Home / ಲೇಖನ / ಇತರೆ / ಸನ್ಯಾಸಿ ಕತೆ

ಸನ್ಯಾಸಿ ಕತೆ

ಬೆಂಗಳೂರೆಂಬ ದೊಡ್ಡ ಪಟ್ಟಣದಲ್ಲಿ ಬಲು ದೊಡ್ಡ ಮಠವಿತ್ತು. ಒಂದು ದಿನ ಒಬ್ಬ ಸನ್ಯಾಸಿ ಮಠದೊಳಕ್ಕೆ ಐದಾರು ಶಿಷ್ಯರೊಂದಿಗೆ ಗೂಳಿ ನುಗ್ಗಿದಂತೆ ನುಗ್ಗಿ ಬಂದ, ಮಠದಲ್ಲಿದ್ದವರೆಲ್ಲ ಗಾಬರಿಯಾದರು.

“ಸ್ವಾಮಿಗಳೆ ತಾವು ಯಾರು? ನಿಮಗ್ಯಾರು ಬೇಕಾಗಿತ್ತು? ನಿಮಗೇನಾಗ ಬೇಕಾಗಿತ್ತು?” ಎಂದು ಮಠದ ಮರಿಸ್ವಾಮಿಗಳೆಲ್ಲ ಆ ಸನ್ಯಾಸಿಯನ್ನು ವಿಜ್ಞಾಪಿಸಿದರು.

“ನಾನೊಬ್ಬ ದೇವದೂತ. ನಿಮಗೇನು ಬೇಕೆಂದು ಕೇಳಿಕೊಳ್ಳಿರಿ. ನನಗೇನು ಬೇಕಾಗಿಲ್ಲ. ನಿಮ್ಮ ಹಿರಿಸ್ವಾಮಿಯನ್ನು ನನ್ನಲ್ಲಿಗೆ ಕರೆದುಕೊಂಡು ಬನ್ನಿ” ಎಂದು ಸನ್ಯಾಸಿ ಅಲ್ಲಿದ್ದವರನ್ನೆಲ್ಲ ಜೋರು ಜೋರು ಮಾಡಿದ.

ಮಠದ ಮರಿಸ್ವಾಮಿಗಳೆಲ್ಲ ಒಳಗೆ ಓಡಿದರು. ಹಿರಿಸ್ವಾಮಿಗಳಿಗೆ ಸುದ್ದಿ ಮುಟ್ಟಿಸಿದರು. ಹಿರಿಸ್ವಾಮಿಗಳು ಗಾಬರಿ ಬಿದ್ದರು.

ಹಿರಿಸ್ವಾಮಿಗಳು ಏಳಲಾರದೆ ಬೇಗ ಎದ್ದು ಅವಸರದಿ ಸನ್ಯಾಸಿ ಬಳಿಗೆ ಬಂದರು. “ಸ್ವಾಮಿಗಳೆ ತಮ್ಮ ಹೆಸರು, ಊರು, ಯಾವ ಮಠದವರು ? ತಮಗೆ ನಮ್ಮಿಂದೇನಾಗಬೇಕು?” ಎಂದು ಕೇಳಿದರು.

“ನನ್ನ ಹೆಸರು ಮೃತ್ಯುವೆಂದು. ಎಲ್ಲರೂ ಭಯಭಕ್ತಿಯಿಂದ ಮೃತ್ಯುಂಜಯ ಮಹಾಸ್ವಾಮಿಗಳೆಂದು ಕರೆಯುವರು. ನಮ್ಮದು ಬಲು ಎತ್ತರದ ಊರು! ಉತ್ತರ ಭಾರತದ ಹಿಮಾಲಯದ ತಪ್ಪಲಿನಿಂದ ಬಂದವರು! ಸಿದ್ಧಿ ಪ್ರಸಿದ್ಧಿ ಸಾಧಕರು! ನಿಮಗೇನಾದರು ಬೇಕಿದ್ದರೆ ಹೇಳಿ. ನಿಮ್ಮಿಂದ ನಮಗೆ ಪೂಜಾ ಏರ್ಪಾಡು, ಉಳಿಯಲು ವಾರದ ಮಟ್ಟಿಗೆ ವಸತಿ, ಪ್ರಸಾದದ ವ್ಯವಸ್ಥೆಯಾಗಬೇಕೆಂದು” ಜೋರು ಮಾಡಿದರು.

ಇದೇನು ಸ್ವಾಮಿಗಳೆ ನಿಮ್ಮದೇ ಮಠವೇನೋ ಶಾಖ ಮಠವೆಂಬಂತೆ ನಮ್ಮನ್ನು ನಿಮ್ಮ ಕಿರಿಸ್ವಾಮಿ ಎಂಬಂತೇ ಜೋರು ಜೋರು… ಮಾಡುತ್ತಿರುವಿರಲ್ಲಾ? ಇದೇನು ತೋಟದಪ್ಪನ ಪುಣ್ಯ ಛತ್ರವೆಂದು ತಿಳಿದಿರೇನು? ನೀವ್ಯಾರೋ… ನಮಗೇ ತಿಳಿಯದು ದಯಮಾಡಿ ಮುಂದೆ ಹೋಗಿ” ಎಂದು ಹಿರಿಸ್ವಾಮಿಗಳು ಅಂದರು.

“ನಿಮಗೆ ನಮ್ಮ ಮಹಿಮೆ ತಿಳಿಯದು. ದೇವರು ನಿಮಗೆ ನೀಡಿದ್ದನ್ನು ನಮ್ಮಂಥಾ ಸನ್ಯಾಸಿಗೆ ನೀಡುವುದರಲ್ಲಿ ತಪ್ಪಿಲ್ಲವಲ್ಲಾ? ಎಲ್ಲ ದೇವರ ಕೊಡುಗೆಯಲ್ಲವೇ? ಹೀಗಾಗಿ ಈ ಮಠದ ಮೇಲೆ ನನಗೂ ಹಕ್ಕಿದೆ. ಪಾಲಿದೆ” ಎಂದ ಸನ್ಯಾಸಿ.

“ನಿಮ್ಮಂಥ ಸನ್ಯಾಸಿಗಳು ನಿತ್ಯ ನೂರಾರು ಜನ ಬಂದು ಹೋಗುವರು ನಿಮ್ಮ ರೀತಿ ವರ್ತಿಸಿದ್ದು ನಾ ಕಾಣೆ. ನೀವ್ಯಾರೋ ಕೆಟ್ಟ, ಕಪಟ ಸ್ವಾಮಿ ಇರಬೇಕು” ಎಂದ ಮಠದ ಹಿರಿಯ ಸ್ವಾಮಿ.

“ಏ ನೀ ನನ್ನ ಅನುಮಾನಿಸುತ್ತೀಯಾ? ನನ್ನ ವೇಷಭೂಷಣ ಶಿಷ್ಯರ ನೋಡಿದರೆ ನಿನಗೆ ಜ್ಞಾನೋದಯವಾಗಬೇಕಾಗಿತ್ತು!! ಆದರೆ ನಿನಗೆ ನೂರಾರು ವರ್ಷ ವಯಸ್ಸಾಗಿದೆ. ಬುದ್ಧಿ ಬಲಿತಿಲ್ಲ” ಎಂದ ಸನ್ಯಾಸಿ.

“ನಾವು ಇಲ್ಲಿ ಈ ಮಠದಲ್ಲಿ ೫೦ ವರ್ಷದಿಂದ ಇದ್ದೇವೆ! ನಮಗೆ ತಿಳಿದಿದೆ ಯಾರು ನಿಜದ ಸ್ವಾಮಿಗಳೆಂದು… ಬರಿಯ ಕಾವಿ ತೊಟ್ಟರೆ ಕಾಮ ಹೋಗುವುದಿಲ್ಲ! ಕರ್ಮ ಕಳೆದುಕೊಂಡು ನಮ್ಮಲ್ಲಿಗೆ ಬಾ… ಹೋಗು” ಎಂದ ಹಿರಿಸ್ವಾಮಿ.

“ನನ್ನ ಏಕವಚನದಲ್ಲಿ ಮಾತನಾಡಿಸುತ್ತೀಯಾ? ನೀನು ನರಕಕ್ಕೆ ಹೋಗುವೆ ಪಾಪಿ! ನಿನಗೆ ಜಾತಿಯ ಮದ, ಅಧಿಕಾರದ ಹಮ್ಮು, ಜನಬಲದ ಸೊಕ್ಕು ಹಣದ ದುರಂಕಾರ, ಜಾಸ್ತಿಯಾಗಿದೆ ನಾನಿನ್ನು ಬರುತ್ತೇನೆ” ಎಂದು ಹೊರಡಲನುವಾದ.

ಹಿರಿಸ್ವಾಮಿಗಳು ಸುಮ್ಮನೆ ಬಿಟ್ಟಾರೆಯೇ?

“ಏ ಇವನನ್ನು ಹಿಡಿಯಿರಿ ಮಠದಿಂದ ಎಳೆಯಿರಿ ನಾಲ್ಕು ಭಾರಿಸಿ…” ಎಂದು ಕೂಗಿಯೇ ಬಿಟ್ಟರು. ಶಿಷ್ಯರಿಗೆ ಇಷ್ಟೇ ಸಾಕಾಯಿತು!

ಅಲ್ಲಿದ್ದ ಇವರ ಶಿಷ್ಯರೆಲ್ಲ ಮೃತ್ಯುಂಜಯ ಸ್ವಾಮಿಯನ್ನು ಮುತ್ತಿದರು. ಮಠದಿಂದ ಹೊರಗೆ ಎಳೆದರು. ಚೆನ್ನಾಗಿ ಬಿಸಿ ಮುಟ್ಟಿಸಿದರು. ಇನ್ನೆಂದೂ ಮಠದತ್ತ ಇಣಕಿ ನೋಡದಂತೆ ಮಾಡಿದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...