Home / ಕವನ / ಕವಿತೆ / ಯಾರ ಮೂರ್ತಿ, ಅವರ ಕೀರ್ತಿ?

ಯಾರ ಮೂರ್ತಿ, ಅವರ ಕೀರ್ತಿ?

ಜಾಣ ತನ್ನ ಚಾಣದಿಂದ
ಕಟೆಯುತಿದ್ದ ಕಲ್ಲ!
ಯಾರ ಮೂರ್ತಿ, ಅವರ ಕೀರ್ತಿ…
…………………
ಕಾಣದವನೇ ಕಲ್ಲ? ಕಂಡವನೆ ಬಲ್ಲ!
…………………
ಕನಸು ಮೋಸದ ಸಿಪ್ಪೆ–
ತಿರುಳು?
ಇರಬಹುದು ತಿಪ್ಪೆ!
ಒಟರುಗುಡುತಿದೆ ಕಪ್ಪೆ
‘ಮಳೆ ತಂದ ಮಂತ್ರವೋ ತನ್ನ ಮಾಟ’
ರಾಕ್ಷಸನ ಮಾಲಿಕನು
ಭಕ್ಷ-ಭೋಜ್ಯ.
ನಮಗೆ ಬೇಕಾಗಿಹುದು; ಅನ್ನಛತ್ರ.
ಇದು ಪ್ರಜಾರಾಜ್ಯ.
ಮೇಲೊಂದು ಹುಡುಗಾಟ
ಇಲ್ಲವೇ ಹುಚ್ಚಾಟ
ಅನ್ನದಮಲಿಗೆ ಮುಖ್ಯ ನಿದ್ದೆ ಬೇಕು
ಮ್ಯಾಗ್ಝಿಮಮ್‌ ಗೊರ್ಕೆಯೇ ನಮ್ಮ ಆದರ್ಶ.
ಕನಸಿನಂತಹ ಸತ್ಯ ನಾಟಕವೆ ಇಲ್ಲ
ಎಚ್ಚರವೇ ನಮ್ಮ ರೋಗ

ಇರಬಹುಹು ಔಷಧವು ಅದಕು ಎಲ್ಲೋ
ಬುರುಸುಗಟ್ಟಿದ ಯಾವ ಸೆಗಣಿಯಲ್ಲೋ
ಕ್ರಿಮಿಗೆ ಕ್ರಿಮಿಯೇ ವೈರಿ, ಕ್ರಿಮಿಯೆ ಮಿತ್ರ
ಇದು ಮುಖ್ಯ ಸೂತ್ರ
ಕೆಲಸವಾಯಿತೆ ಪೂರ್ತಿ-ಓ ಜಾಣ-ಮೂರ್ತಿ
ಕೊಳೆ ಇಲ್ಲ ಕಲ್ಲಿಗೆ
ಅದು ಮಣ್ಣ ಬಿರುಸು, ನೀರಿನಿಂದದನು ಒರೆಸು
ಆ ಮೇಲೆ ಕಣ್ಣು ಕೊರೆಸು.
*****

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...