Home / ಕವನ / ಅನುವಾದ / ರಾಯಲ್ ಜಾರ್ಜು ಮುಳುಗಿಹೋದದ್ದು

ರಾಯಲ್ ಜಾರ್ಜು ಮುಳುಗಿಹೋದದ್ದು

ಅಳಿದರೇ ಹಾ ಧೀರರು!
ಕಳೆದುಹೋದರೆ ಧೀರರು!
ತಮ್ಮ ನಾಡಿನ ಕರೆಯೊಳೆಲ್ಲರು
ಮುಳುಗಿ ಹೋದರು ತೆರೆಯೊಳು.
ಎಂಟುನೂರ್ವರು ಧೀರರು,
ಕಂಡ ಕೆಚ್ಚಿನ ಧೀರರು,
ಒಂದು ಮಗ್ಗುಲಿಗೆಳೆದು ಬಗ್ಗಿಸಿ
ಒರಗಿಸಿದ್ದರು ಹಡಗನು.
ನೇಣುಗಳ ನೆಲಗಾಳಿ ಕುಲುಕಿತು.
ಹಡಗು ತಲೆಕೆಳಕಾಯಿತು.
ಹೋಯ್ತು ರಾಯಲ್ ಜಾರ್ಜು ತಳಗಡೆ
ಗೊಬ್ಬನುಳಿಯದೆ ದಳದೊಳು.
ಅಳಿದರಾಹ ಧೀರರು!
ಹೋದ ಕೆಂಪೆನ್‌ಫೆಲ್ಟನು!
ಅವನ ಕಡೆ ಹೋರಾಟ ಹೋರಿತು,
ಅವನ ಸಾಹಸ ತೀರಿತು.
ಕಾಳಗದೊಳದು ಆಗಲಿಲ್ಲ;
ಗಾಳಿ ಎರಗಿ ಒದರಲಿಲ್ಲ;
ಒಡಕು ಕಿತ್ತುದು ಮುಳುಗಲಿಲ್ಲ;
ಅಡಗಿದರೆಯನು ಹಾಯಲಿಲ್ಲ.
ಒರೆಯೊಳಿದ್ದುದು ಅವನ ಕತ್ತಿ.
ಬೆರಳಲಿದ್ದುದು ಬರೆವ ಕಡ್ಡಿ,
ತಳಕೆ ಕೆಂಪೆನ್‌ಫೆಲ್ಟು ಹೋದಾ
ಗೆರಡು ನಾನೂರ್‌ದಳದಲಿ.
ಎತ್ತಿ ಮೇಲಕೆ ಹಡಗನು!
ನಮ್ಮ ಹಗೆಯೆದೆನಡುಗನು!
ಕುಡಿತ ಮೆರೆತದಿ ಬಿಡದೆ, ಇಂಗ್ಲೆಂಡ್,
ಸಲಿಸು ಕಂಬನಿಕಡವನು.
ಹಡಗುಮರ ಕೆಡದಿರುವುದು.
ತೇಲಬಲ್ಲುದು ಮತ್ತದು.
ಹೇರಿಕೊಂಡಿಂಗ್ಲೆಂಡ ಗುಡುಗನು
ದೂರದಾಳವನುಳುವುದು.
ಹೋದ ಕೆಂಪೆನ್‌ಫೆಲ್ಟನು!
ಆದುವಾತನ ಜಯಗಳು!
ಅವನು ಅವನಾ ಎಂಟುನೂರ್ವರು
ತೆರೆಯನಿನ್ನುಳಲಾರರು!
*****
COWPER (1731- 1800) : Loss of the Royal George
Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...