Home / ಕವನ / ಅನುವಾದ / ಇಂಗ್ಲೆಂಡ ನಾವಿಕರು

ಇಂಗ್ಲೆಂಡ ನಾವಿಕರು

ಇಂಗ್ಲೆಂಡ ನಾವಿಕರಿರಾ – ಕಾಯುವಿರಿ
ನೀವೆಮ್ಮ ಕಡಲುಗಳನು;
ನಿಮ್ಮ ಬಾವುಟ ತಡೆಯಿತೊಂದು ಸಾವಿರ ವರುಷ
ಗಾಳಿಯನು ಕಾಳಗವನು.
ನಿನ್ನೊಮ್ಮೆ ನಿಮ್ಮ ವಿಜಯಧ್ವಜವ ತೂಗಿಬಿಡಿ
ಇನ್ನೊಬ್ಬ ಹಗೆಯ ತಾಗಿ
ಕಡಲಲ್ಲಿ ನಡೆಗೊಳ್ಳಿ-
ಬಿರುಗಾಳಿ ತೀಡುತಿರಲು
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು
ಬಿರುಗಾಳಿ ತೀಡುತಿರಲು.
ನಿಮ್ಮ ಪಿತೃಗಳು ಧೀರರು – ತೆರೆತೆರೆಗೆ
ಹೊಮ್ಮುವರು ಹುರಿಗೊಳಿಸಲು;
ಹಡಗಿನೆಟ್ಟವೆ ಅವರು ಕಾದಿ ಹೆಸರಾದ ಕಣ,
ಕಡಲ ಸುಳಿ ಹೂಳಿದ ಕುಳಿ.
ಎಲ್ಲಿ ಬ್ಲೇಕ್ ನೆಲ್ಸನರು ಚೆಲ್ಲಿ ನೆತ್ತರ ಕೆಡೆದ
ರಲ್ಲಿ ನಿಮಗೆದೆ ಕನಲದೆ,
ಕಡಲಲ್ಲಿ ನಡೆವಲ್ಲಿ?-
ಬಿರುಗಾಳಿ ತೀಡುತಿರಲು,
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು,
ಬಿರುಗಾಳಿ ತೀಡುತಿರಲು.
ಕೋಟೆಗಳು ಕೊತ್ತಳಗಳು-ಬೇಡದೆ ಬ್ರಿ
ಟಾನಿಯಳು ಹದುಳವಿಹಳು;
ಬೆಟ್ಟದೆರೆಗಳ ತಲೆಯ ಮೆಟ್ಟುವಳು ದಾಳಿಯಲಿ.
ಕಡಲು ಮನೆಯಾಗಿರುವಳು
ಗುಡುಗಿ ತನ್ನಡವಿಗಳ ತೇಗುಮರದೊಡಲಿಂದ,
ಅಡಗಿಸುವಳಡಿಯ ಹೊನಲ
ಕರೆಯಲ್ಲಿ ಮೊರೆವಲ್ಲಿ-
ಬಿರುಗಾಳಿ ತೀಡುತಿರಲು,
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು,
ಬಿರುಗಾಳಿ ತೀಡುತಿರಲು.
ಇಂಗ್ಲೆಂಡ ಧ್ವಜಪಟವದು – ರೌದ್ರದಲಿ
ಧೂಮಕೇತುವೊಲುರಿವುದು;
ಬಿಗಿದ ಭೀತಿಯ ನಿಶಿಯ ಕಾರೊಡ್ಡು ಕರಗುತ್ತ
ನಗುವನಕ ಶಾಂತಿಯರಿಲು.
ಆಗ ಆಗುತ್ಸವದಿ, ಸಾಗರದ ವೀರರಿರ,
ಬೀಗುವೆವು, ಕೀರ್ತಿಸುವೆವು
ನಿಮ್ಮಗಳ ಹಮ್ಮುಗಳ-
ಬಿರುಗಾಳಿ ತೀಡಿ ನಿಲಲು,
ಘೋರಕದನದ ಬೊಬ್ಬೆ ತೂರಿ ಮೊರೆವುದು ನಿಲಲು,
ಬಿರುಗಾಳಿ ತೀಡಿ ನಿಲಲು.
*****
CAMPBELL (1777 – 1844) : Ye Mariners of England
Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...