Home / ಕವನ / ಕವಿತೆ / ಸುಯೇಜ್‌ ಕಾಲುವೆ

ಸುಯೇಜ್‌ ಕಾಲುವೆ

ಮುಗಿಲ ನೀಲಿಯ, ಮುನ್ನೀರ ಹಸಿರ, ಮರುನೆಲದ ಸುವರ್ಣ ವರ್ಣವನು,-
ಒಂದೆಡೆಗೆ ನೋಡುವಾಸೆಯಿರಲು,- ನಡೆ ಸುಯೇಜಿಗೆ!
ಉಸುಬಿನುದಧಿಯ ದಾಂಟಲು ನಿರ್ಮಿಸಿದ ನೀರ ಸೇತುವಿಗೆ!
ಮುನ್ನೀರ ಕಾಲುವೆಯ ದಾಂಟಿಲ್ಲಿ ನಡೆಯುವಾಗ
ಈ ಹಡಗವಹುದು–ಅರಣ್ಯದ ಹಡಗ!
ಕಚ್ಚಲು ಬರುವ ಹಾವಿನಂತೆ ರೊಚ್ಚಿನಿಂದ ನಾಲಗೆಯೆತ್ತಿ
ದಂಡೆಗುಂಟ ಕುನುಸಿಟ್ಟು ನಡೆಯುತಿದೆ ನೋಡು-
ಹಡಗವು ಬರಲು, ಹೆಚ್ಚಾದ ನೀರು!
ಬಲಬದಿಗೆ ಚಾಚಿಹುದು ಮುಗಿಲುದ್ದಕೆ ಮರುಭೂಮಿ:
ಹೊಳೆಯುವದು ಕಣಕಣವಾಗಿ ರವಿಕಿರಣಗಳ ಕೆಳಗೆ,
ಎಡಬದಿಗೆ ಎಸೆಯುತಿಹವಲ್ಲಲ್ಲಿ-ಇಜಿಪ್ತದ ಪುರಗಳು, ತರುಗಳು
ನಡುವೆ ಸಮುದ್ರಗಳೆರಡು ಹೊಂದಿಸಿದ ಮುಂಗೈ ಮೇಲೆ
ಸಾಗಿಹುದು ನೌಕೆಯಿದು ಸಂತತದಿ.

ಹಿಂದೊಮ್ಮೆ ಜಲಧಿಯನು ಬರಿದಾಗಿಸಿದನಂತೆ ಆಗಸ್ತ್ಯ ಕುಡಿದು.
ಸಾಗರಗಳನು ಸಾಗುಗೊಳಿಸಿದನಿಂದು ಡಿ ಲೆಸೆಪ್ಬಿಯು,-
ಚಿರಂತನವಾಗಿ ಕೂಡಿಸಿದನವುಗಳ ಕೈ ಕೈ ಹಿಡಿದು-
ಸಾಂಗಗೊಳಿಸಿದನು ಸಾವಿಲ್ಲದ ವಿವಾಹವನು ಮುಗಿಲ-ಮಂಟಪದ ಕೆಳಗೆ!
ಅಲ್ಲದೆ ಕರುಣಿಸಿದನು ಕೆಂಪುಸಮುದ್ರಕೆ ಮುಖಮುದ್ರೆಯನು.
ಇರಲೇನು? ಯುರೋಪು ಚಾಚಿದ ಬಲುಮೆಗೆಯ್ಯಿದು ಸುಯೇಜು.
ಬೆಳಿಸಲಿಲ್ಲ ಸೌಹಾರ್ದವನು : ಹುಟ್ಟಿಸಿತು ನೂರು ನ್ಯಾಯಗಳ!
ಆಫ್ರಿಕೇಸಿಯಗಳನು ಬಲುವೆುಯಿಂದಗಲಿಸಿದ ಕೈಯ್ಯಿದು ಸುಯೇಜು,-
ಅವುಗಳ ರಕ್ತವನು ಹರಿಸುವ ನಾಳವಿದು. ಆಲ್ಲದೆ
ಹಡಗಗಳಿವು ರಕ್ಕದಲಿ ಬಲಿವ ಜಿಗಳಿಗಳು,__ರಕ್ತಾಣುಗಳು!
*****

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...