Home / ಲೇಖನ / ಇತರೆ / ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ.

ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿ‌ಆರ್‌ಡಿ‌ಒದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಾಜಿ ಮುಖ್ಯ ನಿಯಂತ್ರಕ ಡಾ| ಎ. ಶಿವಥಾನು ಪಿಳ್ಳೆ ಅವರಿಗೆ ಗೀತಂ ಪ್ರತಿಷ್ಠಾನದ ಪ್ರಶಸ್ತಿ ಲಭಿಸಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಮೂಲದ ಗೀತಂ ವಿಶ್ವವಿದ್ಯಾಲಯದ ೩೫ ನೆಯ ಸಂಸ್ಥಾಪನಾ ದಿನಾಚರಣೆಯು ಆಗಸ್ಟ್ ೦೮, ೨೦೧೫ರಂದು ಶನಿವಾರದ ದಿನದಂದು ಜರುಗಿದ್ದು ಅವರಿಗೆ ಕರೆಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿರುವರು.

“ಇದು ವಿಜ್ಞಾನಕ್ಕೆ ಸಂದ ಗೌರವವೆಂದು” ಅವರು ಹೆಮ್ಮೆಯಿಂದ ನುಡಿದಿರುವರು! ಜ್ಞಾನಿಗಳು ವಿಜ್ಞಾನಿಗಳು ಅಂದರೆ ಯಾವಾಗಲೂ ಹೀಗಿರುವರು!

ಬ್ರಹ್ಮಸ್ ಏರೋಸ್ಪೇಸ್ ಸಂಸ್ಥೆಯ ಸಿ‌ಇ‌ಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಡಾ|| ಎ. ಶಿವಥಾನು ಪಿಳ್ಳೈ ಅವರ ನಾಯಕತ್ವ ಅನನ್ಯವಾಗಿತ್ತು ಎಂದು ವಿವಿಯ ಕುಲಪತಿ ಪ್ರೊ | ಜಿ. ಸುಬ್ರಮಣ್ಯಂ. ಹೇಳಿರುವರು…

ಬ್ರಹ್ಮೋಸ್ ಕ್ಷಿಪಣಿಗಳು ಭವ್ಯ ಭಾರತೀಯ ಸೇವಾ ಪಡೆಗೆ ಸೇರ್ಪಡೆಯಾಗಿವೆ. ಡಾ|| ಎ. ಶಿವಥಾನುಪಿಳ್ಳೈ ಅವರು ಈಗ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಗೆ ಸಂದರ್ಶಕ ಪ್ರೊಫೆಸರ್ ಆಗಿ ಉತ್ತಮ ಸೇವೆ ಸಲ್ಲಿಸುತ್ತಿರುವರು. ಇಷ್ಟೇ ಅಲ್ಲದೆ ಶ್ರೀಯುತರು ಹರಿಯಾಣದ ಕುರುಕ್ಷೇತ್ರದ ಎನ್‌ಐಟಿಯ ಹಾಲಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವರು.

ಮುದ್ದು ಮಕ್ಕಳೆ… ಡಾ|| ಎ. ಶಿವಥಾನು ಪಿಳ್ಳೈ ಅವರು ನಿಮಗೆಲ್ಲ ಸ್ಫೂರ್ತಿಯ ಸೆಲೆಯಾಗಲಿ ಎಂದು ಇವರ ಬಗ್ಗೆ ಇಷ್ಟನ್ನು ದಾಖಲಿಸಿದ್ದೇನೆ. ಏನೆಲ್ಲ ಸಮಸ್ಯೆ ಬಡತನ ಕಷ್ಟ ಕಾರ್ಪಣ್ಯಗಳ ದಾಟಿಕೊಂಡು ಈವತ್ತು ಇವರ ಸಾಧನೆ ಎಲ್ಲರಿಗೆ ಮಾರ್ಗದರ್ಶನವಾಗಿದೆ.

ಈವತ್ತು ನೀವೆಲ್ಲ ಮನಸ್ಸು ಮಾಡಿ, ನಾವೂ ಏನಾದರೊಂದು ಸಾಧಿಸಿ ತೋರಿಸುತ್ತೇವೆಂದು ಶಪಥ ಮಾಡುತ್ತೀರಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...