Home / ಕಥೆ / ಜನಪದ / ರುಚಿಗಾರ ಸವಿಗಾರ

ರುಚಿಗಾರ ಸವಿಗಾರ

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು.

ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್ತು ನೂಲುತ್ತ ಕುಳಿತಳು. ಅಂದು ಸೋಮವಾರ. ಆಕೆಗೆ ಒಪ್ಪೊತ್ತು. ಸಂಜೆಯ ಊಟವಿರಲಿಲ್ಲ. ನೂಲುವುದು ಸಾಕಾದ ಬಳಿಕ ರಾಟಿಯನ್ನು ಒತ್ತಟ್ಟಿಗೆ ಸರಿಸಿಟ್ಟು, ಕೈ ಬಾಯಿ ತೊಳಕೊಂಡು, ನೀರು ಕುಡಿಯುವುದಕ್ಕೆ ಅಣಿಯಾದಳು. ಆಕೆಯ ಬಾಯಲ್ಲಿ ಹಲ್ಲು ಇರಲಿಲ್ಲ. ಕಾಳು ನುರಿಸುವದಕ್ಕೆ ಆಗದೆ ಅಬಡು ಜಬಡು ತಿಂದು ನೀರು ಕುಡಿಯುತ್ತ – “ಏನು ಹೋದೆಯೋ ನನ್ನ ರುಚಿಗಾರ, ನನ್ನ ಸವಿಗಾರ” ಎಂದು ಮೈಮರೆತು ನುಡಿದಳು.

ಆ ಮಾತು ನೆರೆಮನೆಯವರಿಗೆ ಕೇಳಿಸಿತು. – “ಈಕೆ ಯಾರೊಡನೆ ಮಾತಾಡುತ್ತಿದ್ದಾಳೆ? ಅವನೆಂಥ ರುಚಿಗಾರ ಸವಿಗಾರ ಇದ್ದಿರಬಹುದು ಈಕೆಗೆ” ಎಂದು ಸಂಶಯ ಪಟ್ಟರು.

“ಅಜ್ಜೀ, ನೀನು ಯಾರೊಡನೆ ಮಾತಾಡುತ್ತಿರುವಿ ?” ಎಂಬ ದನಿ ನೆರೆಮನೆಯವರಿಂದ ಕೇಳಿ ಬಂತು.

“ನಾನಾರೊಡನೆ ಮಾತಾಡಲೆವ್ವ! ನನಗಾರಿದ್ದಾರೆ ?”

“ರುಚಿಗಾರ ಸವಿಗಾರ ಅಂದೆಯಲ್ಲ, ಯಾರು ಅವರು ?” ನೆರೆಮನೆಯಿಂದ ಬಂದ ಪ್ರಶ್ನೆ.

“ಇನ್ನೆಲ್ಲಿಯ ರುಚಿಗಾರ. ಇನ್ನೆಲ್ಲಿಯ ಸವಿಗಾರ ! ಹೋಗಿಬಿಟ್ಟು ಬಹಳ ದಿನಗಳಾದವು” ಮುದುಕಿಯ ಮರುನುಡಿ.

“ಹಳೆ ಗೆಳೆತನದ ನೆನಪಾದಂತೆ ತೋರುತ್ತದೆ ಮುದುಕಿಗೆ” ಎಂದುಕೊಂಡಿದ್ದಾಳೆ ನೆರೆಯವಳು. “ಹೋದವರು ಮರಳಿ ಬರಲಾರರು ಅಜ್ಜೀ. ನಾವೂ ಒಮ್ಮೆ ಅದೇ ಹಾದಿಯಲ್ಲಿ ಹೋಗತಕ್ಕವರೇ ಅಲ್ಲವೇ ?” ಎಂದಳು.

“ನಾನು ಹುಚ್ಚಿ ಸತ್ತವರನ್ನು ನೆನೆಯಲಿಲ್ಲ. ಬಿದ್ದು ಹೋದ ಹಲ್ಲುಗಳನ್ನು ನೆನಪಿಸಿಕೊಂಡು ಹಾಗೆ ನುಡಿದೆ – ಏನು ಹೋದೆಯೋ ನನ್ನ ರುಚಿಗಾರ – ಸವಿಗಾರ ಎಂದು.” ಮುದುಕಿ ಅರ್ಥವನ್ನು ಸ್ಪಷ್ಟಗೊಳಿಸಿದಳು.

“ಅಹುದೇ ಅಜ್ಜಿ ? ನಾನು ಬೇರೆಯೇ ತಿಳಿದಿದ್ದೆನಲ್ಲ !” ಎಂದು ನೆರೆಯವಳು ವಿಷಯವನ್ನು ಪೂರ್ತಿಗೊಳಿಸಿದಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್