Home / ಕವನ / ಅನುವಾದ / ರಾವುತರ ದಾಳಿ

ರಾವುತರ ದಾಳಿ

ಹರಿದಾರಿ, ಹರಿದಾರಿ,
ಹರಿದಾರಿ ಮುಂದೆ,
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!
ಕೊಚ್ಚಿ ಗುಂಡನು!” ಎಂದ
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!”
ಕುಗ್ಗಿದವನೊಬ್ಬುಂಟೆ?
ಯಾರೊ ತಪ್ಪಿದರೆಂದು
ಧೀರರವರರಿದೂ?
ಹೇಳುವುದಕವರಲ್ಲ,
ಕೇಳುವುದಕವರಲ್ಲ,
ಮಾಡಿ ಮಡಿವುದಕವರು-
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಹರಿದು.
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಮುಂಗಡೆ ಗುಂಡು
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು ,
ಜಗ್ಗದೆಯೆ ನುಗ್ಗಿದರು.
ಮೃತ್ಯುವಿನ ದಾಡೆಯಲಿ,
ನರಕದುರಿಬಾಯಿಯಲ್ಲಿ,
ಆರ್ನೂರು ರಾವುತರು
ನುಗ್ಗಿದರು ತೂರಿ.
ಬೀಸಿ, ಝಳಪಿಸಿ ಕತ್ತಿ,
ನೆಗೆದು, ಕೈ ಮೇಗೆತ್ತಿ,
ಗುಂಡಿನವರನು ಕೆತ್ತಿ,
ಕೊತ್ತಿದರು ಪಡೆಯೊತ್ತಿ-
ಲೋಕ ಬೆರಗಾಯ್ತು!
ಮದ್ದು ಹೊಗೆಯಲಿ ಮುಳುಗಿ,
ಸಾಲು ಮುರಿದರು ನುಗ್ಗಿ;
ಕಾಸಕರು, ರಷ್ಯನರು,
ಕತ್ತಿಹೊಯ್ಲಿಗೆ ಹೊರಳಿ,
ಬೆದರಿ ಧೂಳಾಯ್ತು.
ಆಗ, ಹಿಂದಿರುಗಿದರ-
ಇಲ್ಲ, ಆರ್ನೂರಿಲ್ಲ,
ಹಿಂದಿರುಗಿದವರು!
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಹಿಂಗಡೆ ಗುಂಡು,
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು,
ಆಳು ಕುದುರೆಗಳುರುಳಿ,
ನುಗ್ಗಿದಾ ಧೀರರಲಿ,
ಮೃತ್ಯುವಿನ ಬಸಿರಿಂದ,
ನರಕದುರಿಬಾಯಿಂದ,
ಮರಳಿ ಬಂದರು ಕೆಲರು,
ಆರ್ನೂರು ರಾವುತರು
ಅಳಿದುಳಿದ ಕೆಲರು.
ಮಾಸದವರದು ಹೆಸರು!
ಬೀಸಿ, ಏನ್ನುಗ್ಗಿದರು!
ಲೋಕ ಬೆರಗಾಯ್ತು!
ನುಗ್ಗಿ ಹೊಯ್ದುದ ಹೊಗಳು!
ಜಗ್ಗದೆದೆಗಳ ಹೊಗಳು!
ಆರ್ನೂರು ರಾವುತರ ಶೌರ್ಯ ಹೊಗಳು!
*****
TENNYSON (1809 -1892) : Charge of the Light Brigade
Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...