Home / ಕವನ / ಕವಿತೆ / ಸ್ತ್ರಾಂಬೋಲಿ

ಸ್ತ್ರಾಂಬೋಲಿ

ಕಾಲು ಚಾಚಿ ಕುಳಿತಿಹುದಿಟಲಿ ಭೂಮಧ್ಯ ಸಮುದ್ರದ ನಡುವೆ
ಸಿಸಲಿಯೊಡನೆ ಕದನವೆಸಗಿ ಪಾದಧೂಲಿಯನದಣಕೆರಚುವಂತೆ:
ಇಟಲಿಯ ಹೆಬ್ಬೊಟ್ಟಿನುಗುರಿನ ಹೊಗರ ನೋಡು! ಶೋಭಿಸುತಿಹವು ಪುರಗಳಲ್ಲಿ

ನಿಡಿದಾದ ಪರ್ವತಾವಳಿಯನೇರಲು ಹವಣಿಸುವ ಸಾಹಸಿಗಳಂತೆ
ಮತ್ತೆ ನಿದ್ರಿಸುತಿಹವು ಕೆಲವು ಹೊಳೆದು ಬೆಂಗದಿರನ ಹೊಂಬೆಳಕಿನಲ್ಲಿ.
ಸಿಸಿಲಿಯ ದಂಡೆಗುಂಟ ಹರವಿಹುದು ಮೆಸಿನಾನಗರವು ತನ್ನ ಚೆಲುವನ್ನೆಲ್ಲ.

ದಾಟುತೀ ನೀರಿನೊತ್ತನು ಮುನ್ನಡೆಯೆ ಕಂಡಿತಾಗ ಸಮುದ್ರ
ನೀಲಗನ್ನಡಿಯಂತೆ: ತೆರೆಯಿಲ್ಲ, ಸುಳಿಯಿಲ್ಲ!
ಅಖಂಡವಾಗಿ ನಿದ್ರಿಸುತಿತ್ತು ನಭೋಮಂಡಲದ ಪಡಿನೆಳಲಾಗಿ,
ಬಿಂಬಿಸಿತು ನಿರಾಳವಾದ ಶಾಂತಿಯನು: ಬರುತಿರಲಲ್ಲಿ
ದಾರಿಯಲಿ ನೀನವಿತು ಕುಳಿತಿದ್ದೆ ಸ್ತ್ರಾ೦ಬೋಲಿ!

ಮುಚ್ಚಿತ್ತು ಕರ್ಮೋಡ ಕೆಂಡವನುಗುಳ್ವ ನಿನ್ನ ರುದ್ರಮುಖವ.
ಜ್ವಾಲಾಮುಖಿಯೆ! ನಿನ್ನ ಶಿಖಿಯಡಗಿತ್ತು, ನಿಂತ ಹೊಗೆಮೋಡದಲಿ:
ಜಾರಿತ್ತು ನಿನ್ನ ಮೈಮೇಲೆ ಗಂಧಕದ ರಸ,-ಹೆಪ್ಪುಗಟ್ಟಿ ಹಸಿರಾಗುತ್ತ:
ಆರಿತ್ತು ನಿನ್ನೆದೆಯ ಮೇಲೆ ಕಬ್ಬಿಣದ ಕಸ,-ಕಾಡಿಗೆಯ ಕಪ್ಪಿನಂತೆ.
ನೆಲದ ಬಸಿರನು ಬಗೆದು ನೀ ಕಿತ್ತು ತಂದಿರುವ ಮಣ್ಣಿನ ಬಣ್ಣ
ಹರವಿತ್ತು ತಿಳಿನೀಲಿಯಾಗಿ ನಿನ್ನ೦ಗಾಂಗಳ ಮೇಲೆ:
ಪಾರಿಜಾತವ ತರಲು ವಾರಿಧಿಯ ದಾಟಿ ಮುನ್ನಡೆದ ಹಸುಳರನು
ಹೆದರಿಸಲೆನಲು ಮುಸುಕನು ಹೊತ್ತು ಕುಳಿತಿರುವೆ ಮುದಿ ರಾಕ್ಷಸನಂತೆ,-ಸ್ತ್ರಾಂಬೋಲಿ!

ಹಳ್ಳಿಯನು ಕಟ್ಟಿ ಗಿರಣಿಯೊಂದನು ಹೂಡಿಹನು ನಿನ್ನಡಿಯಲ್ಲಿ ಮಾನವನು
ಅನುದಿನವು ನೀನುಗುಳ್ವ ಲಾಳರಸವ ಲೆಕ್ಕಿಸದೆ,
ನಿನ್ನ ಪ್ರಳಯಾಗ್ನಿಯಲಿ ಬೆಂದುಬಿಡಬಹುದೆಂಬುದನು ನೆನೆದು ಸಹ!
ಕಾಯಿಲೆಯಿರಲು, ಕೆಂಗಿಡಿಗಳನುಗುಳಲು ನೀನು, ನಿನ್ನಾ ವಾಂತಿಭೇದಿಯಿಂದ
ಅಣಿಗೊಳಿಸುವನು ತನಗೆಂದು ಹಲವೌಷಧಿಗಳನು.
ಸುಮ್ಮನಿಹೆ ನೀನು ಮೂಗುಮುರಿದು, ವ್ಯಂಗ್ಯವಾದ ನಗೆಯೊಂದ ನಕ್ಕು!
ಹೇಸಿಗೆಯ ತಿನ್ನಲು ಬಂದ ನಾಯಿಯನು
ಬೀಸಿ ಹೊಡೆದರೇನು ಬಿರುದು ಬಂತೆ?

ರೋಮರಾಜ್ಯದ ತಲೆ ತಗ್ಗಿತು, ಸಿಸಿಲಿಯ ಸುಸಿಲು ತಲೆಕೆಳಗಾಯಿತು:
ಬೇರೊಂದು ರಾಜ್ಯವೆದ್ದಿರುವದಿಂದಿಟಲಿಯಲ್ಲಿ.
ಬೇರೆ ನೌಕೆಗಳಾಳುತಿಹವಿಂದು ಸಪ್ತಸಮುದ್ರಗಳನ್ನು!
ನೀ ಮಾತ್ರ ನಿಂತಿರುವೆ-ಧೂಮಧಾಮವಾಗಿ,
ಭೂಮಧ್ಯಸಮುದ್ರದ ದೀಪಸ್ತಂಭವಾಗಿ!
ಹೊಗೆ ಬಿಡುತಿರುವೆ ಎಂದಿನಂತೆ: ರಾಜ್ಯಗಳಳಿದರೇನು,
ಉದ್ಬುದ್ಧವಿರಲೇನು,-ಮತ್ತೆ ನೆಲಸಮವಾದರೇನು,-
ಎಲ್ಲ ಸಮವೆನುತಿರುವೆ! ಎಂದಿನೊಲು ಸುರಿಸುತ್ತ
ಕಡಲ ಮಡಿಲಲಿ ನಿನ್ನ ಕಾರೊಡಲ ಕೆಂಡವನು!

ನಿನ್ನ ತಲೆಮೇಲೆ ನಿಂತಿಹನು ನೋಡು ಪಡುವಣಕೆ ನಡೆದ ಸೂರ್ಯ:
ನೀನು ಜ್ವಾಲಾಮುಖಿ,-ಅವನು ಜ್ವಾಲೆಯ ಜಗತ್ತು!
ಅವನ ಸ್ವಯಂಪ್ರಶಾಶಕ್ಕೆ ತಾಕಿಲ್ಲವಿನ್ನೂ ಹೊಗೆ:
ಅಚ್ಚಳಿಯದಿದೆಯಿಂದಿಗೂ ಆವನ ನಗೆ.
ನೀನು ಕಾಲದಷ್ಟು ಹಳಬನಾದರೆ ಅವನು ಪ್ರಾಣಕ್ಕಿಂತ ಪ್ರಾಚೀನನಹುದು-.
ಕಳೆಯುವದಿದು ಸ್ತ್ರಾಂಬೂಲಿ ಹಳ್ಳಿ,-ಇಲ್ಲದಿರಲು ನಿನ್ನ ಬೆಂಕಿಯ ಮಳೆ.
ಸೂರ್ಯನು ತಣ್ಣಗಾಗಲು,-ಮುಳುಗುವದು ಮೂಜಗವೆಲ್ಲ!
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...