Home / ಲೇಖನ / ಇತರೆ / ತಬ್ಬಲಿ ಚೀನಾದ ಕತೆ

ತಬ್ಬಲಿ ಚೀನಾದ ಕತೆ

ಚೀನಾ ದೇಶ ನಮ್ಮ ಭವ್ಯ ಭಾರತದ ಮೇಲೆ ಮೇಲಿಂದಮೇಲೆ ಕಾಲು ಕೆದರಿ ಜಗಳ ತೆಗೆಯುತ್ತಿದೆ. “ಮಾರಿ ಕಣ್ಣು ಹೋರಿ ಮೇಲೆ” – ಎನ್ನುವಂತೆ ಚೀನಾದ ಕಣ್ಣು ನಮ್ಮ ಭವ್ಯ ಭಾರತದ ಮೇಲೆ.

ಚೀನಾ ದೇಶ ತನ್ನ ಮನೆಯನ್ನು ತಾನು ಸರಿಮಾಡಿಕೊಂಡು ಉನ್ನತಿ ಸಾಧಿಸಲು ಸಾಧ್ಯವಾಗುತ್ತಿಲ್ಲ! ದಿನದಿಂದ ದಿನಕ್ಕೆ ತಬ್ಬಲಿ ಚೀನಾವಾಗುತ್ತಿದೆ. ತಳ ಸೋರುವ ಮಡಿಕೆ ಕುಡಿಕೆಯಾಗುತ್ತಿದೆ.

ಇತ್ತೀಚಿನ ೨೦೧೫ರ ಅಂಕಿ ಅಂಶಗಳ ಪ್ರಕಾರ ಚೀನಾದಲ್ಲಿ ಉದ್ಯೋಗದ ಬೆನ್ನು ಹತ್ತಿದ ತಂದೆತಾಯಿ ಅಜ್ಜ‌ಅಜ್ಜಿಯರಿಂದ ತಬ್ಬಲಿಗೊಳಗಾದ ಸುಮಾರು ೬.೧ ಕೋಟಿ ಕೋಟಿ ಮಕ್ಕಳು ಚೀನಾದ ಗ್ರಾಮೀಣ ಭಾಗಗಳಲ್ಲಿದ್ದಾರೆಂಬಾ ಆಘಾತಕಾರಿ ಸುದ್ದಿಯೊಂದು ಸ್ಫೋಟಗೊಂಡಿದೆ.

ಇನ್ನೊಂದು ಧಾರುಣವಾದ ಸಂಗತಿಯೆಂದರೆ… ನೈರುತ್ಯ ಚೀನಾದ ತಬ್ಬಲಿ ಗ್ರಾಮವೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ! ಅಲ್ಲಿ ೧೩೨ ತಬ್ಬಲಿಯಾದ ಸಣ್ಣ ಪುಟ್ಟ ಕಂದಮ್ಮಗಳಿದ್ದಾರೆ!

ಹೆತ್ತ ಹೊತ್ತ ಅಪ್ಪ ಅಮ್ಮ ಸಂಬಂಧಿಕರಿಲ್ಲದೆ, ಈ ತಬ್ಬಲಿಗಳು ಲೈಂಗಿಕ ವೃತ್ತಿಗೆ ಬಳಕೆಯಾಗುವ ಅಪಾಯಗಳು ತೀರಾ ಹೆಚ್ಚು ಎಂದು ಆತಂಕಕಾರಿ ಸುದ್ದಿಯನ್ನು ಸ್ಥಳೀಯ ಪತ್ರಿಕೆಯಾದ “ಪೀಪಲ್ಸ್ ಡೈಲಿ”ಯು ಅಲ್ಲಿ ಬಹಿರಂಗ ಪಡಿಸಿರುವುದು.

ಅಲ್ಲಿ ವಿಶೇಷವಾಗಿ ಚೀನಾದ ಕೇಂದ್ರ ಭಾಗದಲ್ಲೇ ಇರುವ ಹುನಾನ್ ಪ್ರಾಂತ್ಯದ ಹುವಾಂಗ್ ಜಿಂಗ್ ಗ್ರಾಮ ವ್ಯಾಪ್ತಿಯ ಶಾವೊಯಾಂಗ್ ಕೌಂಟಿ ಎಂಬ ಗ್ರಾಮದಲ್ಲಿರುವ ೧೩೨ ತಬ್ಬಲಿ ಮಕ್ಕಳ ಕಥೆ ಅರಣ್ಯ ರೋದನವಾಗಿದೆ!! ಇದನ್ನು ತಬ್ಬಲಿ ಗ್ರಾಮ ಎಂಬ ಕುಖ್ಯಾತಿಗಳಿಸಿದೆ.

ಇಲ್ಲಿನ ೧೩೨ ಮಕ್ಕಳಲ್ಲಿ ೧೧೬ ಮಕ್ಕಳು ತಾಯಂದಿರನ್ನು ಕಳೆದುಕೊಂಡಿದ್ದಾರೆ. ಮರು ಮದುವೆ, ಮನೆ ಬಿಟ್ಟು ಓಡಿ ಹೋದವರು, ಮೃತ ಪಟ್ಟಿರುವುದು… ಕೆಲಸದಲ್ಲಿರುವುದು ಇತ್ಯಾದಿ ಕಾರಣಗಳೆಂದು ವರದಿಯು ಖಚಿತಪಡಿಸಿದೆ.

ಇಡೀ ವಿಶ್ವದಲ್ಲೇ ತೀರಾ ಬೃಹತ್ ಆರ್ಥಿಕ, ಸಮಾಜಿಕ, ರಾಜಕೀಯ ಶಕ್ತಿಯೆನಿಸಿರುವ ಬೃಹತ್ ರಾಷ್ಟ್ರ ಚೀನಾದಲ್ಲಿ ಈಗಾಗಲೇ ಸುಮಾರು ೨೬ ಕೋಟಿ ಕೋಟಿ ವಲಸೆ ಕೂಲಿ ಕಾರ್ಮಿಕರಿರುವರೆಂದು ಅಲ್ಲಿನ ಘನ ಸರ್ಕಾರ ೨೦೧೪ ರ ಸಾಲಿನಲ್ಲಿ ಅಧಿಕೃತವಾಗಿ ಅಂಕಿ ಅಂಶ ಹೊರಗೆಡವಿದೆ.

ಇಲ್ಲಿನ ಬಲು ವಿಚಿತ್ರವಾದ ಸಮಸ್ಯೆಯೆಂದರೆ, ತನ್ನಮ್ಮ ತನ್ನಪ್ಪ ಹೇಗಿದ್ದರೆಂದು ಯಾವ ಮಕ್ಕಳಿಗೂ ನೆನಪಿಲ್ಲ. ಭಾವನಾತ್ಮಕ ನಂಟಿನ ಅಂಟು ಅಲ್ಲಿಲ್ಲದೆ ವಿಲಿವಿಲಿ ಒದ್ದಾಡುತ್ತಿರುವರೆಂಬ ಸತ್ಯ ಸಂಗತಿಯನ್ನು ಸ್ಥಳೀಯ ಪತ್ರಿಕೆ ಆತಂಕ ವ್ಯಕ್ತಪಡಿಸಿದೆ.

ಇದೇ ನಗರದಲ್ಲಿ ಕೆಲಸ ಅರಸಿ ತನ್ನ ನಾಲ್ಕು ಮಕ್ಕಳನ್ನು ತೊರೆದು ಗ್ಯುಜೋವ್ ಪ್ರಾಂತ್ಯದ ತಾಯಿಯೊಬ್ಬಳು ಹೋದಾಗ ದಿಕ್ಕು ತೋಚದೆ ಇವರೆಲ್ಲ ಏಕಕಾಲಕ್ಕೆ ಜುಲೈ ತಿಂಗಳು ೨೦೧೫ ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ.

ಇಂಥಾ ದುಃಸ್ಥಿತಿ ಭವ್ಯ ಭಾರತಕ್ಕೆ ಎಂದೂ ಭಾರದಿರಲಿ ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...