Home / ಕಥೆ / ಜನಪದ / ಅಳಿಯನ ಅರ್ಹತೆ

ಅಳಿಯನ ಅರ್ಹತೆ

ಜೀನಹಂಕನಾದ ಶ್ರೀಮಂತನಿಗೆ ಒಬ್ಬಳೇ ಮಗಳಿದ್ದಳು. ಅವನು ಯುಕ್ತಿಪರಿಯುಕ್ತಿಗಳಿಂದ ಸಾಕಷ್ಟು ಗಳಿಸಿದ್ದನು. ಹಾಗೂ ಜಿಪುಣತನದಿಂದ ಖರ್ಚುಮಾಡಿ ಬೇಕಾದಷ್ಟು ಉಳಿಸಿದ್ದನು. ತಾನು ಸಂಗ್ರಹಿಸಿದ ಆಸ್ತಿಯನ್ನೆಲ್ಲ ಕಾಯ್ದುಕೊಂಡು ಹೋಗಬಲ್ಲ ವರ ಸಿಕ್ಕರೆ, ಅವನನ್ನು ಅಳಿಯತನಕ್ಕೆ ಇಟ್ಟುಕೊಳ್ಳಬೇಕೆಂದು ನಿರ್ಣಯಿಸಿದ್ದನು.

ಅದೆಷ್ಟೋ ಜನ ವರಗಳು ಬಂದು ಬಂದು ಹೋದವು. ಆದರೆ ಶ್ರೀಮಂತ ಮಾವನಿಗೆ ಅವರಾರಲ್ಲಿಯೂ ಅರ್ಹತೆ ಕಂಡುಬರಲಿಲ್ಲ. ಆದರೆ ಬಕ್ಕಣಗಿ ಎಂಬ ಹಳ್ಳಿಯಲ್ಲಿ ಅದೇ ಗೋತ್ರದ ಒಂದು ಮನೆತನವಿತ್ತು. ಅಲ್ಲಿ ಇಬ್ಬರು ಅಣ್ಣತಮ್ಮಂದಿರಿದ್ದರು. ಅವರಿಗಿನ್ನೂ ಮದಿವೆಯಾಗಿರಲಿಲ್ಲ. ಆ ಶ್ರೀಮಂತ ಮನೆತನಕ್ಕೆ ಅಳಿಯನಾಗಿ ನಿಲ್ಲಲು ಅರ್ಹನಾದ ಒಬ್ಬ ವರ ಬೇಕಾಗಿದ್ದಾನೆಂಬ ಸಂಗತಿ ತಿಳಿಯಿತು. ಅವರ ತಂದೆಯು ಮಕ್ಕಳಿಬ್ಬರನ್ನೂ ಕೆರೆದು – “ನೀವಿಬ್ಬರೂ ಹೋಗಿ ನಿಮ್ಮ ನಿಮ್ಮ ಬುದ್ದಿವಂತಿಕೆ ತೋರಿಸಿ, ಇಬ್ಬರಲ್ಲಿ ಒಬ್ಬರು ಅಳಿಯತನಕ್ಕೆ ನಿಂತರೆ ಒಳ್ಳೆಯದಾಗುತ್ತದೆ ಎಂದು ಹೇಳಿದನು.

ತಂದೆಯ ಸೂಚನೆಯಂತೆ ಅವರಿಬ್ಬರೂ ಆ ಶ್ರೀಮಂತನ ಊರಿಗೆ ಹೋಗಿ ಅವನನ್ನು ಭೆಟ್ಟಿಯಾದರು. ಅವನು ಒಬ್ಬೊಬ್ಬರನ್ನು ಪರಭಾರೆ ಕರೆದೊಯ್ದು ಅವರ ಅರ್ಹತೆಯನ್ನು ಪರೀಕ್ಷಿಸತೊಡಗಿದನು.

“ಇದ್ದ ಆಸ್ತಿಯನ್ನು ಉಳಿಸುವುದಕ್ಕೂ ಬೆಳೆಸುವುದಕ್ಕೂ ನೀನಾವ ಬುದ್ಧಿವಂತಿಕೆಯಿಂದ ಸಂಸಾರ ಮಾಡುತ್ತೀ” ಎಂದು ಕೇಳಿದನು.

ಹಿರಿಯವನು ತನ್ನ ಅರ್ಹತೆಯನ್ನು ವಿವರಿಸುತ್ತಾನೆ – “ನನಗೆ ದಿನಕ್ಕೆ ಒಂದು ರೊಟ್ಟಿಯಾದರೆ ಸಾಕು. ಅದನ್ನು ತಿಂದು ತಂಬಿಗೆ ನೀರು ಕುಡಿದು ಒಂದು ದಿನ ಕಳೆಯುತ್ತೇನೆ.” ಆ ಮಾತು ಕೇಳಿ ಶ್ರೀಮಂತನು ಮನಸ್ಸಿನಲ್ಲಿ – ಅಬಬಬಾ ! ಅಂದುಕೊಂಡು – “ಅಡ್ಡಯಿಲ್ಲ, ನಿನ್ನ ತಮ್ಮನನ್ನು ಒಳಗೆ ಕಳಿಸಿಕೊಡು” ಎಂದು ಹಿರಿಯ ವರನಿಗೆ ಹೇಳಿದನು. ಚಿಕ್ಕವನು ಶ್ರೀಮಂತನ ಬಳಿಗೆ ಬರಲು ಆತನಿಗೆ – “ಈ ಆಸ್ತಿಯನ್ನೆಲ್ಲ ನೀನೆಂತು ಕಾಪಾಡಿಕೊಂಡು ಹೋಗಬಲ್ಲೆ ? ಯಾವ ಯುಕ್ತಿಯನ್ನು ಅನುಸರಿಸುವಿ?” ಎಂದು ಕೇಳಿದನು.

ಆತನು ತನ್ನ ಜೀವನ ರೀತಿಯನ್ನು ಹೇಳುತ್ತಾನೆ – “ಒಂದು ದಾರದೆಳೆಗೆ ಒಂದು ರೊಟ್ಟಿ ಕಟ್ಟಿ ಅದನ್ನು ತೂಗಿಬಿಡುವುದು. ಹತ್ತಿರದಲ್ಲಿ ಒಂದು ತಂಬಿಗೆ ಕುಡಿಯುವ ನೀರನ್ನು ತುಂಬಿಟ್ಟುಕೊಳ್ಳುವದು. ಮೊದಲು ನೇತಾಡುವ ರೊಟ್ಟಿಯನ್ನು ಕಣ್ತುಂಬ ನೋಡಿ, ಆ ಬಳಿಕ ತಂಬಿಗೆಯೊಳಗಿನ ನೀರಿನ ಕಡೆಗೆ ಕಣ್ಣು ಹೊರಳಿಸಿದರೆ ತೀರಿತು ನನ್ನ ಊಟ. ತರುವಾಯ ಅಡಿಕೆಹೋಳು ಇದ್ದರೂ ಸರಿ, ಇರದಿದ್ದರೂ ಸರಿ. ಸಾಗಿತು ನಮ್ಮ ಗಾಡಿ.”

ಶ್ರೀಮಂತನು ಚಿಕ್ಕವನ ಅರ್ಹತೆಗೆ ಮೆಚ್ಚಿ, ಆತನನ್ನು ಅಳಿಯತನಕ್ಕೆ ಇಟ್ಟುಕೊಂಡು ಮಗಳನ್ನು ಕೊಟ್ಟು ಮದುವೆ ಮಾಡಿದನು.

ಅಳಿಯನೇ ಶ್ರೀಮಂತ ಆಸ್ತಿಗೆ ಒಡೆಯನಾಗಿ, ಆತನ ಸರಿಯಾದ ಸಂಪತ್ತನ್ನು ಉಪಭೋಗಿಸುತ್ತ ಸುಖದಿಂದ ಕಾಲಕಳೆಯಹತ್ತಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...