Home / ಲೇಖನ / ಇತರೆ / ತಬ್ಬಲಿ ಚೀನಾದ ಕತೆ

ತಬ್ಬಲಿ ಚೀನಾದ ಕತೆ

ಚೀನಾ ದೇಶ ನಮ್ಮ ಭವ್ಯ ಭಾರತದ ಮೇಲೆ ಮೇಲಿಂದಮೇಲೆ ಕಾಲು ಕೆದರಿ ಜಗಳ ತೆಗೆಯುತ್ತಿದೆ. “ಮಾರಿ ಕಣ್ಣು ಹೋರಿ ಮೇಲೆ” – ಎನ್ನುವಂತೆ ಚೀನಾದ ಕಣ್ಣು ನಮ್ಮ ಭವ್ಯ ಭಾರತದ ಮೇಲೆ.

ಚೀನಾ ದೇಶ ತನ್ನ ಮನೆಯನ್ನು ತಾನು ಸರಿಮಾಡಿಕೊಂಡು ಉನ್ನತಿ ಸಾಧಿಸಲು ಸಾಧ್ಯವಾಗುತ್ತಿಲ್ಲ! ದಿನದಿಂದ ದಿನಕ್ಕೆ ತಬ್ಬಲಿ ಚೀನಾವಾಗುತ್ತಿದೆ. ತಳ ಸೋರುವ ಮಡಿಕೆ ಕುಡಿಕೆಯಾಗುತ್ತಿದೆ.

ಇತ್ತೀಚಿನ ೨೦೧೫ರ ಅಂಕಿ ಅಂಶಗಳ ಪ್ರಕಾರ ಚೀನಾದಲ್ಲಿ ಉದ್ಯೋಗದ ಬೆನ್ನು ಹತ್ತಿದ ತಂದೆತಾಯಿ ಅಜ್ಜ‌ಅಜ್ಜಿಯರಿಂದ ತಬ್ಬಲಿಗೊಳಗಾದ ಸುಮಾರು ೬.೧ ಕೋಟಿ ಕೋಟಿ ಮಕ್ಕಳು ಚೀನಾದ ಗ್ರಾಮೀಣ ಭಾಗಗಳಲ್ಲಿದ್ದಾರೆಂಬಾ ಆಘಾತಕಾರಿ ಸುದ್ದಿಯೊಂದು ಸ್ಫೋಟಗೊಂಡಿದೆ.

ಇನ್ನೊಂದು ಧಾರುಣವಾದ ಸಂಗತಿಯೆಂದರೆ… ನೈರುತ್ಯ ಚೀನಾದ ತಬ್ಬಲಿ ಗ್ರಾಮವೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ! ಅಲ್ಲಿ ೧೩೨ ತಬ್ಬಲಿಯಾದ ಸಣ್ಣ ಪುಟ್ಟ ಕಂದಮ್ಮಗಳಿದ್ದಾರೆ!

ಹೆತ್ತ ಹೊತ್ತ ಅಪ್ಪ ಅಮ್ಮ ಸಂಬಂಧಿಕರಿಲ್ಲದೆ, ಈ ತಬ್ಬಲಿಗಳು ಲೈಂಗಿಕ ವೃತ್ತಿಗೆ ಬಳಕೆಯಾಗುವ ಅಪಾಯಗಳು ತೀರಾ ಹೆಚ್ಚು ಎಂದು ಆತಂಕಕಾರಿ ಸುದ್ದಿಯನ್ನು ಸ್ಥಳೀಯ ಪತ್ರಿಕೆಯಾದ “ಪೀಪಲ್ಸ್ ಡೈಲಿ”ಯು ಅಲ್ಲಿ ಬಹಿರಂಗ ಪಡಿಸಿರುವುದು.

ಅಲ್ಲಿ ವಿಶೇಷವಾಗಿ ಚೀನಾದ ಕೇಂದ್ರ ಭಾಗದಲ್ಲೇ ಇರುವ ಹುನಾನ್ ಪ್ರಾಂತ್ಯದ ಹುವಾಂಗ್ ಜಿಂಗ್ ಗ್ರಾಮ ವ್ಯಾಪ್ತಿಯ ಶಾವೊಯಾಂಗ್ ಕೌಂಟಿ ಎಂಬ ಗ್ರಾಮದಲ್ಲಿರುವ ೧೩೨ ತಬ್ಬಲಿ ಮಕ್ಕಳ ಕಥೆ ಅರಣ್ಯ ರೋದನವಾಗಿದೆ!! ಇದನ್ನು ತಬ್ಬಲಿ ಗ್ರಾಮ ಎಂಬ ಕುಖ್ಯಾತಿಗಳಿಸಿದೆ.

ಇಲ್ಲಿನ ೧೩೨ ಮಕ್ಕಳಲ್ಲಿ ೧೧೬ ಮಕ್ಕಳು ತಾಯಂದಿರನ್ನು ಕಳೆದುಕೊಂಡಿದ್ದಾರೆ. ಮರು ಮದುವೆ, ಮನೆ ಬಿಟ್ಟು ಓಡಿ ಹೋದವರು, ಮೃತ ಪಟ್ಟಿರುವುದು… ಕೆಲಸದಲ್ಲಿರುವುದು ಇತ್ಯಾದಿ ಕಾರಣಗಳೆಂದು ವರದಿಯು ಖಚಿತಪಡಿಸಿದೆ.

ಇಡೀ ವಿಶ್ವದಲ್ಲೇ ತೀರಾ ಬೃಹತ್ ಆರ್ಥಿಕ, ಸಮಾಜಿಕ, ರಾಜಕೀಯ ಶಕ್ತಿಯೆನಿಸಿರುವ ಬೃಹತ್ ರಾಷ್ಟ್ರ ಚೀನಾದಲ್ಲಿ ಈಗಾಗಲೇ ಸುಮಾರು ೨೬ ಕೋಟಿ ಕೋಟಿ ವಲಸೆ ಕೂಲಿ ಕಾರ್ಮಿಕರಿರುವರೆಂದು ಅಲ್ಲಿನ ಘನ ಸರ್ಕಾರ ೨೦೧೪ ರ ಸಾಲಿನಲ್ಲಿ ಅಧಿಕೃತವಾಗಿ ಅಂಕಿ ಅಂಶ ಹೊರಗೆಡವಿದೆ.

ಇಲ್ಲಿನ ಬಲು ವಿಚಿತ್ರವಾದ ಸಮಸ್ಯೆಯೆಂದರೆ, ತನ್ನಮ್ಮ ತನ್ನಪ್ಪ ಹೇಗಿದ್ದರೆಂದು ಯಾವ ಮಕ್ಕಳಿಗೂ ನೆನಪಿಲ್ಲ. ಭಾವನಾತ್ಮಕ ನಂಟಿನ ಅಂಟು ಅಲ್ಲಿಲ್ಲದೆ ವಿಲಿವಿಲಿ ಒದ್ದಾಡುತ್ತಿರುವರೆಂಬ ಸತ್ಯ ಸಂಗತಿಯನ್ನು ಸ್ಥಳೀಯ ಪತ್ರಿಕೆ ಆತಂಕ ವ್ಯಕ್ತಪಡಿಸಿದೆ.

ಇದೇ ನಗರದಲ್ಲಿ ಕೆಲಸ ಅರಸಿ ತನ್ನ ನಾಲ್ಕು ಮಕ್ಕಳನ್ನು ತೊರೆದು ಗ್ಯುಜೋವ್ ಪ್ರಾಂತ್ಯದ ತಾಯಿಯೊಬ್ಬಳು ಹೋದಾಗ ದಿಕ್ಕು ತೋಚದೆ ಇವರೆಲ್ಲ ಏಕಕಾಲಕ್ಕೆ ಜುಲೈ ತಿಂಗಳು ೨೦೧೫ ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ.

ಇಂಥಾ ದುಃಸ್ಥಿತಿ ಭವ್ಯ ಭಾರತಕ್ಕೆ ಎಂದೂ ಭಾರದಿರಲಿ ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...