Home / ಲೇಖನ / ಇತರೆ / ೧೮೬೬

೧೮೬೬

ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಹೊಸದೊಂದು ಭಯಂಕರ ಮಾಹಿತಿಯೊಂದನ್ನು ಹೊರಗಡೆವಿದ್ದು ಭವ್ಯ ಭಾರತದಲ್ಲಿಂದು- ಒಟ್ಟು ೧೮೬೬ ನೋಂದಾಯಿತ ರಾಜಕೀಯ ಪಕ್ಷಗಳು ಅಸ್ತಿತ್ವದಲ್ಲಿವೆಂದು ಅಧಿಕೃತವಾಗಿ ಘೋಷಿಸಿರುವುದು.

ಕಳೆದ ವರ್ಷ ೨೦೧೪ ಮಾರ್ಚಿನಿಂದ ೨೦೧೫ರ ಜುಲೈವರೆಗೆ ಹೊಸ ಹೊಸ ೨೩೯ ರಾಜಕೀಯ ಪಕ್ಷಗಳೂ ನೋಂದಣಿ ಮಾಡಿಕೊಳ್ಳುವ ಮೂಲಕ ಒಟ್ಟು ಸಂಖ್ಯೆ ೧೮೬೬ ಕ್ಕೇರಿದೆ!

ಈ ಪೈಕಿ ೫೬ ಪಕ್ಷಗಳು ರಾಷ್ಟ್ರೀಯ ರಾಜ್ಯ ಮಟ್ಟದಲ್ಲಿ ಗುರ್ತಿಸಿಕೊಂಡವುಗಳು. ಆದರೆ ಉಳಿದುವುಗಳು ಮಾನ್ಯತೆ ಪಡೆದಿರದ ಆದರೆ ನೋಂದಾಯಿತ ಪಕ್ಷಗಳು ಎಂದು ಆಯೋಗ ಸ್ಪಷ್ಟಪಡಿಸಿದೆ.

೨೦೧೪ರ ಮಾರ್ಚ್ ೫ ರಂದು ಲೋಕಸಭಾ ಚುನಾವಣೆ ಪ್ರಕಟವಾದ ನಂತರ ೨೬ ಹೊಸ ಪಕ್ಷಗಳು ನೋಂದಣಿ ಮಾಡಿಕೊಳ್ಳುವ ಮೂಲಕ ೧೬೨೭ ನೋಂದಾಯಿತ ರಾಜಕೀಯ ಪಕ್ಷಗಳಾದವು ಎಂದು ಆಯೋಗ ಖಚಿತ ಪಡಿಸಿದೆ.

ಈಗಾಗಲೇ ನೋಂದಣಿಯಾದರೂ ಸಕ್ರಿಯವಲ್ಲದ ಈ ಪಕ್ಷಗಳು ಸ್ವಂತ ಚಿನ್ಹೆಯೊಂದಿಗೆ ಸರ್ಧಿಸುವಂತಿರಲಿಲ್ಲ. ಅಂತಹ ಆಶಯವೂ ಅವುಗಳಿಗಿರಲಿಲ್ಲ. ಹಾಗಾಗಿ ಆಯೋಗ ಬಿಡುಗಡೆ ಮಾಡಿದ ಸ್ವತಂತ್ರ ಚಿಹ್ನೆಯ ಪಟ್ಟಿಯಿಂದ ಯಾವುದಾದರೊಂದನ್ನು ಆಯ್ದುಕೊಂಡು ಅವು ಸ್ಪರ್ಧಿಸಬೇಕಿತ್ತು. ಆಯೋಗದಲ್ಲಿ ಅಂತಹ ೮೪ ಚಿನ್ಹೆಗಳು ಲಭ್ಯ ಎಂದೂ ಕುತೂಹಲಕಾರಿ ಅಂಶವನ್ನು ಚುನಾವಣಾ ಆಯೋಗ ವಿವರಿಸಿದೆ.

ಚಪ್ಪಲಿಗಳು, ಬಲೂನ್, ಕಪಾಟ, ಹವಾನಿಯಂತ್ರಕ, ತೆಂಗಿನಕಾಯಿ, ಕಿಟಕಿ, ನೆಲಹಾಸು, ಬಾಟಲಿ, ಬ್ರೆಡ್… ಇವೆಲ್ಲ ಆಯೋಗವು ಬಿಡುಗಡೆ ಮಾಡಿರುವ ಈ ಉಚಿತ ಚಿಹ್ನೆಗಳ ಪಟ್ಟಿಯಲ್ಲಿ ಕೆಲವಾಗಿರುತ್ತವೆಂದು ತಿಳಿಸಿರುವರು.

ರಾಜಕೀಯ ಪಕ್ಷವೊಂದು ರಾಜ್ಯ ಇಲ್ಲವೇ ರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ತಾನು “ಮಾನ್ಯತೆ ಪಡೆದ” ಎಂದು ಗುರ್ತಿಸಿ ಕೊಳ್ಳಬೇಕಾದರೆ ಆಯೋಗವೇ ನಿಗದಿಪಡಿಸಿದ ಕೆಲವು ಮಾನದಂಡಗಳಿವೆ! ಸತತ ಐದು ವರ್ಷಗಳ ಕಾಲ ಅದು ಚಟುವಟಿಕೆಗಳಿಂದ ಕೂಡಿರಬೇಕು. ಇಲ್ಲವೇ ಚುನಾವಣೆಯಲ್ಲಿ ಯಾವುದೇ ವಿಧಾನಸಭಾ- ಲೋಕಸಭಾ ಕ್ಷೇತ್ರದಲ್ಲಿ ಚಲಾವಣೆಗೊಂಡ ಒಟ್ಟು ಮತಗಳಲ್ಲಿ ಕನಿಷ್ಠ ಶೇಕಡ ೪% ರಷ್ಟಾದರೂ ಮತಗಳನ್ನು ಗಳಿಸಲೇಬೇಕು.

ಈ ತನಕ ಬಿಜೆಪಿ – ಬಿ‌ಎಸ್‌ಪಿ- ಕಾಂಗ್ರೆಸ್, ಸಿಪಿ‌ಐ, ಸಿಪಿ‌ಎಂ, ಎನ್‌ಸಿಪಿಗಳು ರಾಷ್ಟ್ರೀಯ ಪಕ್ಷಗಳೆಂದು ಗುರ್ತಿಸಿಕೊಂಡಿದೆ. ಆದರೆ ದೇಶದಲ್ಲಿ ಒಟ್ಟು ೫೦ ಮಾನ್ಯತೆ ಪಡೆದ ಪಕ್ಷಗಳಿವೆಯೆಂದು ಚುನಾವಣೆ ಆಯೋಗವು ಖಚಿತಪಡಿಸಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...