ಎಂದರು.

ಶಿಷ್ಯರೆಲ್ಲ.. ಗುರುಗಳಿಗೆ ಅಡ್ಡ ಬಿದ್ದರು. ಮಹರ್ಷಿಗಳು ಹರ್ಷದಿ ಆಶೀರ್‍ವಾದಿಸಿದರು.

ಅಲ್ಲಿಗೆ ಅಂದಿನ ಉಪದೇಶಾಮೃತ ಮುಕ್ತಾಯಗೊಂಡಿತು. ಗುರುಗಳು ಧ್ಯಾನಸಕ್ತರಾದರು.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...