Home / ಲೇಖನ / ಹಾಸ್ಯ / ಕನಸು ನನಸಾಯಿತು

ಕನಸು ನನಸಾಯಿತು

ಆಗ ಮಲೆನಾಡಿನ ಕೇಂದ್ರವಾದ ಸಾಗರದಲ್ಲಿ ಬ್ಯಾಂಕ್ ನೌಕರಿಯಲ್ಲಿದ್ದೆ. ಸಾಗರದಲ್ಲಿನ ಜಡಿಮಳೆಯಿಂದ ಬೇಸತ್ತ ನಾನು ಮೈಸೂರಿಗೆ ವರ್‍ಗವಾಗುವ ಬಗ್ಗೆ ಮನದಲ್ಲಿಯೇ ಕಲ್ಪನೆ ಮಾಡಿಕೊಂಡು ಮಂಡಿಗೆ ಮೆಯ್ಯುತ್ತಿದ್ದೆ.

ಅದೊಂದು ದಿನ ಚಿಂತೆ ಮಾಡುತ್ತಲೇ ನಿದ್ದೆ ಆವರಿಸಿತ್ತು. ನನಗೆ ಮೈಸೂರಿಗೆ ವರ್‍ಗವಾಗಿ ರೈಲಿನಲ್ಲಿ ನಾನು ನನ್ನವಳ ಸಂಗಡ ಪ್ರಯಾಣಿಸಿ ಮೈಸೂರು ನಿಲ್ದಾಣದಲ್ಲಿ ಇಳಿದೆ. ನಮ್ಮ ಮಾವನವರು ನಮ್ಮನ್ನು ಸ್ವಾಗತಿಸಲು ಫ್ಲಾಟ್ ಫಾರಂನಲ್ಲಿ ಕಾಯುತ್ತಿರುವುದರ ಬಗ್ಗೆ ಕನಸು ಕಂಡೆ.

ಬೆಳಗ್ಗೆ ಎದ್ದೊಡನೆ ಕನಸಿನ ಬಗ್ಗೆ ನನ್ನವಳಿಗೆ ಹೇಳಿದೆ. “ರ್ರೀ, ನೀವು ಈಗಲೇ ಬೆಂಗಳೂರಿಗೆ ಹೋಗಿ ಹೆಡ್ ಆಫೀಸ್ನಲ್ಲಿ ಮೇಲಧಿಕಾರಿಯನ್ನು ಕಂಡು ಸಾಗರದ ಹವಾ ನನಗೆ ಒಗ್ಗುತ್ತಿಲ್ಲ. ಮೈಸೂರಿಗೆ ವರ್‍ಗಾ ಮಾಡಿ” ಎಂದು ಕೇಳಿಕೊಳ್ಳಿ ಎಂದು ಆಕೆ ಸಲಹೆ ನೀಡಿದಳು.

ಅವಳು ಹೇಳಿದ್ದು ಸರಿ ಎಂದೆನಿಸಿ ಕೂಡಲೇ ಬೆಂಗಳೂರಿಗೆ ಹೊರಟೆ. ಮೇಲಧಿಕಾರಿಗಳಲ್ಲಿ ವಿನಂತಿಸಿದೆ.

“ಏನು? ನಿಮಗೆ ಮೈಸೂರೇ ಆಗ ಬೇಕೋ? ನಿಮಗಿಂತ ಸೀನಿಯರ್ ಎಷ್ಟೋ ಜನ ವರ್‍ಗ ಬೇಕೆಂದು ಹಾರಾಡುತ್ತಿದ್ದಾರೆ. ಅದೆಲ್ಲ ಆಗೋದಿಲ್ಲ ಬೇಕಾದರೆ ಹತ್ತಿರದ ಯಾವುದಾದರೂ ಹಳ್ಳಿಗೆ ಹಾಕೋಣ” ಎಂದು ಆಧಿಕಾರಿ ಗುಡುಗಿದರು.

ಕನಸು ನನಸಾಗಿದ್ದರೆ, ಎಷ್ಟು ಚಿನ್ನಾಗಿರುತ್ತಿತ್ತು. ಬಂದ ದಾರಿಗೆ ಸುಂಕವಿಲ್ಲವಾಯಿತಲ್ಲ ಎಂದುಕೊಂಡು ಸಾಗರಕ್ಕೆ ಮರಳಿದೆ. ಒಂದು ವಾರ ಕಳದಿರ‍ಬಹುದು. ಬೆಳಿಗ್ಗ ಬ್ಯಾಂಕಿಗೆ ಹೋದಾಗ ಅಚ್ಚರಿಯೊಂದು ಕಾದಿತ್ತು. ಮ್ಯಾನೇಜರ್ ನನ್ನನ್ನು ಕರೆದು “ಎಲ್ಲರಿಗೂ ಸ್ವೀಟ್ ತರಿಸಿ” ಎಂದರು. ನನಗೆ ತಳಬುಡ ಏನೂ ತಿಳಿಯಲಿಲ್ಲ.

“ನೋಡಿ ನಿಮ್ಮ ವರ್‍ಗದ ಆರ್‍ಡರ್” ಎನ್ನುತ್ತಾ ನನ್ನ ಕೈಯಲ್ಲಿತ್ತರು. ನನಗೆ ಮೈಸೂರು ಹತ್ತಿರದ ಹಳ್ಳಿ ಯಾವುದಾದರೂ ಇರಬಹುದು ಎಂಬ ಆತಂಕ ಅದರೆ ದೈವವಶಾತ್ ಮೈಸೂರಿಗೇ ವರ್‍ಗವಾಗಿತ್ತು! ಮನಸ್ಸಿನಲ್ಲಿ ಮೇಲ್ನೋಟಕ್ಕೆ ತೀಕ್ಷ್ಣವಾಗಿ ಅಂತರಂಗದಲ್ಲಿ ಮೃದುವಾಗಿಯೂ ಇದ್ದ ಅಧಿಕಾರಿಯನ್ನು ಮನಸಾರೆ ವಂದಿಸಿದೆ.
*****

Tagged:

Leave a Reply

Your email address will not be published. Required fields are marked *

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...