Home / ಲೇಖನ / ಇತರೆ / ಧರ್ಮದ ಮಹತ್ವತೆ

ಧರ್ಮದ ಮಹತ್ವತೆ

ನಮ್ಮ ಬಾಳಿನಲ್ಲಿ ಧರ್ಮಕ್ಕೆ ಅತ್ಯಂತ ಮಹತ್ವ ನೀಡಬೇಕು. ಶ್ರೀ ಬಸವಣ್ಣನವರು ಹೇಳಿದ ಹಾಗೆ ‘ದಯವಿಲ್ಲದ ಧರ್ಮದೇವುದಯ್ಯ’ ಎಂದು ತಮ್ಮ ವಚನಗಳಲ್ಲಿ ಕೇಳುತ್ತಾರೆ. ಧರ್ಮ ಎಂದರೆ ನಮಗೆ ಸನ್ಮಾರ್ಗದತ್ತ ನಡೆಸುವುದೇ ಧರ್ಮ ಎನಿಸುತ್ತದೆ. ಹೊರತುಪಡಿಸಿ ಮೂಢ ನಂಬಿಕೆಗಳೆಲ್ಲ ಆಚರಣೆದಲ್ಲಿ ತರುವುದೆಂದರ್ಥವಲ್ಲ. ಜಗತ್ತಿನ ಧರ್ಮಗಳಲ್ಲೆಲ್ಲ ಮಾನವೀಯ ಸಂಬಂಧಗಳನ್ನು ಜೋಡಿಸಿಕೊಂಡಿವೆ. ಎಲ್ಲಿ ಸತ್ಯ, ನ್ಯಾಯ, ಮಾನವೀಯತೆ ಇದೆಯೊ ಅದೇ ಧರ್ಮ. ಎಲ್ಲ ಧರ್ಮಗಳು ವಿನಯವನ್ನು ಕಟ್ಟಿಕೊಡುತ್ತವೆ.

ನಯಸೇನನ ‘ಧರ್ಮಾಮೃತಂ’ ದಲ್ಲಿ ‘ಧರ್ಮವೇ ತಂದೆ, ಧರ್ಮವೇ ಪ್ರಿಯೆ, ಧರ್ಮವೇ ಬಂಧು ವರ್ಗ, ಸದ್ಧರ್ಮವೇ ಮುತ್ತಜ್ಜ, ಉತ್ತಮ ಅಜ್ಜ, ಹೇಗೆ ನೋಡಿದರೂ ಧರ್ಮವೇ ಮುಖ್ಯ ಎಂಬುದಾಗಿ ಸುಖವನ್ನು ಬಯಸುವಾತನು ಪರಿಭಾವಿಸುತ್ತಿರಲಿ’ ಎಂದು ಹೇಳಿದೆ. ಹಾಗೆ ನಾವು ಸದಾ ಸದ್ಧರ್ಮ, ಸದ್ವಿನಯದಲ್ಲಿ ಜೀವನ ಕಳೆಯಲು ಪ್ರಯತ್ನಿಸಬೇಕು.

ಶೃದ್ಧೆ ಆಚರಣೆಯಲ್ಲಿ ಬಾಳುವುದು ಇನ್ನೊಬ್ಬರಿಗೆ ನೋವಾಗದಂತೆ ನೋಡಿಕೊಳ್ಳುವುದು ನಡೆ-ನುಡಿಯಲ್ಲಿ ಏಕಸಾಮ್ಯ ತುಂಬಿಕೊಳ್ಳುವುದು, ಮನುಷ್ಯ ಮನುಷ್ಯರಿಗೆ ಸಹಕರಿಸುವುದು ಧರ್ಮವಾಗುತ್ತದೆ. ಒಬ್ಬರು ಕಷ್ಟಕಾಲದಲ್ಲಿದ್ದಾಗ ಸಹಕರಿಸುವುದು, ದುಃಖದಲ್ಲಿದ್ದದವರಿಗೆ ಸಾಂತ್ವನ ಹೇಳುವುದು, ವಯಸ್ಸಾದವರಿಗೆ ಊರುಗೋಲಾಗಿ ಉಪಕಾರ ಮಾಡುವುದೆಲ್ಲವೂ ಸಹಜ ಧರ್ಮವಾಗುತ್ತದೆ.

ಇವತ್ತು ಲೋಕದಲ್ಲಿ ಕೊಲೆ-ಸುಲಿಗೆ, ಸುಳ್ಳು ಮೋಸ ಸ್ವಾರ್ಥ, ಸ್ವಹಿತಪರ ಆಶ್ವಾಸನೆಗಳು ಮಿತಿಮೀರಿವೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಏನನ್ನಾದರೂ ಮಾಡಲು ಸಿದ್ಧನಾಗಿಹನು, ಅವನು ಧರ್ಮವನ್ನು ಕಡೆಗಣಿಸಿಹನು.

ನಮ್ಮ ಪಾಪ ಕರ್ಮಗಳಿಗೆ ಅಂಕುಶವಾಗಿರಬೇಕಾದುದೇ ಧರ್ಮ ಎನಿಸುತ್ತದೆ. ಜಾತಿ-ಪಂಗಡಗಳ ಸೂತಕದಿಂದ ಮುಕ್ತವಾಗಿ ಪತನದತ್ತ ಜಾರುತ್ತಿರುವ ವ್ಯಕ್ತಿಯನ್ನು ಅಪ್ಪಿ ಸನ್ಮಾರ್ಗಕ್ಕೆ ಎಳೆಸುವುದೇ ಧರ್ಮವಾಗುತ್ತದೆ.

ಗಾಂಧೀಜಿಯವರು ನಮ್ಮಲ್ಲಿರುವ ದೋಷಗಳಿಗೆ ಮುಕ್ತವಾಗಿಸುವ ಕರ್ತವ್ಯಕ್ಕೆ ಧರ್ಮ ಎಂದು ಕರೆದರು. ಯಾರಲ್ಲಿ ಅಂತಃಕರಣ, ಪ್ರೀತಿ, ಅನುಕಂಪ ಇಲ್ಲವೋ ಅವರಲ್ಲಿ ಧರ್ಮವೆಂಬುದು ಕನ್ನಡಿಯೊಳಗಿನ ಗಂಟು ಎಂದು ಹೇಳಬಹುದು.

ನಮ್ಮ ಪೂರ್ವಜರು ಈ ಲೋಕದಲ್ಲಿ ಎಲ್ಲರೂ ನೆಮ್ಮದಿಯಿಂದ ಬಾಳಲೆಂದೇ ಈ ಧರ್ಮವೆಂಬ ಕಟ್ಟುಪಾಡು ನಮಗೆ ಹಾಕಿದರು. ಎಲ್ಲ ಧರ್ಮಗಳು ಸಮಾನತೆ ಮತ್ತು ಸತ್ಯವನ್ನೇ ಸಾರಿವೆ. ಅಂಥ ಧರ್ಮವೇ ನಮ್ಮ ಬದುಕು ಬೆಳಗಿಸಲು ಕಾರಣವಾಗುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...