Home / ಕಥೆ / ಜನಪದ / ಉದ್ದನ್ನವರ ಮುಂದೆ ಕೀರ್ತನ

ಉದ್ದನ್ನವರ ಮುಂದೆ ಕೀರ್ತನ

‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ್ನವರೇ ಆಗಿದ್ದಾರೆಂಬ ಭರವಸೆಯಾದ ಬಳಿಕ ಕೀರ್ತನಕಾರನು ತನ್ನ ಅಮೋಘವಾಣಿಯಿಂದ ಕೀರ್ತನ ಹೇಳಲು ಪ್ರಾರಂಭಿಸಿದನು.

ಸ್ತೋತ್ರವಾಯಿತು. ಉಪೋದ್ಘಾತ ಮುಗಿಯಿತು. ಮುಖ್ಯಕಥೆ ಮುಗುಳಿ ಮುಂದುವರೆಯಿತು. ಅಷ್ಟರಲ್ಲಿ ಸಂದರ್ಭಾನುಸಾರವಾಗಿ ಒಂದು ಅಡ್ಡಕತೆಯನ್ನು ಹೇಳುವದಕ್ಕೆ ಮೊದಲು ಮಾಡಿದನು ಕೀರ್ತನಕಾರನು. ಅದು ಏನೆಂದರೆ –

“ಒಮ್ಮೆ ತಿಪ್ಪೆಯಲ್ಲಿ ಬಿದ್ದ ಪತ್ರಾವಳಿಗೂ ಮಣ್ಣು ಹೆಂಟೆಗೂ ಮಾತುಕತೆ ನಡೆಯಿತು. ಪತ್ರಾವಳಿ ಅಂದಿತು – “ಹೆಂಟೆಣ್ಣ, ಮಳೆಗಾಲ ಆರಂಭವಾಗುವಂತೆ ತೋರುತ್ತದೆ. ಗಾಳಿ-ಮಳೆಗಳು ನಾಮುಂದೆ ನಾಮುಂದೆ ಎನ್ನುತ್ತ ಮೈ ಮೇಲೆ ದಾಳಿ ಮಾಡುವವು. ಅಂಥ ಸಂದರ್ಭದಲ್ಲಿ ನಾವು ಬದುಕುವ ಬಗೆಯೇನು? ಗಾಳಿ ಬಿರುಸಾಗಿ ಬೀಸಿದರೆ ನಾನು ಹಾರಿಹೋಗುತ್ತೇನೆ ಎಲ್ಲಿಯೋ. ಮರಮಳೆಹೊಡೆಯ ಹತ್ತಿದರೆ ನೀನು ಕರಗಿಹೋಗುತ್ತೀ. ಏನು ಉಪಾಯ ಇದಕ್ಕೆ?”

ಅಷ್ಟರಲ್ಲಿ ಶ್ರೋತೃವೃಂದದಿಂದ ಒಂದು ಮಾತು ಕೇಳಿಬಂದಿತು – ಗಾಳಿ ಮಳೆ ಎರಡೂ ಏಕಕಾಲಕ್ಕೆ ಕೂಡಿಕೊಂಡು ಬಂದರೆ ಹೇಗೆ ಮಾಡುವುದು?

ಆ ಅಡ್ಡ ಪ್ರಶ್ನೆಯನ್ನು ಕೇಳಿ ಕೀರ್ತನಕಾರನಿಗೆ ದಿಗಿಲಾಯಿತು. ಕಕ್ಕಾವಿಕ್ಕಿಯೇ ಆಗಿ ನಿಂತನು. ಊರ ಪ್ರಮುಖರನ್ನು ಹತ್ತಿರ ಕರೆದು ಕಿವಿಯಲ್ಲಿ ಹೇಳಿದನು – “ಶ್ರೋತೃವರ್ಗದಲ್ಲಿ ಇನ್ನೊಬ್ಬ ಗಿಡ್ಡನು ಉಳಿದುಕೊಂಡಿದ್ದಾನೆ. ಅವನನ್ನು ಎಬ್ಬಿಸಿ ಕಳಿಸಿರಿ. ಇಲ್ಲದಿದ್ದರೆ ಕೀರ್ತನೆ ಮುಂದೆ ಸಾಗುವದಿಲ್ಲ.”

ಜನರಲ್ಲಿ ಕಣ್ಣುತಪ್ಪಿಸಿ ಕುಳಿತ ಆ ಗಿಡ್ಡನನ್ನು ಎಬ್ಬಿಸಿ ಕಳಿಸಿದ ಬಳಿಕ, ಕೀರ್ತನವು ತಡೆಯಿಲ್ಲದೆ ಸಾಗತೊಡಗಿತು. ಉದ್ದನ್ನವರ ಮುಂದೆಯೇ ಅವನ
ಕೀರ್ತನ. ಯಾಕಂದರೆ – ಉದ್ದನ್ನವರಿಗೆ ಬುದ್ಧಿ ಕಡಿಮೆಯಂತೆ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...