Home / ಕವನ / ಕವಿತೆ / ನೇಪಲ್ಸದಲ್ಲಿಯ ಮೂರ್ತಿಸಂಗ್ರಹಾಲಯ

ನೇಪಲ್ಸದಲ್ಲಿಯ ಮೂರ್ತಿಸಂಗ್ರಹಾಲಯ

ಇರಬಹುದು ಭೂಲೋಕದಲ್ಲಿ ನಂದನವನವು;
ಬರಬಹುದು ಮುಗಿಲೆಲ್ಲ ನಾಳೆ ನಮ್ಮೆಡೆಗಿಳಿದು;
ತರಬಹುದು ಇಂದ್ರನೈರಾವತವ ಮತ್ತೊಂದು ದಿನ ಪಾರ್ಥನಿನ್ನೊರ್ವನು!
ಇನ್ನೆಲ್ಲಿ ಕಂಡಿರದು ಇಂಥ ಭೂವೈಕುಂಠ;
ಮುನ್ನಡೆದು ಬಂದೆ ಸೀಜರರ ಸಾಲನು ದಾಟಿ
ಘನ್ನಮಹಿಮರ ನೋಡಿ ಸಾಃಕ್ರಟೀಸನಿಗೆರಗಿ, ವಂದಿಸಿ ಯುರೀಪಿಡಿಸನ!

ಆಗ ಬಂತೆದುರಾಗಿ ದೇವತೆಗಳನುರಾಗ;
ಸಾಗಿದೆನು ಜುಪಿಟಿರನ ಇಂದ್ರಪದನಿಯ ಕಂಡು
ತೂಗಿದೆನು ಹರುಷದಲಿ ಹರ್ಕ್ಯುಲೀಸನ ಬಲಕೆ, ಮರ್‍ಕ್ಯುರಿಯ ಬುದ್ಧಿ ಬಲಕೆ!
ನೋಡಿಲ್ಲಿ: ರವಿ-ಅಪಾಃಲೋನ ಶರಸಂಧಾನ!
ಬೇಡಿಲ್ಲಿ: ಓಶಿಯಾನಸನಿಗಿಹ ಕಡಲ ಸಿರಿ!
ಮಾಡಿಲ್ಲಿ ಮುಜುರೆಯನು: ಮತ್ತಿತರ ಸುರರೆಲ್ಲ ನಿಂತಿಹರು ವೈಭವದಲಿ!

ಕಂಡಿತಿಲ್ಲಿಯೆ ಆಫ್ರಿದಿತಿಯ ಮಾಲಕುಮಿ ಕಳೆ;
ಚಂದದಲಿ ಮಲಗಿಹಳು ಒಲಿದ ದೇಸೆಯಿದೇವಿ,
ವಂದಿಸಿದೆ ಭೂಗೋಲವನ್ನೆ ಕೈಯ್ಯಲಿ ಹಿಡಿದು ನಿಂತಿಹ ಯುರ್ಸಾನಿಯಳಿಗೆ!
ಆದಿಶೇಷನ ಭಾರವನೆ ಹೊತ್ತ ಅಟ್ಲಾಸ,
ನೋಡಿ ತನ್ನನು ತನ್ನೊಳೊಸೆದಿರುವ ನಾರ್‌ಸಿಸಸ!
ಹಾಡುವರು ಕೊಳಲೂದಿ ಯಕ್ಷಕಿನ್ನರರಂತೆ ಮತ್ತೆ ಸ್ಯಾ:ಟಿರ-ಫಾಃನರು!

ಅಹುದಹುದು! ಭೂಮಿಗಿಳಿದರು ಸ್ವರ್ಗದವರಿಲ್ಲಿ.
ಅಹಹ! ತಮ್ಮೊಳು ತಾವೆ ಆಳುವರು, ಬಾಳುವರು!
ಇಹರು ಕಾಲನ ಮೀರಿ ನಿಂತ ಚಕ್ರೇಶ್ವರರು ಕಾಲನೊಳನಾಡಿನಲ್ಲಿ!
ಅಹುದಾದರೋಂ ನಮೋ! ಶಿಲ್ಪಿಗಳ ಜೀವನಕೆ!
ಕಹಿ ಬಾಳ ವಿಷವನ್ನು ಕುಡಿದರಗಳಿಗೆ ಬಾಳಿ
ಸಹಿಸಿದರು ಮರಣವನು ತಮ್ಮಾತ್ಮದಮರತೆಯನಿತ್ತು ಬಾನ್ನವರಿಗೆಂದು!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...