Home / ಕವನ / ಕವಿತೆ / ಮೆಸೀನಾ ಉಪಸಾಗರದಲ್ಲಿಯ ರಾತ್ರಿ

ಮೆಸೀನಾ ಉಪಸಾಗರದಲ್ಲಿಯ ರಾತ್ರಿ

ಒಂದು ದಂಡೆಗೆ ಸಿಸಿಲಿಯ ದೀಪಮಾಲೆ,
ಇನ್ನೊಂದು ದಂಡೆಗೆ ಇಟಲಿಯ ದೀಪಾವಳಿ;
ಒ೦ದು ದಂಡೆಗೆ ಹರಿತಶಿಲಾಪ್ರಕಾಶಸ್ತ೦ಭ,
ಇನ್ನೊಂದು ದಂಡೆಗೆ ಮಿಂಚಿನ ಮಂಗಳಾರತಿ;
ಬೆಳಕು ಬಂದು ಕಡಲ-ಹಕ್ಕಿಗೆ ತೋರಣ ಕಟ್ಟಿತಿಲ್ಲಿ,
ಅನಂತರೂಪಗಳ ಧರಿಸಿತಿಲ್ಲಿ!

ದಿನ್ನೆಯಿಂದ ಶರಧಿಗೆ ಹಬ್ಬಿದ ದೀಪಗಳಿವು ಸುರಪುರಗಳೇನು?
ಬೀಡು ಬಿಟ್ಟ ಉಜ್ವಲ ಸ್ವಪ್ನಗಳೇನು?
ಕೆಳಗಿಳಿದು ಬಂದ ತಾರೆಗಳ ನಿಬ್ಬಣವೇನು?
ಬೆಳಕು ಹುಟ್ಟಿನಲ್ಲಿ ಚಕಮಕಿಸುವ ರಾಜಭೃಂಗಗಳೇನು?
ಒ೦ದು ದಂಡೆಗೆ ಸಿಸಿಲಿ, ಇನ್ನೊಂದು ದಂಡೆಗೆ ಇಟಿಲಿ,
ಸಿಸಿಲಿಯ ಕವಿಗಳು ನಿರ್ಮಿಸಿದ ಕಣ್ಣುಕಟ್ಟೇನಿದೆಲ್ಲ?

ಬೀದಿಗಳಿಹವು ನೋಡು ದೀಪಗಳೆರಡು ರೇಖೆಗಳ ನಡುವೆ.
ಒಂದೊಂದು ದೀಪಕೊಂದೊಂದು ಮನೆ. ಬಿದಿಗೆಯ ಚಂದ್ರಮನಂತೆ
ಪುರವಿದನು ರೇಖಿಸಿದೆ ದಿವ್ಯ ವಿದ್ಯುಲ್ಲತೆಯು!
ಪಟ್ಟಣದ ಪಡಿನೆಳಲಲ್ಲವಿದು, ಬೆಳಕಿನಲೊಗೆದ ಪ್ರತಿಮೆ!
ಅಲ್ಲಲ್ಲ! ಒಣ್ಣನೆಗೆ ಮೋಹಗೊಳದಿರು! ಜೋಕೆ!
ಅನ್ಯಾಯದ ದೀಪೋತ್ಸವವಿದು! ಮುಸಲೀನಿಯ ಪ್ರಾಣಪ್ರತಿಷ್ಠೆ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...