Home / ಕವನ / ಅನುವಾದ / ಸರ್ ಜಾನ್ ಮೂರನ್ನು ಹೂಳಿದ್ದು

ಸರ್ ಜಾನ್ ಮೂರನ್ನು ಹೂಳಿದ್ದು

ತಂಬಟೆಹೊಯಿಲಿಲ್ಲ, ವಾದ್ಯದ ಹಲುಬಿಲ್ಲ,
ಹೆಣವ ಕೋಟೆಗೆ ನಾವು ತ್ವರೆಯಲೊಯ್ದಾಗ;
ಒಬ್ಬ ಸಿಪಾಯಿಯ ಕಳುಹುವ ಸುರುಟಿಯಿಲ್ಲ,
ನಮ್ಮ ನಾಯಕನನು ಹೂಳುತಿದ್ದಾಗ.
ಹೂಳಿದೆವವನನು ಸರಿಹೊತ್ತಿನಿರುಳಲಿ,
ಮಣ್ಣ ಬಂದೂಕದ ಮೊನೆಯಿಂದ ತಿರುವಿ;
ನುಸುಳಿ ಬರುವ ಬೆಳದಿಂಗಳ ಮಂಜಲ್ಲಿ
ಮಂಕಾದ ಬೆಳಕಿನ ಲಾಂದರದಲ್ಲಿ.
ಒಡಲ ಪೇಳಿಗೆಯಲಿ ಒಪ್ಪ ಮಾಡಲು ಇಲ್ಲ,
ಬಟ್ಟೆ ದುಪ್ಪಟಿಯಲಿ ಸುತ್ತಲು ಇಲ್ಲ;
ನಿದ್ದೆಹೋಗುವ ವೀರನಂದದಿ ಬಿದ್ದಿದ್ದ
ಯುದ್ಧದ ನಿಲುವಂಗಿ ಮುಚ್ಚಿ ಮೈಯೆಲ್ಲ.
ಬೇಗ, ಒಂದೆರಡು ಪ್ರಾರ್ಥನೆಯನ್ನು ಹೇಳಿ.
ಉಕ್ಕುವ ದುಃಖವನೊಳಗೆಯೆ ಅದುಮಿ,
ಸೆಳೆಯಲಾರದೆ ಕಣ್ಣ , ಸತ್ತ ಮುಖವ ನೋಡಿ,
ನೆನೆದೆವು ರೋಷದಿ ನಾಳೆಯ ಪಾಡ.
ನೆನೆದೆವು, ಕಿರಿದು ಹಾಸಿಗೆಯನು ತೋಡುತ,
ಒಬ್ಬನೆ ಒರಗುವ ದಿಂಬನು ಸವರಿ-
ನಾಳೆ ಹೆರರು ಹಗೆಗಳು ತಲೆ ತುಳಿವರೆ!
ತೆರೆಯ ಮೇಲಿರುವೆವೆ ಬಲುದೂರ ನಾವು!
ಹೋದ ಜೀವವ ಜರೆದಾಡಿಕೊಳುವರಾಹ!
ತಣ್ಣಗಾದುರಿಯನು ಮೂದಲಿಸುವರು!
ಎಣಿಸುವನೇ? ತನ್ನ ಮುಟ್ಟದೆ ಬಿಟ್ಟರೆ
ಬ್ರಿಟನನಿಟ್ಟೀ ಕುಳಿಯಲಿ ಮಲಗಿರಲು
ನಮ್ಮ ಸಂಕಟದಲಿ ಕ್ರಿಯೆಯರೆಯಾಯಿತು;
ತುತ್ತುರಿಯಾಯಿತು ಹಿಮ್ಮೆಟ್ಟಿ ಬರಲು.
ಕೇಳಿತು ಕೋಪಿಸಿ ವೈರಿಗಳೊಮ್ಮೊಮ್ಮೆ
ಹಾರಿಸುತ್ತಿದ್ದುದು ದೂರದ ಗುಂಡು.
ಮೆಲ್ಲಗೆ, ಮರುಗುತ, ಮಣ್ಣಿನಲಿಟ್ಟೆವು
ರಣದ ರಕ್ತದ ಚೆಲುವಿನ ಚೆಲುವಿನಲಿ.
ಕಲ್ಲ ನೆಡದೆ ಒಂದು ಪಂಕ್ತಿಯ ಕೆತ್ತದೆ,
ಅವನ ಕೀರ್ತಿಯಲವನೆ ಬಿಟ್ಟೆವಲ್ಲಿ!
*****
C WOLFE (1791- 1823) : Burial of Sir John Moor
Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...