Home / ಕವನ / ಕವಿತೆ / ಬಿಡಿ ಹಾಡುಗಳು

ಬಿಡಿ ಹಾಡುಗಳು

ಬೂದನಿಗೆ ಬಾಸಿಂಗ, ಭೂಮಿ ತಾಯಿಗೆ ದಂಡೆ
ಸಾಲ ಶರಣರಿಗೆ ಸರಮಾಲೆ || ಕಟಿಗೊಂಡು
ಮಾದಯ್ಯ ಗೆದ್ದ ಕೈಲಾಸ ೧

ಶಿವಶಿವ ಎಂದಾರ, ಸಿಡಿಲೆಲ್ಲ ಬಯಲಾಗಿ
ಕಲ್ಲ ಬಂದೆರಗಿ ಕಡೆಗಾಗಿ | ಎಲೆ ಮನವ
ಶಿವನೆಂಬ ಸಬುದ ಬಿಡಬ್ಯಾಡ ೨

ಹಂತಿ ಹೊಡೆಯುತ ನೆನೆದೆ, ಸಂತಸದಿ ಶರಣರನು
ಕಂತುಹರ ನಿನ್ನ ಭಕ್ತರನು | ನೆನೆಸಿದರ
ಸಂತಸದಿ ನೀಡೋ ವರಶಿವನೆ ೩

ಹಂತಿಪದಕೊಂದಿಲ್ಲ, ನಿಂತು ಬೆನಕನ ಪೂಜೆ
ಹಂತಿಯೋಳು ಪೂಜೆ ಶರಣರಿಗೆ | ಒಕ್ಕಲಿಗ
ಸ್ವಂತ ನೆನೆಯೆಂದ ಗಣಪನಿಗೆ ೪

ಬೇಡ ಬೇಟೆಗೆ ಹೋಗಿ, ಬೆಲ್ಲ ಪುತ್ತರಿ ಕೊಯ್ದ
ಬೇಡ ಕನ್ನಯ್ಯ ಶಿವಪೂಜೆ | ಮಾಡಿದರ
ನಾಡೆಲ್ಲ ನೋಡು ಶಿವರಾತ್ರಿ ೫

ಕನ್ನ ಬೇಟೆಯನಾಡಿ, ಹೊನ್ನಬೆಟ್ಟವ ತಿರುಗಿ
ಪನ್ನಂಗಧರಗೆ ಎಡೆಮಾಡಿ | ನರಿಕೂಗಿ
ಸಣ್ಣ ರಾಸ್ಯುಕ್ಕಿ ಕಣತುಂಬಿ ೬

ಹರನ ಶಿಖರದ ಮೇಲೆ, ಸಿರಿಗಂಧದ ಮರಹುಟ್ಟಿ
ಕಿರಿಟದೊಳೆರಡು ಗಿಳಿಕೂತು | ಓದ್ಯಾವ
ಹರಳಯ್ಯನೆಂಬು ಹಳೆಗಥೆಯ ೭

ಆರಾಣದಡಿವ್ಯಾಗ, ಆರು ಕಾಲಿನ ಮಂಚ
ನಾಗರ ಸರಪು ತೆಲೆಗಿಂಬು | ಶಿವಲಿಂಗ
ಹ್ಯಾಂಗ ಗವಿದಾವ ಸವನಿದ್ದೆ ೮

ಇಂಜಾಣದಡಿವ್ಯಾಗ, ಮಂಜ ಬಿದ್ದವ ತಾಯಿ
ಮಂಜಲ್ಲ ಮಳೆಯ ಸರುವಂದೆ | ಶಿವಲಿಂಗ
ಕೆಂಜಡೆ ಬಿಚ್ಯಾರ ಬಿಸಲೀಗೆ ೯

ಹರೆಯ ಹೊತ್ತೀಲೆದ್ದು, ನರಿಯ ಮಾರಿಯ ಕಂಡೆ
ತಿರುಗಾಡದ ಕಂಡೆ ಪವಳ್ಯಾಗ | ಶಿವಲಿಂಗ
ಸಾಲ ಸಂಪೀಗಿ ವನದಾಗ ೧೦

ಗುಡ್ಡದ ಮಲ್ಲಯ್ಯ, ಗುಡಿಯೆಲ್ಲ ಬಂಗಾರ
ಹಾಸೀಗಿ ಗಲ್ಲು ಹವಳಾವು | ಮಲ್ಲಯ್ಯ
ಬೀಸಣಿಕೆಗೆಲ್ಲ ಬಿಡಿ ಮುತ್ತು ೧೧

ರಾಗಿ ಬಣ್ಣದ ಕುದುರಿ, ರಾಜೇಕ ದೊಡ್ಡದು
ರಾಜರೊಳುರಾಜ ಮಳೆರಾಜ, ಬರುವಾಗ
ರಾಜೀವ ಕೈಯ ಮುಗಿದಾವ ೧೨

ಕೆಂದಗುದುರಿಯನೇರಿ, ಕೆರಿಯಾಗ ನಿಂತವನ್ಯಾರ
ಅಂಜತೀನಯ್ಯ ಹೆಸರ್ಹೇಳ | ಲೋಕಽದ
ಮಂಜಿನಾಗಿರುವ ಮಳೆರಾಜ ೧೩

ಹಚ್ಚನ್ನ ಹರಿನಾಮ, ಮುತ್ತಿನ ಗೋಪಾಳ
ಹೊತ್ತೇರಿ ಬರುವ ಇವನ್ಯಾರ, ಕೆರೂರ
ಗಚ್ಚಿನ ಗುಡಿಯ ಕರಿಹನುಮ ೧೪

ಕಪ್ಪೂರ ಬೆಳಕೀಲೆ, ಗುಗ್ಗೂಳ ಹೊಗೆಯಽಲಿ
ಅಪ್ಪ ರಾಷಣ್ಣ ಬೆವತಾನ, ಪೂಜ್ಯಾರಿ
ಮುತ್ತೀನ ಚೌರಿ ನೀ ಬೀಸೊ ೧೫

ಏಳ ಯಲ್ಲವ ತಾಯಿ, ಎಷ್ಟೊತ್ತ ಮಲಗೀದೆ
ಹೂವೆಂಜಲಾಗಿ ಹುಳಮುಟ್ಟಿ, ಕೊಳ್ಳದ
ನೀರೆಂಜಲಾಗಿ ಗಿಳಿ ಕುಡಿದು ೧೬

ಶರಣರ ನೆನದಽರ, ಸರಗೀಯ ಇಟ್ಹಾ೦ಗ
ಅರಳ ಮಲ್ಲೀಗಿ ಮುಡಿದ್ಹಾಂಗ, ಕಲ್ಯಾಣ
ಶರಣರ ನೆನೆಯೋ ಎಲೆ ಮನವ ೧೭

ದೈವ ದೇವರ ಹಂತಿ, ಭವದೊಳಗೆ ನಮ್ಹಂತಿ
ತೇದುಂಡ ಹಂತಿ ನಂಬಾಳು | ಒಕ್ಕಲಿಗ
ಕೋದ ತೆನಿಹಂತಿ ಜನುಮಾಕೊ ೧೮
*****

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...