Home / ಕವನ / ಕವಿತೆ / ಹೂವು ಹಣ್ಣು ಬಿಡಲಿ

ಹೂವು ಹಣ್ಣು ಬಿಡಲಿ

ಗಳಿಗೆ ಗಳಗೆಗೂ ಎಜೆಯ ಕಡಲಿನಲಿ
ಅಳಲ ತೆರೆಗಳೆದ್ದು;
ದಡಕೆ ಅಪ್ಪಳಿಸಿ ಮನವ ಕಲಕುತಿವೆ
ಕಳೆದ ನೆನಹು ತಂದು.
ಹಗಲು ಮನಸಿನಲಿ ಇರುಳು ಕನಸಿನಲಿ
ಚಿತ್ರ ನೂರು ನೂರು!
ಮುಗಿಲ ತೇರಿನಲಿ ತೇಲಿ ಬಂದಿರಲು
ಕಣ್ಣ ತುಂಬ ನೀರು.
ಕರುಣೆ ಹೂವಿನಲಿ ಎದೆಯ ಹಾಲಿನಲಿ
ನಕ್ಕ ತಂಗಿ ತಾಯಿ!
ಅಗಲಿ ಹೋಗಿಹರು ಮರಳಿ ಬರದಿಹರು
ಅಕ್ಕ ಅಣ್ಣ ಗೌರಿ.
ಅವರ ಎದೆಯ ಉಲಿ ಮೌನವಾಂತಿರಲು
ಶಿವನೆ ಬಾಳಿದೇನು!
ಏಸೊ ನೆನಹುಗಳು ‘ಪ್ರೀತಿ ಗುರುತು’ಗಳು
ಎಲ್ಲ ಕನಸು ಏನು?
ಮನವು ಮಿಡಿದಿರಲು ಹೃದಯವಳುತಿರಲು
ಕಣ್ಣು ತುಂಬಿ ಹರಿದು;
ನನ್ನ ಕರುಣಾಳು ತಾಯಿ ಕನಸಿನಲಿ
ನುಡಿವಳೆದೆಗೆ ಬಂದು.
ಅಗಲಿ ಹೋದವರು ಮರಳಿ ಬರದಿರಲು
ಮೂಕ ಶೋಕವೇನು?
ಬರಲಿ ಬಂದವರು ಎಲ್ಲ ನಿನ್ನವರು
ಕೊನೆಗೆ ನಿನಗೆ ನೀನು.
ನಿನ್ನ ಇರವಿನಲಿ ಧೈರ್ಯನವಿರುತಿರಲಿ
ಮರೆತೆಯೇನು ಎಲ್ಲ?
ಮಾತು ಮಾತಿನಲಿ ಪ್ರೀತಿ ಹರಿದಿರಲಿ
ಬಾಳು ಬೇವು ಬೆಲ್ಲ.
ನಿನ್ನ ಎದೆಯ ಗಿರಿ ಕರಗಿ ನೀರಾಗಿ
ಹರಿದು ಬರುವೆ ನಾನು;
ಕವಿಯ ಬಾಳ್ಗುರಿಗೆ ತೋರು ಬೆರಳಾದ
ಅನ್ನಪೂರ್ಣೆ ನಾನು.
ನಿನ್ನ ಕಣ್ಣಿನಲಿ ನನ್ನ ಹೃದಯವನು
ಅಳೆದು ನೋಡಬಹುದು;
ಕಣ್ಣ ಮಿಂಚಿನಲಿ ಕಂಡ ಬೆಳಕಿನಲಿ
ಗುರಿಯ ಕಾಣಬಹುದು.
೧೦
ನಾನು ಹರಿದಿರುವ ಎದೆಯ ಭೂಮಿಯಲಿ
ಕಾವ್ಯ ಸಸಿಯು ಉದಿಸಿ
ನಭಕು ಬೆಳೆದಿರಲಿ ನೆರಳು ನೀಡಿರಲಿ
ಹೂವು ಹಣ್ಣು ಬಿಡಲಿ!
*****
Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...