Home / ಲೇಖನ / ಇತರೆ / ಚಿಪ್ಪು ಹಂದಿ ಕತೆ

ಚಿಪ್ಪು ಹಂದಿ ಕತೆ

ದಿನಾಂಕ ೦೩-೦೮-೨೦೧೫ ರಂದು ಕರ್ನಾಟಕದ ಭಾರತೀನಗರದ ಹತ್ತಿರ ತೊರೆಚಾಕನ ಹಳ್ಳಿಯಲ್ಲಿ ಜನಜಂಗುಳಿ ಸೇರಿತ್ತು! ಜನಾನೇ ಹಾಗೆ ದನಗಳ ಹಾಗೆ…

ಬೆಳ್ಳಂಬೆಳಿಗ್ಗೆ ಎಷ್ಟೊಂದು ಜನವೋ ಜನ! ಕಾರಣ ಹಂದಿಯೊಂದು ಕಾಡಿನಿಂದ ನಾಡಿಗೆ ಬಂದು ಬಿಟ್ಟಿದೆ. ಜನ ಮುಗಿಬಿದ್ದು ನೋಡತೊಡಗಿದ್ದರು!

ಹೌದು! ಎಲ್ಲರೂ ಊರ ಹಂದಿ ನೋಡಿದ್ದರು. ಅಪರೂಪಕ್ಕೆ ಕಾಡು ಹಂದಿ ನೋಡಿದವರುಂಟು. ಇನ್ನು ಮುಳ್ಳು ಹಂದಿಯಂತೂ ಕಂಡಿರುವ ಜನರೂ ಕಡಿಮೆ. ಅದರಲ್ಲಿಯೂ ಚಿಪ್ಪು ಹಂದಿಯನ್ನು ಕಂಡವರು ವಿರಳ.

ಅಂದು- ಮಹದೇವು ಎಂಬುವರ ಮನೆಗೆ ಚಿಪ್ಪು ಹಂದಿ ನುಗ್ಗಿತ್ತು ಹಜಾರದಲ್ಲಿ ಬಂದಿತ್ತು. ಮನೆಯವರೇನು… ಎಲ್ಲರೂ ಗಾಬರಿ ಬಿದ್ದು ಓಡಿದರು!

ಅಲ್ಲೇ ಒಬ್ಬ ವ್ಯಕ್ತಿ ಪಂಜರ ತಂದು ಚಿಪ್ಪು ಹಂದಿಯನ್ನು ಸುರಕ್ಷಿತವಾಗಿ ಬಂಧಿಸಿದ. ಎಲ್ಲರೂ ಶಹಭಾಶ್‌ ಎಂದರು. ನಿಟ್ಟೂಸಿರು ಬಿಟ್ಟರು. ಅರಣ್ಯ ಇಲಾಖೆಗೆ ಮಾಹಿತಿ ಹೋಯಿತು. ಮೊಬೈಲ್ ಇರುವುದು ಅನುಕೂಲವಾಯಿತು!

ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿತು. ಜನರಿಗೆ ಧೈರ್ಯ ಹೇಳಿದರು. “ಚಿಪ್ಪು ಹಂದಿ ಈ ಭಾಗದಲ್ಲಿ ಇದೇ ಮೊದಲ ಭಾರಿಗೆ ಕಾಣಿಸಿಕೊಂಡಿದೆ. ಇದು ಮನುಷ್ಯರಿಗೆ ತೊಂದರೆ ಮಾಡದ ಪ್ರಾಣಿ. ಇದು ಇರುವೆ, ಕೀಟಗಳು, ಶೇಂಗಾ, ಗಡ್ಡೆಗೆಣಸು, ಕಂದ ಮೂಲಗಳ ತಿಂದು ನೀರು ಕುಡಿಯುವುದು, ಆಹಾರ ನೀರು ಅರಿಸಿ ನಾಡಿಗೆ ಆಕಸ್ಮಿಕವಾಗಿ ಹಾದಿ ತಪ್ಪಿ ಬಂದಿದೆಯೆಂದು ಹೇಳಿದರಲ್ಲದೆ, ಅಲ್ಲೇ ಪಕ್ಕದೂರಾದ ಅಂತರ ಹಳ್ಳಿಯ ಗುಡ್ಡಕ್ಕೆ ಅದನ್ನು ಸುರಕ್ಷಿತವಾಗಿ ಬಿಟ್ಟು ಬಂದರು.

ಶಾಲಾ ಮಕ್ಕಳಿಗೆ, ಊರು ಕೇರಿ ಜನರಿಗೆ ಚಿಪ್ಪು ಹಂದಿ ಗಾತ್ರ ಅದರ ಕಣ್ಣು ಬಣ್ಣ ಆಕಾರ ವಿಶೇಷವಾಗಿ ಚಿಪ್ಪಿನಿಂದ ಕೂಡಿದ ಶರೀರ ಕಂಡು ವಿಸ್ಮಯಗೊಂಡರು. ಜನರೇ ಹಾಗೆ ಎಂದೂ ನೋಡದವರ ಹಾಗೆ…

ಹೌದು! ಶತ್ರುಗಳಿಂದ ರಕ್ಷಿಸಿಕೊಳ್ಳಲು ಅದಕ್ಕೆ ಚಿಪ್ಪು ವರವಾಗಿದೆ. ಏಕೆಂದರೆ ಚಿಪ್ಪು ಮಿರಮಿರ ಮಿಂಚುತ್ತಿದ್ದು ನೋಡಲು ಸೋಜಿಗವೆನಿಸುವುದು. ಇಲ್ಲಿನ ಜನರ ನಾಲಿಗೆ ಮೇಲೆ ಎರಡು ಮೂರು ದಿನ ಚಿಪ್ಪು ಹಂದಿ ನಲಿನಲಿದು ಹೋಯಿತು! ಚಿಪ್ಪು ಹಂದಿಯ ಅದೃಷ್ಟವೋ… ಜನರ ಅದೃಷ್ಟವೋ… ಅಂತೂ ಇಂತೂ ಕಾಲ ಜಿಗಿಯಿತು!
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...