Home / ಕವನ / ಕವಿತೆ / ನಾಗರ ಪಂಚಮಿ

ನಾಗರ ಪಂಚಮಿ

ನಾಗಪ್ಪಗ್ಹಾಲ ಹೊಯ್ಯೋಣ
ನಾಗರ ಹೆಡಿಯ್ಹಾಂಗ ಆಡೋಣ ಪ

ನಾಗರ ಪಂಚಮಿ ನಾಡ ಹೆಣ್ಣಿಗೆ ಹಬ್ಬ
ನಾಗಪ್ಪಗ್ಹಾಲ ಎರಿಯೋಣ || ನಾ || ನನ ಗೆಣತಿ
ನಾಗರ ಹೆಡಿಯ್ಹಾಂಗ ಆಡೋಣ || ನಾ ೧

ಗುರುದೇವ ನಿಮವಾಲ, ಹರಹರನೆ ನಿಮಪಾಲ
ಶರಣರಿಗೆ ಹಾಲು ಹಿರಿಯರಿಗೆ || ನಾ || ಎರಿಯೋಣ
ಕಿರಿಯರಿಗೆ ಹಾಡಿ ಹರಿಸೋಣ || ನಾ ೨

ಅಳ್ಳಿಟ್ಟು, ತಂಬಿಟ್ಟು, ಮಾಡಿಟ್ಟ ಎಳ್ಳುಂಡಿ
ದಳ್ಳೂರಿ ಕಣ್ಣ ಹಣಿಯವನ | ನಾ || ಕೊರಳಾನ
ನಾಗ ನಿನಗೆಡಿಯೊ ಕೈಮುಗಿದು || ನಾ ೩

ವಾರೀಽಗಿ ಗೆಳತೇರ ಕೇರಿಯ ಕೆಳದೇರ
ಸೇರಿ ಒಂದೆಡೆ ಕೂಡೋಣ || ನಾ || ಜೋಕಾಲಿ
ತೂರಿ ಜೀಕಽವ ಆಡೋಣ || ನಾ ೪

ಚಂದ್ರಕಾಳಿಯ ಸೀರಿ ಚಂದ್ರ ಕುಪ್ಪುಸ ತೊಟ್ಟು
ಬಂದ ಹಬದಾಗ ನಲಿಯೋಣ || ನಾ || ನಕ್ಕಾಡಿ
ಒಂದಾಗಿ ಇದ್ದು ಅಗಲೋಣ || ನಾ ೫

ಸಾಕಾಗುತನ ಕೂಡಿ ಜೋಕಾಲಿ ಜೀಕೂನ
ನಾಗರ ಮಿಡಿಯಾಗಿ ಸುಳಿಯೋಣ || ನಾ || ವರವರುಷ
ನಾಗರಪಂಚಮಿಗೆ ಕೂಡೋಣ || ನಾ ೬

ಗಂಡನ ಮನಿಯಾನ, ಕಂಡ ಬಾಳುವೆ ಹಾಡಿ
ಉಂಡು ಓಡ್ಯಾಡಿ ಆಡೋಣ || ನಾ || ಮನೆ ಮಾತ
ಹಿಂಡಿನಾಗಾಡಿ ಮರೆಯೋಣ || ನಾ ೭

ಪಂಚಮಿ ಬರಲೆವ್ವ, ಮಂಚ ಕಟ್ಟಲಿ ಮನೆಗೆ
ಕೆಂಚೆ ಗೆಳತೇರು ಕೂಡಽಲಿ ||ನಾ || ನಮ ಜೀಕ
ಮಿಂಚಿ ಮುಗಲೀಗೆ ಏರಽಲಿ || ನಾ ೮

ನಾಗರ ಪಂಚಮಿ, ನಾಡ ಹೆಣ್ಣಿಗಿ ಹಬ್ಬ
ನಾಗಪ್ಪಗ್ಹಾಲ ಎರೆಯೋಣ || ನಾ || ನನ ಗೆಣತಿ
ನಾಗರ ಹೆಡಿಯ್ಹಾಂಗ ಆಡೋಣ || ನಾ ೯
*****

Tagged:

Leave a Reply

Your email address will not be published. Required fields are marked *

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...