Home / ಕಥೆ / ಜನಪದ / ಕೊನೆಯಾಶೆ

ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...