Home / ಲೇಖನ / ಇತರೆ / ೧೮೬೬

೧೮೬೬

ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಹೊಸದೊಂದು ಭಯಂಕರ ಮಾಹಿತಿಯೊಂದನ್ನು ಹೊರಗಡೆವಿದ್ದು ಭವ್ಯ ಭಾರತದಲ್ಲಿಂದು- ಒಟ್ಟು ೧೮೬೬ ನೋಂದಾಯಿತ ರಾಜಕೀಯ ಪಕ್ಷಗಳು ಅಸ್ತಿತ್ವದಲ್ಲಿವೆಂದು ಅಧಿಕೃತವಾಗಿ ಘೋಷಿಸಿರುವುದು.

ಕಳೆದ ವರ್ಷ ೨೦೧೪ ಮಾರ್ಚಿನಿಂದ ೨೦೧೫ರ ಜುಲೈವರೆಗೆ ಹೊಸ ಹೊಸ ೨೩೯ ರಾಜಕೀಯ ಪಕ್ಷಗಳೂ ನೋಂದಣಿ ಮಾಡಿಕೊಳ್ಳುವ ಮೂಲಕ ಒಟ್ಟು ಸಂಖ್ಯೆ ೧೮೬೬ ಕ್ಕೇರಿದೆ!

ಈ ಪೈಕಿ ೫೬ ಪಕ್ಷಗಳು ರಾಷ್ಟ್ರೀಯ ರಾಜ್ಯ ಮಟ್ಟದಲ್ಲಿ ಗುರ್ತಿಸಿಕೊಂಡವುಗಳು. ಆದರೆ ಉಳಿದುವುಗಳು ಮಾನ್ಯತೆ ಪಡೆದಿರದ ಆದರೆ ನೋಂದಾಯಿತ ಪಕ್ಷಗಳು ಎಂದು ಆಯೋಗ ಸ್ಪಷ್ಟಪಡಿಸಿದೆ.

೨೦೧೪ರ ಮಾರ್ಚ್ ೫ ರಂದು ಲೋಕಸಭಾ ಚುನಾವಣೆ ಪ್ರಕಟವಾದ ನಂತರ ೨೬ ಹೊಸ ಪಕ್ಷಗಳು ನೋಂದಣಿ ಮಾಡಿಕೊಳ್ಳುವ ಮೂಲಕ ೧೬೨೭ ನೋಂದಾಯಿತ ರಾಜಕೀಯ ಪಕ್ಷಗಳಾದವು ಎಂದು ಆಯೋಗ ಖಚಿತ ಪಡಿಸಿದೆ.

ಈಗಾಗಲೇ ನೋಂದಣಿಯಾದರೂ ಸಕ್ರಿಯವಲ್ಲದ ಈ ಪಕ್ಷಗಳು ಸ್ವಂತ ಚಿನ್ಹೆಯೊಂದಿಗೆ ಸರ್ಧಿಸುವಂತಿರಲಿಲ್ಲ. ಅಂತಹ ಆಶಯವೂ ಅವುಗಳಿಗಿರಲಿಲ್ಲ. ಹಾಗಾಗಿ ಆಯೋಗ ಬಿಡುಗಡೆ ಮಾಡಿದ ಸ್ವತಂತ್ರ ಚಿಹ್ನೆಯ ಪಟ್ಟಿಯಿಂದ ಯಾವುದಾದರೊಂದನ್ನು ಆಯ್ದುಕೊಂಡು ಅವು ಸ್ಪರ್ಧಿಸಬೇಕಿತ್ತು. ಆಯೋಗದಲ್ಲಿ ಅಂತಹ ೮೪ ಚಿನ್ಹೆಗಳು ಲಭ್ಯ ಎಂದೂ ಕುತೂಹಲಕಾರಿ ಅಂಶವನ್ನು ಚುನಾವಣಾ ಆಯೋಗ ವಿವರಿಸಿದೆ.

ಚಪ್ಪಲಿಗಳು, ಬಲೂನ್, ಕಪಾಟ, ಹವಾನಿಯಂತ್ರಕ, ತೆಂಗಿನಕಾಯಿ, ಕಿಟಕಿ, ನೆಲಹಾಸು, ಬಾಟಲಿ, ಬ್ರೆಡ್… ಇವೆಲ್ಲ ಆಯೋಗವು ಬಿಡುಗಡೆ ಮಾಡಿರುವ ಈ ಉಚಿತ ಚಿಹ್ನೆಗಳ ಪಟ್ಟಿಯಲ್ಲಿ ಕೆಲವಾಗಿರುತ್ತವೆಂದು ತಿಳಿಸಿರುವರು.

ರಾಜಕೀಯ ಪಕ್ಷವೊಂದು ರಾಜ್ಯ ಇಲ್ಲವೇ ರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ತಾನು “ಮಾನ್ಯತೆ ಪಡೆದ” ಎಂದು ಗುರ್ತಿಸಿ ಕೊಳ್ಳಬೇಕಾದರೆ ಆಯೋಗವೇ ನಿಗದಿಪಡಿಸಿದ ಕೆಲವು ಮಾನದಂಡಗಳಿವೆ! ಸತತ ಐದು ವರ್ಷಗಳ ಕಾಲ ಅದು ಚಟುವಟಿಕೆಗಳಿಂದ ಕೂಡಿರಬೇಕು. ಇಲ್ಲವೇ ಚುನಾವಣೆಯಲ್ಲಿ ಯಾವುದೇ ವಿಧಾನಸಭಾ- ಲೋಕಸಭಾ ಕ್ಷೇತ್ರದಲ್ಲಿ ಚಲಾವಣೆಗೊಂಡ ಒಟ್ಟು ಮತಗಳಲ್ಲಿ ಕನಿಷ್ಠ ಶೇಕಡ ೪% ರಷ್ಟಾದರೂ ಮತಗಳನ್ನು ಗಳಿಸಲೇಬೇಕು.

ಈ ತನಕ ಬಿಜೆಪಿ – ಬಿ‌ಎಸ್‌ಪಿ- ಕಾಂಗ್ರೆಸ್, ಸಿಪಿ‌ಐ, ಸಿಪಿ‌ಎಂ, ಎನ್‌ಸಿಪಿಗಳು ರಾಷ್ಟ್ರೀಯ ಪಕ್ಷಗಳೆಂದು ಗುರ್ತಿಸಿಕೊಂಡಿದೆ. ಆದರೆ ದೇಶದಲ್ಲಿ ಒಟ್ಟು ೫೦ ಮಾನ್ಯತೆ ಪಡೆದ ಪಕ್ಷಗಳಿವೆಯೆಂದು ಚುನಾವಣೆ ಆಯೋಗವು ಖಚಿತಪಡಿಸಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...