Home / ಕವನ / ಅನುವಾದ / ಇಂಗ್ಲೆಂಡ್

ಇಂಗ್ಲೆಂಡ್

ಏನ ಮಾಡಿದೆ ನಾನು ನಿನಗೆ
ಇಂಗ್ಲೆಂಡ್, ನನ್ನಿಂಗ್ಲೆಂಡ್
ಏನ ಮಾಡೆನು ಹೇಳು ನಿನಗೆ
ನನ್ನ ಇಂಗ್ಲೆಂಡ್!
ದೇವನೊರೆವುದ ಕೇಳಿ,
ಕಣ್ಣ ಮಿನುಗನು ತಾಳಿ,
ಘೋರಯಜ್ಞವ ಬೇಳಿ,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಇಳೆಬಳಸಿ ತುತ್ತುರಿಯ ನೀನೂದಲು.
ಇನ್ನು ರವಿ ಎಲ್ಲಿ ಕಾಣುವನು,
ಇಂಗ್ಲೆಂಡ್, ನನ್ನಿಂಗ್ಲೆಂಡ್,
ನಿನ್ನಣೆಯ ಮಹತುಕಾರ್ಯವನು,
ನನ್ನ ಇಂಗ್ಲೆಂಡ್!
ಎಲ್ಲಿ ನಲಿವನು ಕಂಡು
ನಿನ್ನ ಧೀರರ ದಂಡು
ನೂಂಕುವೊಲು ಮುಂಕೊಂಡು,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಎಡರಿನಲಿ ತುತ್ತುರಿಯ ನೀನೂದಲು!
ಬಳುಕುವೆವೆ ಭಕ್ತಿಯಲಿ ನಾವು
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಕೊಳು, ಕೊಲಿಸು; ನಿನ್ನವರು ನಾವು,
ನನ್ನ ಇಂಗ್ಲೆಂಡ್!
ನಿನ್ನ ಹೊಲ, ಮನೆ, ಚೆಂದ;
ಬಾಳು ಮಿಗಿಲಾನಂದ;
ಸಾವಳಿವು-ಸಾಯುವೆವು
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಸ್ವರ್ಗದಲಿ ತುತ್ತುರಿಯ ನೀನೂದಲು.
ಗರ್ವಿ, ಘಾತಕಿ, ಎಂಬರಮ್ಮ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಸರ್ವಧರೆ ನಿನ್ನ ಹೊರೆಯಮ್ಮ!
ನನ್ನ ಇಂಗ್ಲೆಂಡ್!
ವಜ್ರಕವಚವ ತೊಟ್ಟು,
ಗತಿಯ ಕಾವುದ ಬಿಟ್ಟು,
ಜರುಗುವೆಯ? ಮರುಗುವೆಯ?
ಗಾನದಲಿ ತುತ್ತುರಿಯ ನೀನೂದದೆ,
ಇಂಗ್ಲೆಂಡ್,
ನರಕದಲಿ ತುತ್ತುರಿಯ ನೀನೂದದೆ?
ತುಳಿದುಬಹ ನಾವೆಗಳ ತಾಯಿ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಹಳೆಯುಗ್ರಸಾಗರನ ಕೆಳದಿ,
ನನ್ನ ಇಂಗ್ಲೆಂಡ್!
ಸ್ವಾಮಿಯಕ್ಕರ ಕುವರಿ,
ಧರ್ಮಖಡ್ಗದ ಮಡದಿ-
ಸೀಳಿರದೆ, ಖೂಳರೆದೆ,
ಗಾನದಲಿ ತುತ್ತುರಿಯ ನೀನೂದಲು
ಇಂಗ್ಲೆಂಡ್,
ಸತ್ಯದಲಿ ತುತ್ತುರಿಯ ನೀನೂದಲು!
*****
HENLEY (1849 – 1903) : What have I done for you , England, my England
Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...