Home / ಲೇಖನ / ಇತರೆ / ಕುರ್-ಆನ್ ಕತೆ

ಕುರ್-ಆನ್ ಕತೆ

ಬಹಳಷ್ಟು ಜನರಿಗೆ ಕುರ್-ಆನ್ ಬಗ್ಗೆ ತಿಳಿದಿಲ್ಲ. ಎಲ್ಲರಿಗೆ ತಿಳಿದಿರುವ ಅವಶ್ಯಕತೆ ಏನಿದೆ? ಎಂದು ನೀವೆಲ್ಲ ಕೇಳಬಹುದೇನೋ….

ಹೌದು! ನಮ್ಮ ದೇಶ ಸರ್ವಧರ್ಮಗಳ ಸಮನ್ವಯ ದೇಶ. ಎಲ್ಲ ಧರ್ಮಗಳ ಸಾರ ಒಂದೇ. ಅದು ತಿಳಿದಿದ್ದರೆ ಒಳ್ಳೆಯದಲ್ಲವೇ?

ಲಂಡನ್‌ನ ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಇರುವ ಕುರ್-ಆನ್ ಹಸ್ತಪ್ರತಿಯೊಂದರ ತುಣುಕುಗಳು ಇಡೀ ವಿಶ್ವದಲ್ಲಿರುವ ತೀರಾ ಹಳೆಯ ಕುರ್-ಆನ್ ಹಸ್ತಪತಿಗಳಲ್ಲಿ ಒಂದು ಮೊತ್ತ ಮೊದಲನೆಯದೆಂದು ಜುಲೈ ೨೦೧೫ ರ ತಿಂಗಳಲ್ಲಿ ಸಂಶೋಧಕರು ಸತ್ಯವನ್ನು ಹೊರಗೆಡವಿದ್ದಾರೆ!

ಈ ಹಸ್ತ ಪ್ರತಿಯು ೧೩೭೦ ವರ್ಷಗಳಷ್ಟು ತೀರಾ ಹಳೆಯದಾಗಿದ್ದು ಪ್ರವಾದಿ ಮುಹಮ್ಮದ್ ಅವರ ಕಾಲಕ್ಕೆ ಸಂಪರ್ಕಕ್ಕೆ ತೀರಾ ನಿಕಟ ಸಂಬಂಧವಿದೆಯೆಂದು ಸಂಶೋಧಕರು ಪತ್ತೆ ಹಚ್ಚಿರುವರು. ಇದು ಚರ್‍ಮದ ಹಾಳೆಗಳನ್ನು ಹೊಂದಿದೆ. ಇದನ್ನು ಈಗಾಗಲೇ ಸಂಶೋಧಕರು ರೇಡಿಯೊ ಕಾರ್ಬನ್ ವಿಶ್ಲೇಷಣೆಗೆ ಒಳಪಡಿಸಿರುವರು.

ಹೀಗಾಗಿ ಈ ಹಸ್ತಪ್ರತಿಯು ೫೬೮ ರಿಂದ ೬೪೫ ನೆಯ ಇಸವಿಯಲ್ಲಿ ಸೃಷ್ಠಿಯಾಗಿದೆಯೆಂಬ ಒಮ್ಮತಕ್ಕೆ ಬಂದಿರುವರು.

ಈ ಸಂಶೋಧನೆಯು ನೂರಕ್ಕೆ ನೂರರಷ್ಟು ಖಚಿತವಾದುದ್ದು ನಿಖರವಾದುದ್ದು ಎಂದು ಇವರು ತಿಳಿಸಿರುವರು.

ಕಾರಣ- ಈ ಕುರ್ ಆನ್‌ನಲ್ಲಿ ಯಾವುದೇ ಸೇರ್ಪಡೆ ಬದಲಾವಣೆ ತಿದ್ದುಪಡಿ ಇರುವುದಿಲ್ಲ. ಮುಹಮ್ಮದ್ ಅವರ ದಿವ್ಯ ಸಂದೇಶವನ್ನೊಳಗೊಂಡಿರುವುದರಿಂದ ಇದೊಂದು ಪರಮ ಪವಿತ್ರ ಕುರ್‌ಆನ್ ಎಂದೇ ಖ್ಯಾತವಾಗಿರುವುದು.

ಇದರಲ್ಲಿ ಹಿಜಾಜಿ ಎಂದು ಕರೆಯಲಾಗುವ ಅರೇಬಿಕ್‌ ಆರಂಭಿಕ ಕಾಲದ ಲಿಪಿಯನ್ನು ಈ ಗ್ರಂಥದಲ್ಲಿ ಬಳಸಿರುವುದೊಂದು ವಿಶೇಷವಾಗಿದೆ.

ಇದು- ಬರ್ಮಿಂಗ್ ಹ್ಯಾಮ್ ವಿಶ್ವವಿದ್ಯಾಲಯದ ಮಧ್ಯಪ್ರಾಚ್ಯ ಹಸ್ತಪ್ರತಿ ವಿಭಾಗದಲ್ಲಿ ಈ ಮಹಾ ಕುರ್‌ಆನ್ ಹಸ್ತ ಪ್ರತಿ ಇದೆ. ಇದನ್ನು ಬಲು ಅಮೂಲ್ಯವಾಗಿ ಅಪರೂಪವೆಂಬಂತೆ ಸಂರಕ್ಷಿಸಿ ಇಡಲಾಗಿದೆ.

ಬರ್ಮಿಂಗ್ ಹ್ಯಾಮ್‌ಗೆ ಯಾರೇ ಹೋಗಲಿ ವಿಶೇಷವಾಗಿ ಮುಸ್ಲಿಮ್ ಬಾಂಧವರು ಭೇಟಿ ನೀಡಿದವರೆಲ್ಲ ತಪ್ಪದೆ, ಮರೆಯದೆ, ಅದನ್ನು ವೀಕ್ಷಿಸಿ, ಅದಕ್ಕೆ ನಮಸ್ಕರಿಸಿ ಬರುವರು.

ಇದು ಕುರ್‌-ಆನ್ ಮಹತ್ವವೆಂದರೆ…
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...