Home / ಕವನ / ಕವಿತೆ / ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು?

ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು?

ಇರುವಿಗರಿವೇ ಮರೆವು, ಮರೆವಿಗೆ
ಅರಿವೆ ಇರುವಿನ ಪರಿಯು, ಈ ಪರಿ
ಹರಿವ ಇರುವಿನ ಅರಿವೆ ಹಿಗ್ಗಿನ
ಸಮರಸದ ಬಾಳು!

ಈ ಘನದ ನೆಲೆ ಪಿಂಡಗೊಂಡಿಹ
ಆ ಮಹತ್ತಿನ ಉಂಡೆ ಗರ್ಭೀ-
ಕರಿಸಿ ಮೊಗ್ಗಾಗಿಹುದು ಮನದುನ್ಮನದ ಬಯಲಿನಲಿ ॥೧॥

ಮನದ ಶೂನ್ಯ ಸ್ಥಿತಿಯು ಪೂರ್ಣದ
ವರ್ಣಗಳನಳವಡಿಸಿ ಪ್ರಾಣಕೆ
ಮಂತ್ರಮಾಲೆಯ ತೊಡಿಸಿ ದೇಹಕೆ ರೂಪು-
ಗೊಡುತಿಹುದು|

ಇದು ವಿರಾಟದ ಆಟ ಉತ್ತರ
ವೀರನಾ ಬಯಲಾಟವಲ್ಲವು
ಪ್ರಾಜ್ಞನಿಪ್ಪತ್ತಾರು ಪಕಳೆಯ ಕಮಲದರಳುವಿಕೆ ॥೨॥

ಒಂದರಲಿ ಎಂಟುಂಟು ಇಪ್ಪ-
-ತೇಳನೆಯ ಭೌತಿಕದ ಗಂಟಿನ
ಬಂಧಗಳೆ ಮನದಾಚೆ ಆ ಸಂಬಂಧ
ಪತಿಕರಿಸಿ|

ಮಹದ ಪದದಲಿ ಮನೆಯ ಹೂಡಲು
ಅತ್ತ ಘನವೋ ಇತ್ತ ಘನ ಎ-
-ತ್ತೆತ್ತು ಘನವೆನೆ ನರನ ನಾರಾಯಣತೆ ಮೆರೆಯುವವು ॥೩॥

ಮಾತು ಮಾತಿನ ಹೂತ ಬಯಲಲಿ
ಈ ಪದಾರ್ಥವೆ ಬದುಕು ಮಾಡಿದೆ
ಅದರ ರುಚಿಯನೆ ಹದವಗೊಳಿಸಲು
ಪಾಕ ಮಾಡುತಿವೆ |

ಡಂಭಕದ ಮಾತೇಕೆ ಆಡಂ-
ಬರದ ನಟನೆಯೆ ಬೇಕೆ, ಸಾಕೋ
ಆ ದಿಗಂಬರ ಭಾವ ಶಂಬರನಗರ ಸಂಹರಿಸೆ ॥೪॥

ಮಾತು ಭಾವದ ಕೀಲ, ರೂಪವು
ಸ್ಫುರಣ ಸ್ಫುರಣದ ಶೀಲ, ಛಂದವೊ
ಅಚ್ಚ ಸ್ವಚ್ಛಂದಕ್ಕೆ ಹೊದಿಸಿದ ಮೇಲುದದ
ತಾಲ |

ಮೌನ ಬ್ರಹ್ಮದ ಭಾಲ ಷಟ್ಪದಿ
ಬ್ರಹ್ಮಲಿಪಿ ಬರೆದಿಹುದು, ಅದ ನಿ-
-ರ್ವಚಿಸಲೆಂದೇ ಧ್ವನಿಸುತಿದೆ ಭಾರತಿಯ ಟೇಂಕಾರ ॥೫॥

ಇಳೆಗೆ ಭಾರತ ಮಹಿಮೆ ಅವತರಿ-
-ಸುತ್ತಿರಲು, ಕನ್ನಡದ ಹೊಕ್ಕರ-
-ಣೆಯಲಿ ಘನಸೋಪಾನ ರಚನೆಗೆ ಇಂಬು
ದೊರೆಕೊಳಿಸಿ |

ಸಾವಿರದ ಕೊರಳಿಂದ ಹೊರಟಿದೆ
ತಾನ ತಾನ ವಿತಾನ ಸುಭಗತೆ
ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು ಅರುಳಿನಲಿ ॥೬॥
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...