Home / ಲೇಖನ / ಇತರೆ / ತಬ್ಬಲಿ ಚೀನಾದ ಕತೆ

ತಬ್ಬಲಿ ಚೀನಾದ ಕತೆ

ಚೀನಾ ದೇಶ ನಮ್ಮ ಭವ್ಯ ಭಾರತದ ಮೇಲೆ ಮೇಲಿಂದಮೇಲೆ ಕಾಲು ಕೆದರಿ ಜಗಳ ತೆಗೆಯುತ್ತಿದೆ. “ಮಾರಿ ಕಣ್ಣು ಹೋರಿ ಮೇಲೆ” – ಎನ್ನುವಂತೆ ಚೀನಾದ ಕಣ್ಣು ನಮ್ಮ ಭವ್ಯ ಭಾರತದ ಮೇಲೆ.

ಚೀನಾ ದೇಶ ತನ್ನ ಮನೆಯನ್ನು ತಾನು ಸರಿಮಾಡಿಕೊಂಡು ಉನ್ನತಿ ಸಾಧಿಸಲು ಸಾಧ್ಯವಾಗುತ್ತಿಲ್ಲ! ದಿನದಿಂದ ದಿನಕ್ಕೆ ತಬ್ಬಲಿ ಚೀನಾವಾಗುತ್ತಿದೆ. ತಳ ಸೋರುವ ಮಡಿಕೆ ಕುಡಿಕೆಯಾಗುತ್ತಿದೆ.

ಇತ್ತೀಚಿನ ೨೦೧೫ರ ಅಂಕಿ ಅಂಶಗಳ ಪ್ರಕಾರ ಚೀನಾದಲ್ಲಿ ಉದ್ಯೋಗದ ಬೆನ್ನು ಹತ್ತಿದ ತಂದೆತಾಯಿ ಅಜ್ಜ‌ಅಜ್ಜಿಯರಿಂದ ತಬ್ಬಲಿಗೊಳಗಾದ ಸುಮಾರು ೬.೧ ಕೋಟಿ ಕೋಟಿ ಮಕ್ಕಳು ಚೀನಾದ ಗ್ರಾಮೀಣ ಭಾಗಗಳಲ್ಲಿದ್ದಾರೆಂಬಾ ಆಘಾತಕಾರಿ ಸುದ್ದಿಯೊಂದು ಸ್ಫೋಟಗೊಂಡಿದೆ.

ಇನ್ನೊಂದು ಧಾರುಣವಾದ ಸಂಗತಿಯೆಂದರೆ… ನೈರುತ್ಯ ಚೀನಾದ ತಬ್ಬಲಿ ಗ್ರಾಮವೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ! ಅಲ್ಲಿ ೧೩೨ ತಬ್ಬಲಿಯಾದ ಸಣ್ಣ ಪುಟ್ಟ ಕಂದಮ್ಮಗಳಿದ್ದಾರೆ!

ಹೆತ್ತ ಹೊತ್ತ ಅಪ್ಪ ಅಮ್ಮ ಸಂಬಂಧಿಕರಿಲ್ಲದೆ, ಈ ತಬ್ಬಲಿಗಳು ಲೈಂಗಿಕ ವೃತ್ತಿಗೆ ಬಳಕೆಯಾಗುವ ಅಪಾಯಗಳು ತೀರಾ ಹೆಚ್ಚು ಎಂದು ಆತಂಕಕಾರಿ ಸುದ್ದಿಯನ್ನು ಸ್ಥಳೀಯ ಪತ್ರಿಕೆಯಾದ “ಪೀಪಲ್ಸ್ ಡೈಲಿ”ಯು ಅಲ್ಲಿ ಬಹಿರಂಗ ಪಡಿಸಿರುವುದು.

ಅಲ್ಲಿ ವಿಶೇಷವಾಗಿ ಚೀನಾದ ಕೇಂದ್ರ ಭಾಗದಲ್ಲೇ ಇರುವ ಹುನಾನ್ ಪ್ರಾಂತ್ಯದ ಹುವಾಂಗ್ ಜಿಂಗ್ ಗ್ರಾಮ ವ್ಯಾಪ್ತಿಯ ಶಾವೊಯಾಂಗ್ ಕೌಂಟಿ ಎಂಬ ಗ್ರಾಮದಲ್ಲಿರುವ ೧೩೨ ತಬ್ಬಲಿ ಮಕ್ಕಳ ಕಥೆ ಅರಣ್ಯ ರೋದನವಾಗಿದೆ!! ಇದನ್ನು ತಬ್ಬಲಿ ಗ್ರಾಮ ಎಂಬ ಕುಖ್ಯಾತಿಗಳಿಸಿದೆ.

ಇಲ್ಲಿನ ೧೩೨ ಮಕ್ಕಳಲ್ಲಿ ೧೧೬ ಮಕ್ಕಳು ತಾಯಂದಿರನ್ನು ಕಳೆದುಕೊಂಡಿದ್ದಾರೆ. ಮರು ಮದುವೆ, ಮನೆ ಬಿಟ್ಟು ಓಡಿ ಹೋದವರು, ಮೃತ ಪಟ್ಟಿರುವುದು… ಕೆಲಸದಲ್ಲಿರುವುದು ಇತ್ಯಾದಿ ಕಾರಣಗಳೆಂದು ವರದಿಯು ಖಚಿತಪಡಿಸಿದೆ.

ಇಡೀ ವಿಶ್ವದಲ್ಲೇ ತೀರಾ ಬೃಹತ್ ಆರ್ಥಿಕ, ಸಮಾಜಿಕ, ರಾಜಕೀಯ ಶಕ್ತಿಯೆನಿಸಿರುವ ಬೃಹತ್ ರಾಷ್ಟ್ರ ಚೀನಾದಲ್ಲಿ ಈಗಾಗಲೇ ಸುಮಾರು ೨೬ ಕೋಟಿ ಕೋಟಿ ವಲಸೆ ಕೂಲಿ ಕಾರ್ಮಿಕರಿರುವರೆಂದು ಅಲ್ಲಿನ ಘನ ಸರ್ಕಾರ ೨೦೧೪ ರ ಸಾಲಿನಲ್ಲಿ ಅಧಿಕೃತವಾಗಿ ಅಂಕಿ ಅಂಶ ಹೊರಗೆಡವಿದೆ.

ಇಲ್ಲಿನ ಬಲು ವಿಚಿತ್ರವಾದ ಸಮಸ್ಯೆಯೆಂದರೆ, ತನ್ನಮ್ಮ ತನ್ನಪ್ಪ ಹೇಗಿದ್ದರೆಂದು ಯಾವ ಮಕ್ಕಳಿಗೂ ನೆನಪಿಲ್ಲ. ಭಾವನಾತ್ಮಕ ನಂಟಿನ ಅಂಟು ಅಲ್ಲಿಲ್ಲದೆ ವಿಲಿವಿಲಿ ಒದ್ದಾಡುತ್ತಿರುವರೆಂಬ ಸತ್ಯ ಸಂಗತಿಯನ್ನು ಸ್ಥಳೀಯ ಪತ್ರಿಕೆ ಆತಂಕ ವ್ಯಕ್ತಪಡಿಸಿದೆ.

ಇದೇ ನಗರದಲ್ಲಿ ಕೆಲಸ ಅರಸಿ ತನ್ನ ನಾಲ್ಕು ಮಕ್ಕಳನ್ನು ತೊರೆದು ಗ್ಯುಜೋವ್ ಪ್ರಾಂತ್ಯದ ತಾಯಿಯೊಬ್ಬಳು ಹೋದಾಗ ದಿಕ್ಕು ತೋಚದೆ ಇವರೆಲ್ಲ ಏಕಕಾಲಕ್ಕೆ ಜುಲೈ ತಿಂಗಳು ೨೦೧೫ ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ.

ಇಂಥಾ ದುಃಸ್ಥಿತಿ ಭವ್ಯ ಭಾರತಕ್ಕೆ ಎಂದೂ ಭಾರದಿರಲಿ ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...