Home / ಕವನ / ಕವಿತೆ / ಮಾರ್ಸೆಲದಲ್ಲಿಯ ನಾಃತರದಾಮ್‌

ಮಾರ್ಸೆಲದಲ್ಲಿಯ ನಾಃತರದಾಮ್‌

ನಿನ್ನ ನದಿಗಳ ಹೆಸರು ನನಗೆ ಗೊತ್ತಿಲ್ಲ, ಓ ಫ್ರಾನ್ಸ್‌!
ಆದರೆ ಇಂಥ ಚಲುವಿನ ಹೊನಲೇ ಹರಿದಿಹುದು ನನ್ನ ನಾಡಿನಲ್ಲಿ.
ನಿನ್ನ ವನ-ವೃಕ್ಷಗಳ ಹೂ-ಬಳ್ಳಿಗಳ ಪ್ರೀತಿಯನು ಗಳಿಸಿಲ್ಲ ಓ ಫ್ರಾನ್ಸ್‌!
ಇವನೆಲ್ಲ ನೋಡಿ ನಾನೊಸೆದ ತರುಲತೆಗಳ ನೆನಪಾಗುವದು ಮಾತ್ರ.
ಚೆಲುವಿಹುದನಂತ,- ಕಿಡಿಯನು ತಿಳಿದವಗಿಡಿ ಬೆಂಕಿಯ ಮೂಲ ಗೊತ್ತು.

ಅದರೂ ನಿನ್ನ ಚೆಲುವಿಗೆ ಮನಸೊತು ಮುಗ್ಧನಾದೆ!
ಅದಕಿದೆ ಸ್ವಾತಂತ್ರ್ಯದ ಕಾಂತಿ, ಸ್ವಾನುಭೂತಿಯ ಸ್ವಚ್ಛಂದ,
ಆನಂದದ ಲಹರಿಲಹರಿ! ಮಾಟದ ವಿಡಾಯ!
ಪ್ರಕೃತಿಯಾಳವನರಿತಿದೆ ನಿನ್ನಲ್ಲಿಯ ಕಲೆ,-
ಕಲೆಯ ನೆಲೆಯನ್ನರಿತಿದೆ ನಿನ್ನಲ್ಲಿಯ ಪ್ರಕೃತಿ!
ನಿನ್ನ ಬಸಿರಲ್ಲಿ ಬಂದ ಸುಂದರಿಯರು,
ನಿನ್ನಡಿಯಲ್ಲಿ ನಿಂತ ಉನ್ನತ ಕ್ರಿಸ್ತಾಲಯಗಳು,
ನಿನ್ನ ನಂದನವನಗಳಲಿ ಪುಟಿಯುತಿಹ ಕಾರಂಜಿ,-
ಇದರ ಫೋಟೊಗ್ರಾಫಿಯಿದೆ ಮೈಸೂರಲ್ಲಿ,-
ಜೀವಕಳೆಯಿದೆಯಿಲ್ಲಿ,-ನಿನ್ನುಸಿರಿನಲ್ಲಿ!

ಮಾರ್ಸೆಲದಲ್ಲಿಳಿದು ನಿನ್ನ ವೈಭವವ ನೋಡಿ ಬೆರಗುಬಟ್ಟೆ;
ನಿನ್ನೋಣಿಗಳಲ್ಲಿ ತಿರುಗಾಡಿದೆ, ಕಾವಣಗಳಲ್ಲಿ ತರೆದೂಗಿದೆ;
ನಗೆಮೊಗದ ನನ್ನಿಗರೊಡನೆ ಮಾತಾಡಿದೆ; ಸಮಾಧಾನವಿರಲಿಲ್ಲ.
ಪರಂತಂತ್ರ ಭಾರತೀಯನ ಗಂಟಲಿಗೆ ಗಾಳವಿದೆಲ್ಲ ಸಿರಿ.
ನಿನ್ನ `ನಾ:ತರ್‌ದಾಮ’ವು ಮಾತ್ರ ದಿವ್ಯಧಾಮವಾಯ್ತು!
ನೆಲ ನೀರುಗಳಂಚಿನ ಮೇಲೆ ನೆಲೆಸಿದ
ಉನ್ನತೋನ್ನತ ಕಿಸ್ತಾಲಯತೆ ಕಳಸವನಿಟ್ಟು
ಕೈಯಲೆತ್ತಿ ಕ್ರಿಸ್ತನನ್ನು
ಶಾಂತಗ೦ಭೀರವಾಗಿ ನಿಂತಿಹಳು ಮಾತಾಯಿ:
ಆ ದೇವಮಾತೆಯ ಪಡಿಯಚ್ಚಿದೆ
ನಿನ್ನ ಹೆಣ್ಣಿನ ಮೋರೆಯ ಮೇಲೆ, ಓ! ಫ್ರಾನ್ಸ್‌!
ನೀನೇಯೇನು ಆ ಮಾತಾಯಿ?
ರಕ್ಷಿಸಲಣಿಗರನ್ನು, ಸುವ್ವಿಗೆಯ್ಯಲೆಂದತಿಥಿಗಳನ್ನು,-
ನಿಂತೆಯೇನು ನೀನಲ್ಲ?

ಬೆಟ್ಟವನೊ೦ದರಳಿಸಿ ದೇವಮಾತೆಗೆ,-ನಿನ್ನ ದೇಹವು ಪಾವನವಾಯ್ತು,
ತಲೆಯೆತ್ತಿ ನೋಡಿದೆನು ಬಣ್ಣಬಣ್ಣದ ಗುಮ್ಮಟಗಳನ್ನು;
ನುಡಿದದ್ದನ್ನೆ ನುಡಿದು ಮುಗಿಲ ಕಿವಿಗೆ ಮಟ್ಟಿಸುವ ಮಾಡಗಳನ್ನು;
ಮಳೆಬಿಲ್ಲು ಗಾಜಿನಲ್ಲಿ ಮೋಜುಮೋಜಿನ ರೂಹುವೆತ್ತ ಚಿತ್ರಗಳನ್ನು;
ಶಿಲುಬೆಗೇರಿಸಿದ ಕ್ರಿಸ್ತಮೂರ್ತಿಯ;-
ತನೂರುಹುಗಳ ತೆರೆದು ನಿಂತ ದೇವದೂತರ,-
ನೋಡಿ ಬಿಲ್ಲುಂಬೆರಗದೆನಾಗ.
ಕ್ರಿಸ್ತನನೆತ್ತಿಕೊಂಡು ನಿಂತ ಮೇರಿ! ಮಾತಾಯಿ!
ನಿನ್ನನೋಡಿದೊಡನುಕ್ಕಿ ಬ೦ತು ನನ್ನ ಹೃದಯ
ಏಕಾಕಿಯಾದ ನಾನು ದರದೇಶಿಯಂತೆ ಶರಣು ಬರಲು
ತೆಗೆದಪ್ಪಿಕೊಂಡೆ ನನ್ನನು, ಆಶೀರ್ವದಿಸಿದೆ; ಕರುಣಿಸಿದೆ; ವರವನಿತ್ತೆ.
ನಿನ್ನ ನೆನಿಸಲು ಎದೆಯುಕ್ಕುವದು,-ನಿನ್ನಡಿಗಿದ್ದ ಸಮುದ್ರದಂತೆ!
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...