Home / ಲೇಖನ / ಇತರೆ / ಮೂರು ಕತೆ

ಮೂರು ಕತೆ

ಒಮ್ಮೆ- ರಮಣಮಹರ್ಷಿಗಳು ತಮ್ಮ ಶಿಷ್ಯರಿಗೆ ಉಪದೇಶ ನೀಡುತ್ತಿದ್ದರು. ಉಪದೇಶದ ಮಧ್ಯೆ ಒಂದು ಪ್ರಶ್ನೆ ಎತ್ತಿದರು. ‘ಜೀವನದಲ್ಲಿ ಮೂರು ಸೂತ್ರಗಳ್ಯಾವುವು?’ ಎಂದು ಅಲ್ಲಿದ್ದ ಶಿಷ್ಯರೆಲ್ಲರನ್ನೂ ಕೇಳುತ್ತಾ ಹೋದರು.

ಮೊತ್ತ ಮೊದಲು ಮರುಳ ಸಿದ್ದಯ್ಯ ಸ್ವಾಮಿಗಳದ್ದು- ಸ್ವಾಮಿಗಳ ಜೀವನದಲ್ಲಿ ಮಾತು, ಮಾನ, ಮರ್‍ಯಾದೆ ಎಂಬ ಮೂರು ಮುತ್ತುಗಳು ಒಡೆದು ಹೋಗದಂತೆ ಬಲು ಎಚ್ಚರಿಕೆಯಿಂದ ಬದುಕಬೇಕು…’ ಎಂದ.

“ಜೀವನದಲ್ಲಿ ನಾಲಿಗೆ-ಕಚ್ಛೆ-ಪಂಚೆ ಈ ಮೂರು ಜಾರದಂತೆ ಎಚ್ಚರಿಕೆ ವಹಿಸಬೇಕು. ಈ ಮೂರು ಒಮ್ಮೆ ಜಾರಿದರೆ ಇನ್ನೂ ಫಲವಿಲ್ಲ ಸ್ವಾಮಿಗಳೆ…” ಎಂದ ಮೃತ್ಯುಂಜಯ.

ಅಲ್ಲಿದ್ದ ಸೀನ್ಯ ಎದ್ದು ನಿಂತು ‘ಬಾಲ್ಯ, ಪ್ರೌಢ, ಯೌವ್ವನ ಈ ಮೂರು ಹಂತಗಳು ಹಾಳಾಗದಂತೆ ಬಲು ಎಚ್ಚರಿಕೆಯಿಂದ ಜೋಪಾನ ಮಾಡತಕ್ಕದ್ದು’ ಎಂದ.

ಗೌಡಪ್ಪನ ಸರದಿ ಬಂತು “ಸ್ವಾಮಿ… ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಆಡಬೇಡ, ಕೆಟ್ಟದ್ದನ್ನು ಕೇಳಬೇಡ ಎಂಬ ಮೂರು ಸೂತ್ರ ಪಾಲಿಸಿದರೆ ಯಾವುದೇ ಭಯವಿಲ್ಲ” ಎಂದ.

ವಲಿಯ ಎದ್ದು ನಿಂತ ‘ಸ್ವಾಮಿ… ಬ್ರಹ್ಮ ವಿಷ್ಣು ಮಹೇಶ್ವರರ ನಿತ್ಯ ಮರೆಯಬಾರದು ಅವರೇ ಜೀವನ ಆಧಾರವೆಂದ.’

ಎಲಿವಾಳ ಅವರು ಎದ್ದು ನಿಂತು – ‘ಗುರುಗಳೆ ಜೀವನದಲ್ಲಿ ನಾನು ಎಂಬುದ ಬಿಡಬೇಕು. ನಾವು ಎಂಬುದ ಹಿಡಿಬೇಕು. ಇನ್ನೊಬ್ಬರ ಬಗ್ಗೆ ಅಸಹ್ಯ ಪಡುವುದ ಬಿಡಬೇಕು’ ಎಂದ.

ರಮಣ ಮಹರ್ಷಿಗಳು ಕ್ಷಣ ಮೌನ ವಹಿಸಿ- ‘ಶಿಷ್ಯರೆ… ಮಾನವ ಜನ್ಮ ದೊಡ್ಡದು. ಅದನ್ನು ಸಾರ್ಥಕ ಮಾಡಿಕೊಳ್ಳಬೇಕೆಂದರೆ…. ಮೊದಲು ಸರಳ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಎರಡನೆಯದಾಗಿ ಮೌನವೇ ಆಭರಣ ಎಂಬುದನ್ನು ಪಾಲಿಸಬೇಕು. ದೇವರಿಗೆ ಸದಾ ಶರಣಾಗುವುದು. ಈ ಮೂರು ಸೂತ್ರದಲ್ಲಿ ಏನೆಲ್ಲ ಅಡಗಿದೆ. ಈ ಮೂರು ತತ್ವಗಳ ಪಾಲಿಸುವುದು ಕಡು ಕಷ್ಟ. ಈ ಮೂರು ಸೂತ್ರ ಪಾಲಿಸಿದರೆ ೧೪ ಲೋಕಂಗಳ ಗೆಲ್ಲಬಹುದು…’ ಎಂದರು.

ಶಿಷ್ಯರೆಲ್ಲ.. ಗುರುಗಳಿಗೆ ಅಡ್ಡ ಬಿದ್ದರು. ಮಹರ್ಷಿಗಳು ಹರ್ಷದಿ ಆಶೀರ್‍ವಾದಿಸಿದರು.

ಅಲ್ಲಿಗೆ ಅಂದಿನ ಉಪದೇಶಾಮೃತ ಮುಕ್ತಾಯಗೊಂಡಿತು. ಗುರುಗಳು ಧ್ಯಾನಸಕ್ತರಾದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...