Home / ಕವನ / ಅನುವಾದ / ಇಂಗ್ಲೆಂಡ್

ಇಂಗ್ಲೆಂಡ್

ಏನ ಮಾಡಿದೆ ನಾನು ನಿನಗೆ
ಇಂಗ್ಲೆಂಡ್, ನನ್ನಿಂಗ್ಲೆಂಡ್
ಏನ ಮಾಡೆನು ಹೇಳು ನಿನಗೆ
ನನ್ನ ಇಂಗ್ಲೆಂಡ್!
ದೇವನೊರೆವುದ ಕೇಳಿ,
ಕಣ್ಣ ಮಿನುಗನು ತಾಳಿ,
ಘೋರಯಜ್ಞವ ಬೇಳಿ,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಇಳೆಬಳಸಿ ತುತ್ತುರಿಯ ನೀನೂದಲು.
ಇನ್ನು ರವಿ ಎಲ್ಲಿ ಕಾಣುವನು,
ಇಂಗ್ಲೆಂಡ್, ನನ್ನಿಂಗ್ಲೆಂಡ್,
ನಿನ್ನಣೆಯ ಮಹತುಕಾರ್ಯವನು,
ನನ್ನ ಇಂಗ್ಲೆಂಡ್!
ಎಲ್ಲಿ ನಲಿವನು ಕಂಡು
ನಿನ್ನ ಧೀರರ ದಂಡು
ನೂಂಕುವೊಲು ಮುಂಕೊಂಡು,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಎಡರಿನಲಿ ತುತ್ತುರಿಯ ನೀನೂದಲು!
ಬಳುಕುವೆವೆ ಭಕ್ತಿಯಲಿ ನಾವು
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಕೊಳು, ಕೊಲಿಸು; ನಿನ್ನವರು ನಾವು,
ನನ್ನ ಇಂಗ್ಲೆಂಡ್!
ನಿನ್ನ ಹೊಲ, ಮನೆ, ಚೆಂದ;
ಬಾಳು ಮಿಗಿಲಾನಂದ;
ಸಾವಳಿವು-ಸಾಯುವೆವು
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಸ್ವರ್ಗದಲಿ ತುತ್ತುರಿಯ ನೀನೂದಲು.
ಗರ್ವಿ, ಘಾತಕಿ, ಎಂಬರಮ್ಮ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಸರ್ವಧರೆ ನಿನ್ನ ಹೊರೆಯಮ್ಮ!
ನನ್ನ ಇಂಗ್ಲೆಂಡ್!
ವಜ್ರಕವಚವ ತೊಟ್ಟು,
ಗತಿಯ ಕಾವುದ ಬಿಟ್ಟು,
ಜರುಗುವೆಯ? ಮರುಗುವೆಯ?
ಗಾನದಲಿ ತುತ್ತುರಿಯ ನೀನೂದದೆ,
ಇಂಗ್ಲೆಂಡ್,
ನರಕದಲಿ ತುತ್ತುರಿಯ ನೀನೂದದೆ?
ತುಳಿದುಬಹ ನಾವೆಗಳ ತಾಯಿ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಹಳೆಯುಗ್ರಸಾಗರನ ಕೆಳದಿ,
ನನ್ನ ಇಂಗ್ಲೆಂಡ್!
ಸ್ವಾಮಿಯಕ್ಕರ ಕುವರಿ,
ಧರ್ಮಖಡ್ಗದ ಮಡದಿ-
ಸೀಳಿರದೆ, ಖೂಳರೆದೆ,
ಗಾನದಲಿ ತುತ್ತುರಿಯ ನೀನೂದಲು
ಇಂಗ್ಲೆಂಡ್,
ಸತ್ಯದಲಿ ತುತ್ತುರಿಯ ನೀನೂದಲು!
*****
HENLEY (1849 – 1903) : What have I done for you , England, my England
Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...