Home / ಕವನ / ಕವಿತೆ / ಬಿಡಿ ಹಾಡುಗಳು

ಬಿಡಿ ಹಾಡುಗಳು

ಬೂದನಿಗೆ ಬಾಸಿಂಗ, ಭೂಮಿ ತಾಯಿಗೆ ದಂಡೆ
ಸಾಲ ಶರಣರಿಗೆ ಸರಮಾಲೆ || ಕಟಿಗೊಂಡು
ಮಾದಯ್ಯ ಗೆದ್ದ ಕೈಲಾಸ ೧

ಶಿವಶಿವ ಎಂದಾರ, ಸಿಡಿಲೆಲ್ಲ ಬಯಲಾಗಿ
ಕಲ್ಲ ಬಂದೆರಗಿ ಕಡೆಗಾಗಿ | ಎಲೆ ಮನವ
ಶಿವನೆಂಬ ಸಬುದ ಬಿಡಬ್ಯಾಡ ೨

ಹಂತಿ ಹೊಡೆಯುತ ನೆನೆದೆ, ಸಂತಸದಿ ಶರಣರನು
ಕಂತುಹರ ನಿನ್ನ ಭಕ್ತರನು | ನೆನೆಸಿದರ
ಸಂತಸದಿ ನೀಡೋ ವರಶಿವನೆ ೩

ಹಂತಿಪದಕೊಂದಿಲ್ಲ, ನಿಂತು ಬೆನಕನ ಪೂಜೆ
ಹಂತಿಯೋಳು ಪೂಜೆ ಶರಣರಿಗೆ | ಒಕ್ಕಲಿಗ
ಸ್ವಂತ ನೆನೆಯೆಂದ ಗಣಪನಿಗೆ ೪

ಬೇಡ ಬೇಟೆಗೆ ಹೋಗಿ, ಬೆಲ್ಲ ಪುತ್ತರಿ ಕೊಯ್ದ
ಬೇಡ ಕನ್ನಯ್ಯ ಶಿವಪೂಜೆ | ಮಾಡಿದರ
ನಾಡೆಲ್ಲ ನೋಡು ಶಿವರಾತ್ರಿ ೫

ಕನ್ನ ಬೇಟೆಯನಾಡಿ, ಹೊನ್ನಬೆಟ್ಟವ ತಿರುಗಿ
ಪನ್ನಂಗಧರಗೆ ಎಡೆಮಾಡಿ | ನರಿಕೂಗಿ
ಸಣ್ಣ ರಾಸ್ಯುಕ್ಕಿ ಕಣತುಂಬಿ ೬

ಹರನ ಶಿಖರದ ಮೇಲೆ, ಸಿರಿಗಂಧದ ಮರಹುಟ್ಟಿ
ಕಿರಿಟದೊಳೆರಡು ಗಿಳಿಕೂತು | ಓದ್ಯಾವ
ಹರಳಯ್ಯನೆಂಬು ಹಳೆಗಥೆಯ ೭

ಆರಾಣದಡಿವ್ಯಾಗ, ಆರು ಕಾಲಿನ ಮಂಚ
ನಾಗರ ಸರಪು ತೆಲೆಗಿಂಬು | ಶಿವಲಿಂಗ
ಹ್ಯಾಂಗ ಗವಿದಾವ ಸವನಿದ್ದೆ ೮

ಇಂಜಾಣದಡಿವ್ಯಾಗ, ಮಂಜ ಬಿದ್ದವ ತಾಯಿ
ಮಂಜಲ್ಲ ಮಳೆಯ ಸರುವಂದೆ | ಶಿವಲಿಂಗ
ಕೆಂಜಡೆ ಬಿಚ್ಯಾರ ಬಿಸಲೀಗೆ ೯

ಹರೆಯ ಹೊತ್ತೀಲೆದ್ದು, ನರಿಯ ಮಾರಿಯ ಕಂಡೆ
ತಿರುಗಾಡದ ಕಂಡೆ ಪವಳ್ಯಾಗ | ಶಿವಲಿಂಗ
ಸಾಲ ಸಂಪೀಗಿ ವನದಾಗ ೧೦

ಗುಡ್ಡದ ಮಲ್ಲಯ್ಯ, ಗುಡಿಯೆಲ್ಲ ಬಂಗಾರ
ಹಾಸೀಗಿ ಗಲ್ಲು ಹವಳಾವು | ಮಲ್ಲಯ್ಯ
ಬೀಸಣಿಕೆಗೆಲ್ಲ ಬಿಡಿ ಮುತ್ತು ೧೧

ರಾಗಿ ಬಣ್ಣದ ಕುದುರಿ, ರಾಜೇಕ ದೊಡ್ಡದು
ರಾಜರೊಳುರಾಜ ಮಳೆರಾಜ, ಬರುವಾಗ
ರಾಜೀವ ಕೈಯ ಮುಗಿದಾವ ೧೨

ಕೆಂದಗುದುರಿಯನೇರಿ, ಕೆರಿಯಾಗ ನಿಂತವನ್ಯಾರ
ಅಂಜತೀನಯ್ಯ ಹೆಸರ್ಹೇಳ | ಲೋಕಽದ
ಮಂಜಿನಾಗಿರುವ ಮಳೆರಾಜ ೧೩

ಹಚ್ಚನ್ನ ಹರಿನಾಮ, ಮುತ್ತಿನ ಗೋಪಾಳ
ಹೊತ್ತೇರಿ ಬರುವ ಇವನ್ಯಾರ, ಕೆರೂರ
ಗಚ್ಚಿನ ಗುಡಿಯ ಕರಿಹನುಮ ೧೪

ಕಪ್ಪೂರ ಬೆಳಕೀಲೆ, ಗುಗ್ಗೂಳ ಹೊಗೆಯಽಲಿ
ಅಪ್ಪ ರಾಷಣ್ಣ ಬೆವತಾನ, ಪೂಜ್ಯಾರಿ
ಮುತ್ತೀನ ಚೌರಿ ನೀ ಬೀಸೊ ೧೫

ಏಳ ಯಲ್ಲವ ತಾಯಿ, ಎಷ್ಟೊತ್ತ ಮಲಗೀದೆ
ಹೂವೆಂಜಲಾಗಿ ಹುಳಮುಟ್ಟಿ, ಕೊಳ್ಳದ
ನೀರೆಂಜಲಾಗಿ ಗಿಳಿ ಕುಡಿದು ೧೬

ಶರಣರ ನೆನದಽರ, ಸರಗೀಯ ಇಟ್ಹಾ೦ಗ
ಅರಳ ಮಲ್ಲೀಗಿ ಮುಡಿದ್ಹಾಂಗ, ಕಲ್ಯಾಣ
ಶರಣರ ನೆನೆಯೋ ಎಲೆ ಮನವ ೧೭

ದೈವ ದೇವರ ಹಂತಿ, ಭವದೊಳಗೆ ನಮ್ಹಂತಿ
ತೇದುಂಡ ಹಂತಿ ನಂಬಾಳು | ಒಕ್ಕಲಿಗ
ಕೋದ ತೆನಿಹಂತಿ ಜನುಮಾಕೊ ೧೮
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...