Home / ಲೇಖನ / ಇತರೆ / ಕುರ್-ಆನ್ ಕತೆ

ಕುರ್-ಆನ್ ಕತೆ

ಬಹಳಷ್ಟು ಜನರಿಗೆ ಕುರ್-ಆನ್ ಬಗ್ಗೆ ತಿಳಿದಿಲ್ಲ. ಎಲ್ಲರಿಗೆ ತಿಳಿದಿರುವ ಅವಶ್ಯಕತೆ ಏನಿದೆ? ಎಂದು ನೀವೆಲ್ಲ ಕೇಳಬಹುದೇನೋ….

ಹೌದು! ನಮ್ಮ ದೇಶ ಸರ್ವಧರ್ಮಗಳ ಸಮನ್ವಯ ದೇಶ. ಎಲ್ಲ ಧರ್ಮಗಳ ಸಾರ ಒಂದೇ. ಅದು ತಿಳಿದಿದ್ದರೆ ಒಳ್ಳೆಯದಲ್ಲವೇ?

ಲಂಡನ್‌ನ ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಇರುವ ಕುರ್-ಆನ್ ಹಸ್ತಪ್ರತಿಯೊಂದರ ತುಣುಕುಗಳು ಇಡೀ ವಿಶ್ವದಲ್ಲಿರುವ ತೀರಾ ಹಳೆಯ ಕುರ್-ಆನ್ ಹಸ್ತಪತಿಗಳಲ್ಲಿ ಒಂದು ಮೊತ್ತ ಮೊದಲನೆಯದೆಂದು ಜುಲೈ ೨೦೧೫ ರ ತಿಂಗಳಲ್ಲಿ ಸಂಶೋಧಕರು ಸತ್ಯವನ್ನು ಹೊರಗೆಡವಿದ್ದಾರೆ!

ಈ ಹಸ್ತ ಪ್ರತಿಯು ೧೩೭೦ ವರ್ಷಗಳಷ್ಟು ತೀರಾ ಹಳೆಯದಾಗಿದ್ದು ಪ್ರವಾದಿ ಮುಹಮ್ಮದ್ ಅವರ ಕಾಲಕ್ಕೆ ಸಂಪರ್ಕಕ್ಕೆ ತೀರಾ ನಿಕಟ ಸಂಬಂಧವಿದೆಯೆಂದು ಸಂಶೋಧಕರು ಪತ್ತೆ ಹಚ್ಚಿರುವರು. ಇದು ಚರ್‍ಮದ ಹಾಳೆಗಳನ್ನು ಹೊಂದಿದೆ. ಇದನ್ನು ಈಗಾಗಲೇ ಸಂಶೋಧಕರು ರೇಡಿಯೊ ಕಾರ್ಬನ್ ವಿಶ್ಲೇಷಣೆಗೆ ಒಳಪಡಿಸಿರುವರು.

ಹೀಗಾಗಿ ಈ ಹಸ್ತಪ್ರತಿಯು ೫೬೮ ರಿಂದ ೬೪೫ ನೆಯ ಇಸವಿಯಲ್ಲಿ ಸೃಷ್ಠಿಯಾಗಿದೆಯೆಂಬ ಒಮ್ಮತಕ್ಕೆ ಬಂದಿರುವರು.

ಈ ಸಂಶೋಧನೆಯು ನೂರಕ್ಕೆ ನೂರರಷ್ಟು ಖಚಿತವಾದುದ್ದು ನಿಖರವಾದುದ್ದು ಎಂದು ಇವರು ತಿಳಿಸಿರುವರು.

ಕಾರಣ- ಈ ಕುರ್ ಆನ್‌ನಲ್ಲಿ ಯಾವುದೇ ಸೇರ್ಪಡೆ ಬದಲಾವಣೆ ತಿದ್ದುಪಡಿ ಇರುವುದಿಲ್ಲ. ಮುಹಮ್ಮದ್ ಅವರ ದಿವ್ಯ ಸಂದೇಶವನ್ನೊಳಗೊಂಡಿರುವುದರಿಂದ ಇದೊಂದು ಪರಮ ಪವಿತ್ರ ಕುರ್‌ಆನ್ ಎಂದೇ ಖ್ಯಾತವಾಗಿರುವುದು.

ಇದರಲ್ಲಿ ಹಿಜಾಜಿ ಎಂದು ಕರೆಯಲಾಗುವ ಅರೇಬಿಕ್‌ ಆರಂಭಿಕ ಕಾಲದ ಲಿಪಿಯನ್ನು ಈ ಗ್ರಂಥದಲ್ಲಿ ಬಳಸಿರುವುದೊಂದು ವಿಶೇಷವಾಗಿದೆ.

ಇದು- ಬರ್ಮಿಂಗ್ ಹ್ಯಾಮ್ ವಿಶ್ವವಿದ್ಯಾಲಯದ ಮಧ್ಯಪ್ರಾಚ್ಯ ಹಸ್ತಪ್ರತಿ ವಿಭಾಗದಲ್ಲಿ ಈ ಮಹಾ ಕುರ್‌ಆನ್ ಹಸ್ತ ಪ್ರತಿ ಇದೆ. ಇದನ್ನು ಬಲು ಅಮೂಲ್ಯವಾಗಿ ಅಪರೂಪವೆಂಬಂತೆ ಸಂರಕ್ಷಿಸಿ ಇಡಲಾಗಿದೆ.

ಬರ್ಮಿಂಗ್ ಹ್ಯಾಮ್‌ಗೆ ಯಾರೇ ಹೋಗಲಿ ವಿಶೇಷವಾಗಿ ಮುಸ್ಲಿಮ್ ಬಾಂಧವರು ಭೇಟಿ ನೀಡಿದವರೆಲ್ಲ ತಪ್ಪದೆ, ಮರೆಯದೆ, ಅದನ್ನು ವೀಕ್ಷಿಸಿ, ಅದಕ್ಕೆ ನಮಸ್ಕರಿಸಿ ಬರುವರು.

ಇದು ಕುರ್‌-ಆನ್ ಮಹತ್ವವೆಂದರೆ…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...