Home / ಲೇಖನ / ಇತರೆ / ರ್‍ಯೂಹೈ ಕತೆ

ರ್‍ಯೂಹೈ ಕತೆ

ರ್‍ಯೂಹೈ ಎಂದರೆ… ಚೀನಾ ಭಾಷೆ, ವಿಷಕಾರಿ, ರಾಸಾಯನಿಕ ಹಾಗೂ ಸ್ಫೋಟಕ ಸಾಮಾಗ್ರಿಗಳ ಬೃಹತ್ ಸಂಗ್ರಹವಿದ್ದ ಗೋದಾಮು ಎಂದು ಅರ್ಥ.

ದಿನಾಂಕ ೧೨-೦೮-೧೫ ರ ರಾತ್ರಿ ೧೧.೨೦ ಸುಮಾರಿಗೆ ಈ ರ್‍ಯುಹೈನಲ್ಲಿ ಭಾರೀ ಅನರ್ಥ ಸಂಭವಿಸಿದೆ. ಅಲ್ಲಿ ಅವಳಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಗೋದಾಮಿನ ಕಟ್ಟಡ ಛಿದ್ರವಿಚಿದ್ರವಾಗಿದೆ.

ಈ ಸ್ಫೋಟದಿಂದ ಸಿಡಿದ ಬೆಂಕಿಯ ತುಣುಕುಗಳಿಂದ ಸುತ್ತಮುತ್ತಲಿನ ಕಟ್ಟಡ ಹಾಗೂ ಗೋದಾಮುಗಳಿಗೂ ಬೆಂಕಿ ಹತ್ತಿಕೊಂಡಿದೆ.

ಇಲ್ಲಿ ಇನ್ನೊಂದು ದುರಂತವನ್ನು ಹೇಳಲೇಬೇಕು! ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ದಳದ ೨೧ ಮಂದಿ ಬೆಂಕಿಗೆ ಆಹುತಿಯಾಗಿರುವರು.

ಇದು ಉತ್ತರ ಚೀನಾದ ಪ್ರಮುಖ ಬಂದರು ಪಟ್ಟಣ ಟೈನ್‌ಜಿನ್‌ನ ಪ್ರದೇಶವಾಗಿದ್ದು ಈವರೆಗೆ ೫೦ ಮಂದಿ ಮೃತರಾಗಿರುವರು.

ಈ ಸರಣಿ ಸ್ಫೋಟದಲ್ಲಿ ೭೦೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅದರಲ್ಲಿ ೭೧ ಗಾಯಾಳುಗಳ ಸ್ಥಿತಿ-ಗತಿ ತುಂಬಾ ಗಂಭೀರವಾಗಿದೆ.

ಈ ದುರಂತದಲ್ಲಿ ಇನ್ನೊಂದು ದುರಂತವೆಂದರೆ… ಸುಮಾರು ೨೧ ಮಂದಿ ಈಗಾಗಲೇ ನಾಪತ್ತೆಯಾಗಿರುವರು.

ಅಬ್ಬಾ! ಸುರಕ್ಷತೆಯ ತೀವ್ರ ದೃಷ್ಠಿಯಿಂದ ಸ್ಫೋಟದ ಸ್ಥಳದಿಂದ ಸುಮಾರು ೧೦,೦೦೦ ಕ್ಕೂ ಹೆಚ್ಚು ಜನರನ್ನು ತೆರವು ಮಾಡಲಾಗಿದೆಂದು ಅಲ್ಲಿನ ಅಧಿಕಾರಿಗಳು ಈಗಾಗಲೇ ದೃಢಪಡಿಸಿರುವರು.

ಈ ಘಟನಾ ಸ್ಥಳದಲ್ಲಿ ಮತ್ತಷ್ಟು ಜನರು ಅಪಾಯಕ್ಕೆ ಸಿಲುಕಿರುವ ಸಾಧ್ಯತೆಗಳಿವೆಯೆಂದೂ ಇನ್ನೂ ಸಾವು ನೋವಿನ ಸಂಖ್ಯೆ ದುಪ್ಪಟ್ಟಾಗುವ ಎಲ್ಲ ಅವಕಾಶಗಳು ಹೆಚ್ಚಿವೆಯೆಂದೂ ಇದು ಬೃಹತ್ ಚೀನಾದಲ್ಲಿನ ಈವರೆಗಿನ ಬಹು ದೊಡ್ಡ ಕೈಗಾರಿಕಾ ಅವಘಡವಾಗಿಯೆಂದೂ ಚೀನಾದ ರಕ್ಷಣಾ ಕಾರ್ಯಕರ್ತರು ತೀವ್ರ ಶಂಕೆ ವ್ಯಕ್ತಪಡಿಸಿರುವರು!

ಮುದ್ದು ಮಕ್ಕಳೆ. ಈವತ್ತು ನಾವೆಲ್ಲ ಭಾರಿ ಭಾರೀ ಮುಂದುವರೆದಿದ್ದೇವೆಂದು ಭ್ರಮಿಸಿದ್ದೇವೆ. ಅಪಾಯ-ದುರಂತ ಸಂಭವಿಸಿದಾಗ ಅದರಿಂದ ಪಾರಾಗಲು ಇನ್ನು ಸಾಧ್ಯವಾಗುತ್ತಿಲ್ಲವೆಂಬುದನ್ನು ನಮ್ಮ ಜನರು ಅರ್ಥ ಮಾಡಿಕೊಳ್ಳಬೇಕು. ಗರ್ವ ಪಡಲು ಇಲ್ಲಿ ಅಂಥಾ ಸಾಧನೆಯಾಗಿಲ್ಲವೆಂಬುದನ್ನು ಅರಿತು ವಿನಯದಿಂದ ಬಾಳಿದರೆ ಜೀವನ ಸಾರ್ಥಕವಾಗುವುದು ಅಲ್ಲವೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...