Home / ಕಥೆ / ಜನಪದ / ರುಚಿಗಾರ ಸವಿಗಾರ

ರುಚಿಗಾರ ಸವಿಗಾರ

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು.

ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್ತು ನೂಲುತ್ತ ಕುಳಿತಳು. ಅಂದು ಸೋಮವಾರ. ಆಕೆಗೆ ಒಪ್ಪೊತ್ತು. ಸಂಜೆಯ ಊಟವಿರಲಿಲ್ಲ. ನೂಲುವುದು ಸಾಕಾದ ಬಳಿಕ ರಾಟಿಯನ್ನು ಒತ್ತಟ್ಟಿಗೆ ಸರಿಸಿಟ್ಟು, ಕೈ ಬಾಯಿ ತೊಳಕೊಂಡು, ನೀರು ಕುಡಿಯುವುದಕ್ಕೆ ಅಣಿಯಾದಳು. ಆಕೆಯ ಬಾಯಲ್ಲಿ ಹಲ್ಲು ಇರಲಿಲ್ಲ. ಕಾಳು ನುರಿಸುವದಕ್ಕೆ ಆಗದೆ ಅಬಡು ಜಬಡು ತಿಂದು ನೀರು ಕುಡಿಯುತ್ತ – “ಏನು ಹೋದೆಯೋ ನನ್ನ ರುಚಿಗಾರ, ನನ್ನ ಸವಿಗಾರ” ಎಂದು ಮೈಮರೆತು ನುಡಿದಳು.

ಆ ಮಾತು ನೆರೆಮನೆಯವರಿಗೆ ಕೇಳಿಸಿತು. – “ಈಕೆ ಯಾರೊಡನೆ ಮಾತಾಡುತ್ತಿದ್ದಾಳೆ? ಅವನೆಂಥ ರುಚಿಗಾರ ಸವಿಗಾರ ಇದ್ದಿರಬಹುದು ಈಕೆಗೆ” ಎಂದು ಸಂಶಯ ಪಟ್ಟರು.

“ಅಜ್ಜೀ, ನೀನು ಯಾರೊಡನೆ ಮಾತಾಡುತ್ತಿರುವಿ ?” ಎಂಬ ದನಿ ನೆರೆಮನೆಯವರಿಂದ ಕೇಳಿ ಬಂತು.

“ನಾನಾರೊಡನೆ ಮಾತಾಡಲೆವ್ವ! ನನಗಾರಿದ್ದಾರೆ ?”

“ರುಚಿಗಾರ ಸವಿಗಾರ ಅಂದೆಯಲ್ಲ, ಯಾರು ಅವರು ?” ನೆರೆಮನೆಯಿಂದ ಬಂದ ಪ್ರಶ್ನೆ.

“ಇನ್ನೆಲ್ಲಿಯ ರುಚಿಗಾರ. ಇನ್ನೆಲ್ಲಿಯ ಸವಿಗಾರ ! ಹೋಗಿಬಿಟ್ಟು ಬಹಳ ದಿನಗಳಾದವು” ಮುದುಕಿಯ ಮರುನುಡಿ.

“ಹಳೆ ಗೆಳೆತನದ ನೆನಪಾದಂತೆ ತೋರುತ್ತದೆ ಮುದುಕಿಗೆ” ಎಂದುಕೊಂಡಿದ್ದಾಳೆ ನೆರೆಯವಳು. “ಹೋದವರು ಮರಳಿ ಬರಲಾರರು ಅಜ್ಜೀ. ನಾವೂ ಒಮ್ಮೆ ಅದೇ ಹಾದಿಯಲ್ಲಿ ಹೋಗತಕ್ಕವರೇ ಅಲ್ಲವೇ ?” ಎಂದಳು.

“ನಾನು ಹುಚ್ಚಿ ಸತ್ತವರನ್ನು ನೆನೆಯಲಿಲ್ಲ. ಬಿದ್ದು ಹೋದ ಹಲ್ಲುಗಳನ್ನು ನೆನಪಿಸಿಕೊಂಡು ಹಾಗೆ ನುಡಿದೆ – ಏನು ಹೋದೆಯೋ ನನ್ನ ರುಚಿಗಾರ – ಸವಿಗಾರ ಎಂದು.” ಮುದುಕಿ ಅರ್ಥವನ್ನು ಸ್ಪಷ್ಟಗೊಳಿಸಿದಳು.

“ಅಹುದೇ ಅಜ್ಜಿ ? ನಾನು ಬೇರೆಯೇ ತಿಳಿದಿದ್ದೆನಲ್ಲ !” ಎಂದು ನೆರೆಯವಳು ವಿಷಯವನ್ನು ಪೂರ್ತಿಗೊಳಿಸಿದಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...