Home / ಕವನ / ಕವಿತೆ / ದೊಂಗಲುನ್ನಾರೂಽರೇ-ಜಾಗ್ರತಽ

ದೊಂಗಲುನ್ನಾರೂಽರೇ-ಜಾಗ್ರತಽ

ದೊಂಗಲುನ್ನಾರೂಽರೇ-ಜಾಗ್ರತಽ
ಎಚ್ಚರಿದೊಂದೇ ಆಗಲಿ ವ್ರತಾ || ಪಲ್ಲ||

ಇನ್ನಾರು ನಿಮ್ಮಽಽ| ಎಚ್ರಾ ಕೊಡಾವ್ರಣ್ಣಾ
ಹಾದಿ ಐತೀ ಬಲೂ ಬಲೂ ದೂರಾ
ಗಂಟಽ ಬೀಳ್ತಾನ ಅಲ್ಲಿನೆ ಚೋರಾ
ನಿದ್ದೀ ಬ್ಯಾಡ್ರೆಪ್ಪಾ, ಬಂದೀತು ಘೋರಾ || ದೊಂಗಲು….

ಕಳ್ಳಾ ಅಂಬಾವ | ಬ್ಯಾರೇ ಯಾರೂ ಇಲ್ಲಾ
ಅಂವಾ ನಮ್ಹಾಂಗಽ ನಿಮ್ಹಾಂಗಽ ಎಲ್ಲಾ
ಆದ್ರ ಧಂದೇನ ಮಾಡಿಕೊಂಡಾನ ಖುಲ್ಲಾ! ದೊಂಗಲು….

ಅಂದಾನು ಹೆದರ್ಬ್ಯಾಡೊ, ಹೆದರ್ಬ್ಯಾಡೊ ತಮ್ಮಾ
ಐತಿ, ರಾಜ್ಯಾನ ಇದು ನಮ್ಮ ನಿಮ್ಮಾ
ಬ್ಯಾರೆ ಬರ್ತಾರು ಯಾರು? ಮಕ್ಕೋ ಸುಮ್ಮಾ|| ದೊಂಗಲು….

ಇದ್ದವ್ರ ಹರಕೊಳ್ಳಾಕ ಇಲ್ದವ್ರು ಬರ್ತಾರ
ಇದ್ದದ್ದು ಇಲ್ಲದ್ದ್ಯಾವ್ದೋ ಯಣ್ಣಾ
ಮನಸ್ಕಾರಽ ಹೂಲೀ ಎಬಿಸಿ
ಮನಸ್ಯಾರ್ನ ತಿಂತಾರ
ದೇವ್ರಽ ತೆರೀಬೇಕೋ ಕಣ್ಣಾ
ಮುಚ್ಚಿ ಕೊಂಡೈತಿ | ಅಂತಃಕರ್ಣಾ
ಕರ್ಣನ ಕಿಸೇಕಽನ ಹಾಕಾವ್ರು ಕನ್ನಾ
ಬಂದು ಎದ್ದೈತಿ ಅಲ್ಲಲ್ಲಿ ಹಾಹಾಕಾರ
ಸ್ವಾಹಾಕಾರಾನ ಬಲು | ದೊಡ್ಡ ಮಂತ್ರ ಆಗೈತಿ
ಬಂದೈತ್ಯೋ ಗೆಣೆಯಾ ಭಾಳ ಘೋರಾ
ಇಲ್ಲಿ ಪಾರಾದಾವ್ನಽ ಖರೇ ಶೂರಾ | ದೊಂಗಲು….

ಅಂಬಿಕಾತನಯನಿಗು ಇತಿಮಿತಿ ಬಿದ್ದೈತಿ
ನೆಂಬಿಕ್ಯಾರೆ ಯಾರ್ದಪ್ಪಾ ಇಲ್ಲಿ
ಪೂಜಾರೀನಽ ಕೂತು | ದೇವರ್ನ ಕದ್ದರ
ಇನ್ನ ಫಜೀತಿ, ಬ್ಯಾರೆ ಯಾವ್ದೈತಿ
ಸೋದಽರ ಭಾವಾ ಹೇಳೂವ
ಚೋದ್ಯರು ಚೋದರು ಮಾದರು ಕೂಡ್ಯಾರು
ಗ್ಯಾಂಗ, ಗ್ಯಾಂಗೀಽಗೆ ಬ್ಯಾರೆ ಹೆಸರೈತಿ
ಯಾಲೀ ಧೂಲಾ ಅಂತ, ಹೈದೋಸ ನಡಿಸ್ಯಾರ
ಮನಸ್ಯಾರ್ಕಿ ಒಳಗಽ ಕಸರೈತಿ
ಸಾಲಾಽ, ಸಾಲೀಽ ಅಂತ! ನೆಂಟಸ್ತ್ಕಿ ಬೆಳಸ್ತಾರು
ಸೋದೇರು ಭಾನಚೋದ ಮಂದಿ | ಭಾಳ ಬೆರ್ಕಿ
ಅಲ್ಲಿ ತುರ್ಕಿ, ಇಲ್ಲಿ ತುರ್ಕಿ, ಹೊಡದಾರು ನಡುವಽ ಗಿರ್ಕಿ
ತೂಕಡಿಸಬ್ಯಾಡೋ ಜೋಲಿ ತಪ್ಪಿ || ದೊಂಗಲು….

ಮನಸ್ಯಾರ್ಹಾಂಗ ಕಾಣ್ತಾರಂತ
ಮನಸ್ಯಾರಽ ಅಂತ ತಿಳ್ದು
ನಿದ್ದೀ ಮಾಡಾಕ ಒಪ್ಪಿಗಿಪ್ಪಿ
ಹುಷಾರ್‌, ಹುಷಾರ್‌ | ಗೆಣೆಯಾ, ತಮ್ಮ; ಅಣ್ಣಾ
ಜಂಪು ಹತ್ತೀತು ತಪ್ಪೀಸಿ ಕಣ್ಣಾ || ದೊಂಗಲು…
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...