Home / ಕಥೆ / ಜನಪದ / ತಂದೆ ಮಗ

ತಂದೆ ಮಗ

ಸನಗಿನ ವ್ಯಾಪಾರಮಾಡುವುದರಲ್ಲಿಯೇ ಮುದುಕನಾದ ಶಿವಲಿಂಗಪ್ಪನು, ಕೈಗೆ ಬಂದ ಮಗನಿಗೆ ತನ್ನ ವ್ಯಾಪಾರದ ಹಾಗು ತನ್ನ ಗಿರಾಕಿಗಳ ಪರಿಚಯ ಮಾಡಿಸಿಕೊಟ್ಟರೆ ತಾನು ಕೆಲಸದಿಂದ ನಿವೃತ್ತನಾಗುವುದಕ್ಕೆ ನಿಶ್ಚಿಂತವಾಗುವುದೆಂದು ಆಲೋಚಿಸಿ, ಮಗನನ್ನು ಕರೆದು ತನ್ನ ವಿಚಾರವನ್ನು ಆತನ ಮುಂದೆ ವಿವರಿಸಿದನು. ಮಗನೂ ಅದಕ್ಕೆ ಸಮ್ಮತಿಸಿದನು.

ಕುದುರೆಯ ಮೇಲೆ ಸೀರೆಯ ಗಂಟುಗಳನ್ನು ಹೇರಿ, ನಾಲ್ಕು ದಿನ ಸಾಕಾಗುವಷ್ಟು ರೊಟ್ಟಿ – ಬುತ್ತಿ ಕಟ್ಟಿಕೊಂಡು ತಂದೆಯು ಮಗನೊಂದಿಗೆ ವ್ಯಾಪಾರಕ್ಕೆಂದು ತನ್ನ ದೂರದ ಹಳ್ಳಿಗಳತ್ತ ಹೊರಟನು. ಸರತಿ ಪ್ರಕಾರ ತಂದೆ-ಮಗ ಕುದುರೆ ಹತ್ತುತ್ತಿದ್ದರು. ಕುದುರೆ ತನ್ನದೇ ಆದ ವೇಗದಲ್ಲಿ ಸಾಗಬಹುದಾದರೂ ಅದರ ಬೆನ್ನ ಹಿಂದೆ ನಡೆಯುತ್ತ ಹೊರಟವರ ಸಲುವಾಗಿ ಮಂದವೇಗದಿಂದ ನಡೆಯಿತು. ಆ ಕಾರಣದಿಂದ ಅವರು ತಲಪಬೇಕಾದ ಹಳ್ಳಿಯನ್ನು ಸಾಯಂಕಾಲದೊಳಗಾಗಿ ತಲುಪಲು ಸಾಧ್ಯವಾಗಲಿಲ್ಲ. ಆ ಹಳ್ಳಿ ಇನ್ನೂ ಎರಡು ಹರದಾರಿ ದೂರವಿರುವಾಗಲೇ ಹೊತ್ತು ಮುಳುಗಿ ದೀಪಹಚ್ಚುವ ವೇಳೆಯಾಯಿತು. ತುಸು ರಾತ್ರಿಯಾದರೂ ಚಿಂತೆಯಿಲ್ಲ, ಹೋಗಿಯೇ ಬಿಡೋಣ ಎಂದು ಮಗ, ಇದೇ ಹಳ್ಳಿಯಲ್ಲಿ ರಾತ್ರಿ ಕಳೆದು ಮುಂಜಾನೆ ಹೋಗೋಣ ಎಂದು ತಂದೆ ಯೋಚಿಸತೊಡಗಿದನು.

ಮಗ ಕುದುರೆಯ ಮೇಲೆ ಕುಳಿತಿದ್ದಾನೆ. ತಂದೆ ನಡುವಿಗೆ ಒಲ್ಲಿಸುತ್ತಿ ಹಿಂದೆ ನಡೆದಿದ್ದಾನೆ. ಮುಂದಿನ ಊರ ಹಾದಿ ಹಿಡಿದ ಕುದುರೆಯನ್ನು ಹೊರಳಿಸಿ ಊರ ಅಗಸೆಯತ್ತ ಕರೆದೊಯ್ಯಲು ತಂದೆ ಲಗಾಮು ಹಿಡಿದಿದ್ದಾನೆ. ಮೇಲೆ ಕುಳಿತವನು ಮುಂದಿನ ದಾರಿ ಹಿಡಿಯಲು ತವಕಿಸುತ್ತಿದ್ದಾನೆ. ಆ ಹಳ್ಳಿಯ ಅಗಸೆಯ ಮುಂದೆ ತಂದೆ ಮಕ್ಕಳಲ್ಲಿ ಜಗ್ಗಾಟವೇ ನಡೆಯಿತು. “ನಿನಗೆ ತಿಳಿಯುವದಿಲ್ಲ. ನಾನು ಹೇಳಿದೆಂತೆ ಕೇಳು.” ಎಂಬುದೇ ಅವರಿಬ್ಬರ ಕಟ್ಟಾಜ್ಞೆಯಾಯಿತು. ಆ ಗಲವಿಲಿಗೆ ಹತ್ತೆಂಟುಜನ ನೆರೆಯಿತು ಅವರಲ್ಲೊಬ್ಬ ಕೇಳಿದರು –

“ನೀವು ಒಬ್ಬರಿಗೊಬ್ಬರು ಏನಾಗಬೇಕು ?”
“ತಂದೆ-ಮಗ” ಎಂದು ಮುದುಕನು ಹೇಳಿದೆನು.
“ಸುಳ್ಳು. ನಾನು ಮಾಲಿಕ, ಆತ ಗುಮಾಸ್ತ” ಎಂದವನು ಮಗ.
“ಆ ಹುಡುಗನದೇನು ಕೇಳುವಿರಿ ? ನಾವು ತಂದೆ ಮಕ್ಕಳು.”
“ಆ ಮುದುಕನದೇನು ಕೇಳುವಿರಿ ? ನಾವು ಮಾಲಿಕ – ಗುಮಾಸ್ತ.”
“ಮಗನಾದವನು ತಂದೆಯ ಮಾತು ಕೇಳಬೇಕಲ್ಲವೇ ?” ಎಂಬುದು ಮುದುಕನ ವಾದ.
“ಗುಮಾಸ್ತನಾದವನು ಮಾಲಿಕನು ಹೇಳಿದೆಂತೆ ನಡೆಯಬೇಕಲ್ಲವೇ ?” ಎಂಬುದು ಮಗನ ಪ್ರತಿವಾದ.

ಹಗ್ಗವೂ ಹರಿಯದೆ ಕೋಲೂ ಮುರಿಯದೆ ವಾದವಿವಾದವು ಸಾಗಿದ ಬಳಿಕ, ಊರವರು ಅವರ ಕುದುರೆಯನ್ನು ಜಗ್ಗಿಕೊಂಡು ಚಾವಡಿಗೊಯ್ದರು. ಗೌಡನು ಅವರ ವಾದ-ಪ್ರತಿವಾದಗಳನ್ನು ಕೇಳಿ, ಮುಂದಿನ ಯೋಚನೆ ಹೇಳಿದನು – “ನೀವು ತಂದೆಮಕ್ಕಳೋ ಮಾಲಿಕ ಗುಮಾಸ್ತರೋ ಸ್ಪಷ್ಟವಾಗುವವರೆಗೆ ನಿಮ್ಮನ್ನು ಇಲ್ಲಿಂದ ಬಿಡುವುದೇ ಇಲ್ಲ. ನಿಮ್ಮೂರಿನ ಗ್ರಾಮಸ್ಥರಿಂದ ನಿಮ್ಮ ಹತ್ತಗಡೆಯ ವಿಷಯವನ್ನು ತರಿಸಿಕೊಡಿರಿ.”

ಮರುದಿನ ಗೌಡನು ಓಲೆಕಾರನನ್ನು ಅವರೂರಿಗೆ ಕಳಿಸಿ ಅವರ ವಿಷಯವನ್ನು ತರಿಸಿಕೊಂಡರೆ ತಂದೆ-ಮಗ ಎನ್ನುವುದು ತಿಳಿಯಿತು. ಶಿವಲಿಂಗಪ್ಪನಿಂದ ಓಲೆಕಾರನಿಗೆ ಎರಡು ರೂಪಾಯಿ ಕೊಡಿಸಿ, ಮಗನಿಗೆ ಬುದ್ಧಿಹೇಳಿ ಅವರನ್ನು ಮುಂದಿನೂರಿಗೆ ಹೋಗಗೊಟ್ಟನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...