Home / ಕವನ / ಅನುವಾದ / ಆಳೌ, ಬ್ರಿಟಾನಿಯಾ!

ಆಳೌ, ಬ್ರಿಟಾನಿಯಾ!

ಆದಿಯಲಿ, ದೈವಾಜ್ಞೆಯಲ್ಲಿ ಬ್ರಿಟನ್ ಭೂಮಾತೆ
ನೀಲಜಲರಾಶಿಯಿಂದುದ್ಭವಿಸಿದಂದು,
ಆದರಿಸಿ, ಅಭಿಮಾನದೇವತೆಗಳೊಲಿದು, ದಯ
ಪಾಲಿಸಿದರಾಕೆಗೀ ಶಾಸನವ ಹರಸಿ-
“ಆಳೌ, ಬ್ರಿಟಾನಿಯಾ! ಆಳ ತೆರೆಗಳನು!
ಎಂದಿಗೂ ಬ್ರಿಟನನಡಿಯಾಳೆನಿಸಿಕೊಳನು!”
ನಿನ್ನ ಪುಣ್ಯದ ಪಡೆದು ಬಾರದಿಹ ಜನವೆಲ್ಲ
ಕ್ರೂರರಾಜರ ಬಾಧೆಯಿಂದ ಕೃಶವಾಗಿ,
ನಿನ್ನ ಮಹಿಮೆಗೆ ಹೆದರಿ, ಕರುಬಿ, ಮಿಡಿಯುತ್ತಿರಲು,
ಧೀರೆ, ಸ್ವಾತಂತ್ರ್ಯದಲಿ ನೀನು ವರ್ಧಿಸುವೆ!
ವೈರಿಗಳು ಹೊಡೆದಷ್ಟು, ಘೋರರೂಪವ ತಾಳಿ,
ಧೈರ್ಯಗಾಂಭೀರ್ಯದಲಿ ನಸುನಗುತ ನಿಲುವೆ:
ಕೀರಿ, ಗಗನವ ಸೀಳಿ, ಬಿರುಗಾಳಿ ಕಿತ್ತಷ್ಟು,
ಬೇರೂರಿಕೊಳುವಂತೆ ನಿನ್ನಡವಿತೇಗು!
ಮಲೆತು ದುರ್ನೀತಿಯಲಿ ನಿನ್ನ ರಾಜರು ಕೆಟ್ಟು,
ಹಿಡಿದು ಸಂಕಲೆಯಿಟ್ಟು ಜಗ್ಗಿಸಲು ಬರಲು,
ಮಲಗಿದ್ದ, ಸಿಂಹದಂತುರಿದೆದ್ದು ತೆಗೆದೋದರಿ,
ಬಿಡುಗಡೆಯ ಕೈಕೊಂಡು ಕೀರ್ತಿಯನು ಪಡೆವ!
ನಿನ್ನದೆಯೆ ಹೊಂಬಣ್ಣ ತುಂಬಿ ತೂಗುವ ಬಯಲು,
ನಿನ್ನದೆಯೆ ವರ್ತಕರ ಸಿರಿ ಮೆರೆವ ಹೊಳಲು;
ನಿನ್ನದೆಯೆ ಸಾಗರದ ಸತ್ವಸಾಮ್ರಾಜ್ಯವೂ,
ನಿನ್ನದೆಯೆ ತೆರೆ ಬಳಸಿಬರುವೆಲ್ಲ ಕರೆಯು!
ವಾಣಿಯರು ಸ್ವಾತಂತ್ರ್ಯ ದಕ್ಕರೆಗೆ ನಡೆತಂದು
ನಿನ್ನ ಭೋಗದ ಭೂಮಿಯಲ್ಲೆ ನೆಲಸುವರು;
ರಾಣಿದೀವಿಯೆ, ನಿನ್ನ ಚೆಲುವೆಯರ ಪ್ರೇಮದಲಿ
ನಿನ್ನ ವೀರರು ಧರ್ಮವನ್ನು ಕಾಯುತಿಹರು!
ಆಳೌ, ಬ್ರಿಟಾನಿಯಾ! ಆಳು ತೆರೆಗಳನು!
ಎಂದಿಗೂ ಬ್ರಿಟನನಡಿಯಾಳೆನಿಸಿಕೊಳನು!”
*****
THOMSON (1700 -1748) : Rule Britannia
Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...