Home / ಕವನ / ಕವಿತೆ / ಆಫ್ರಿಕ

ಆಫ್ರಿಕ

ಕೆಂಪು ಸಮುದ್ರದ ನೀರು ಕತ್ತಲೆಯಂತೆ ಕರ್‍ರಗಿರಲು
ಆಫ್ರಿಕದ ಕಾಡಿಗೆಯ ಮೇಲೆ ಸಂಜೆಗೆಂಪು ಮೂಡಿತ್ತು.
ಕರಿಬೆಟ್ಟಗಳ ಹೊದರಿನಲ್ಲಿ ಹುದುಗುತ್ತಿದ್ದನು ರವಿಯು.
ಅಬಿಸೀನಿಯದ ಕೊಲೆ, ನಿಗರ್ವಿಗಳ ದಾಸ್ಯ, ಸುಮಾಲಿಗಳ ಕೊರಗು,-
ಕಪ್ಪುಹಚ್ಚುವ ಕೃತಿಗಳಿವು,-ರಕ್ತವರ್ಣದವು!
ಆಫ್ರಿಕಖಂಡದ ಜನರ ಮೆಯ್ಯಲ್ಲಿಲ್ಲ ಮಾಂಸಖಂಡ,-
ಗುಲಾಮರ ಲೋಕವದು-ಮಾನವನು ಮೆಟ್ಟಿದ ಪಾತಾಳವದು-
ಅಂಧಂತಮಸ್ಸದು–ಕೊಲೆಗಡಕರಡುಮನೆಯದು-
ಅಲ್ಲಿ ಮುಳುಗುವ ರವಿಯು ಕೂಡ ರಕ್ತದ ಮಡುವಿನಲೀಸುತಿದ್ದ!

ಇ೦ತಿರಲು ಆಫ್ರಿಕದ ಮುಳುಗು,-ಮೂಡಿತೊಂದಾಸೆಯಲ್ಲಿ.
ಬೆಳ್ಳಿಯ ಕಡ್ಡಿಯನು ಬಿಳಿ ಬೆಳಕಿನಲೆದ್ದಿ ಬರೆದ ಗೆರೆಯಂತೆ
ಮುಗಿಲ ಪಟದ ಮೇಲೆ ವಿರಾಜಿಸಿದ ಬಿದಿಗೆಯ ಚಂದ್ರಮನು.
ಕಳೆಯೇರಿದನು, ಕರೆತಂದನು ಕೆಲವು ಚಿಕ್ಕೆಗಳನು,
ಹಿಡಿದ ಕೊಂಬಿನಲ್ಲಿ ಬಿಂಬಿಸಿದನು ಬೆಳಕನೆಲ್ಲ,
ಆಸೆಯಿದೆಯೆಂದನು, ಕೃಷ್ಣೋದಕದ ಹೃದಯವ ಕೂಡ
ಭೇದಿಸಿದನು ಹೊಳೆವ ಕಿರಣಗಳ ಕೂರಲಗಿನಿಂದ.

ಅರೆನಿಮಿಷ ಬೆಳಗಿರಲಿಲ್ಲ,-ಕಳೆಗುಂದಿದನು ಚಂದ್ರ.
ಕಂದಿತೆಲ್ಲ ಅವನ ಬಣ್ಣ! ಕೇದಿಗೆಯ ಬಿಳುಪು ಬಂತು:
ಬಾಗಿದನು, ಮೊಗ ತಗ್ಗಿಸಿದನು, ಹುದುಗಿದನು ಬೆಟ್ಟಗಳ ಹೊದರಿನಲ್ಲಿ.
ಹೆದರಬೇಡ ಆಫ್ರಿಕವೆ! ಬರಬಹುದು ನಿನ್ನ ಹುಣ್ಣಿಮೆ ನಾಳೆ.
ಹುಣ್ಣಿಮೆಯಿದ್ದಲ್ಲಿ ಅಮಾವಾಸ್ಯ,-ಅಮಾವಾಸ್ಯವಿದ್ದಲ್ಲಿ ಹುಣ್ಣಿಮೆ;
ಇಂತಿಹುದು ಕಾಲಚಕ್ರ, ಕದಲಬಹುದು ನಿನ್ನ ಕತ್ತಲೆ!
*****

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...