Home / ಲೇಖನ / ಇತರೆ / ರ್‍ಯೂಹೈ ಕತೆ

ರ್‍ಯೂಹೈ ಕತೆ

ರ್‍ಯೂಹೈ ಎಂದರೆ… ಚೀನಾ ಭಾಷೆ, ವಿಷಕಾರಿ, ರಾಸಾಯನಿಕ ಹಾಗೂ ಸ್ಫೋಟಕ ಸಾಮಾಗ್ರಿಗಳ ಬೃಹತ್ ಸಂಗ್ರಹವಿದ್ದ ಗೋದಾಮು ಎಂದು ಅರ್ಥ.

ದಿನಾಂಕ ೧೨-೦೮-೧೫ ರ ರಾತ್ರಿ ೧೧.೨೦ ಸುಮಾರಿಗೆ ಈ ರ್‍ಯುಹೈನಲ್ಲಿ ಭಾರೀ ಅನರ್ಥ ಸಂಭವಿಸಿದೆ. ಅಲ್ಲಿ ಅವಳಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಗೋದಾಮಿನ ಕಟ್ಟಡ ಛಿದ್ರವಿಚಿದ್ರವಾಗಿದೆ.

ಈ ಸ್ಫೋಟದಿಂದ ಸಿಡಿದ ಬೆಂಕಿಯ ತುಣುಕುಗಳಿಂದ ಸುತ್ತಮುತ್ತಲಿನ ಕಟ್ಟಡ ಹಾಗೂ ಗೋದಾಮುಗಳಿಗೂ ಬೆಂಕಿ ಹತ್ತಿಕೊಂಡಿದೆ.

ಇಲ್ಲಿ ಇನ್ನೊಂದು ದುರಂತವನ್ನು ಹೇಳಲೇಬೇಕು! ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ದಳದ ೨೧ ಮಂದಿ ಬೆಂಕಿಗೆ ಆಹುತಿಯಾಗಿರುವರು.

ಇದು ಉತ್ತರ ಚೀನಾದ ಪ್ರಮುಖ ಬಂದರು ಪಟ್ಟಣ ಟೈನ್‌ಜಿನ್‌ನ ಪ್ರದೇಶವಾಗಿದ್ದು ಈವರೆಗೆ ೫೦ ಮಂದಿ ಮೃತರಾಗಿರುವರು.

ಈ ಸರಣಿ ಸ್ಫೋಟದಲ್ಲಿ ೭೦೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅದರಲ್ಲಿ ೭೧ ಗಾಯಾಳುಗಳ ಸ್ಥಿತಿ-ಗತಿ ತುಂಬಾ ಗಂಭೀರವಾಗಿದೆ.

ಈ ದುರಂತದಲ್ಲಿ ಇನ್ನೊಂದು ದುರಂತವೆಂದರೆ… ಸುಮಾರು ೨೧ ಮಂದಿ ಈಗಾಗಲೇ ನಾಪತ್ತೆಯಾಗಿರುವರು.

ಅಬ್ಬಾ! ಸುರಕ್ಷತೆಯ ತೀವ್ರ ದೃಷ್ಠಿಯಿಂದ ಸ್ಫೋಟದ ಸ್ಥಳದಿಂದ ಸುಮಾರು ೧೦,೦೦೦ ಕ್ಕೂ ಹೆಚ್ಚು ಜನರನ್ನು ತೆರವು ಮಾಡಲಾಗಿದೆಂದು ಅಲ್ಲಿನ ಅಧಿಕಾರಿಗಳು ಈಗಾಗಲೇ ದೃಢಪಡಿಸಿರುವರು.

ಈ ಘಟನಾ ಸ್ಥಳದಲ್ಲಿ ಮತ್ತಷ್ಟು ಜನರು ಅಪಾಯಕ್ಕೆ ಸಿಲುಕಿರುವ ಸಾಧ್ಯತೆಗಳಿವೆಯೆಂದೂ ಇನ್ನೂ ಸಾವು ನೋವಿನ ಸಂಖ್ಯೆ ದುಪ್ಪಟ್ಟಾಗುವ ಎಲ್ಲ ಅವಕಾಶಗಳು ಹೆಚ್ಚಿವೆಯೆಂದೂ ಇದು ಬೃಹತ್ ಚೀನಾದಲ್ಲಿನ ಈವರೆಗಿನ ಬಹು ದೊಡ್ಡ ಕೈಗಾರಿಕಾ ಅವಘಡವಾಗಿಯೆಂದೂ ಚೀನಾದ ರಕ್ಷಣಾ ಕಾರ್ಯಕರ್ತರು ತೀವ್ರ ಶಂಕೆ ವ್ಯಕ್ತಪಡಿಸಿರುವರು!

ಮುದ್ದು ಮಕ್ಕಳೆ. ಈವತ್ತು ನಾವೆಲ್ಲ ಭಾರಿ ಭಾರೀ ಮುಂದುವರೆದಿದ್ದೇವೆಂದು ಭ್ರಮಿಸಿದ್ದೇವೆ. ಅಪಾಯ-ದುರಂತ ಸಂಭವಿಸಿದಾಗ ಅದರಿಂದ ಪಾರಾಗಲು ಇನ್ನು ಸಾಧ್ಯವಾಗುತ್ತಿಲ್ಲವೆಂಬುದನ್ನು ನಮ್ಮ ಜನರು ಅರ್ಥ ಮಾಡಿಕೊಳ್ಳಬೇಕು. ಗರ್ವ ಪಡಲು ಇಲ್ಲಿ ಅಂಥಾ ಸಾಧನೆಯಾಗಿಲ್ಲವೆಂಬುದನ್ನು ಅರಿತು ವಿನಯದಿಂದ ಬಾಳಿದರೆ ಜೀವನ ಸಾರ್ಥಕವಾಗುವುದು ಅಲ್ಲವೇ??
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...