Home / ಕವನ / ಕವಿತೆ / ಬಿಡಿ ಹಾಡುಗಳು

ಬಿಡಿ ಹಾಡುಗಳು

ಬೂದನಿಗೆ ಬಾಸಿಂಗ, ಭೂಮಿ ತಾಯಿಗೆ ದಂಡೆ
ಸಾಲ ಶರಣರಿಗೆ ಸರಮಾಲೆ || ಕಟಿಗೊಂಡು
ಮಾದಯ್ಯ ಗೆದ್ದ ಕೈಲಾಸ ೧

ಶಿವಶಿವ ಎಂದಾರ, ಸಿಡಿಲೆಲ್ಲ ಬಯಲಾಗಿ
ಕಲ್ಲ ಬಂದೆರಗಿ ಕಡೆಗಾಗಿ | ಎಲೆ ಮನವ
ಶಿವನೆಂಬ ಸಬುದ ಬಿಡಬ್ಯಾಡ ೨

ಹಂತಿ ಹೊಡೆಯುತ ನೆನೆದೆ, ಸಂತಸದಿ ಶರಣರನು
ಕಂತುಹರ ನಿನ್ನ ಭಕ್ತರನು | ನೆನೆಸಿದರ
ಸಂತಸದಿ ನೀಡೋ ವರಶಿವನೆ ೩

ಹಂತಿಪದಕೊಂದಿಲ್ಲ, ನಿಂತು ಬೆನಕನ ಪೂಜೆ
ಹಂತಿಯೋಳು ಪೂಜೆ ಶರಣರಿಗೆ | ಒಕ್ಕಲಿಗ
ಸ್ವಂತ ನೆನೆಯೆಂದ ಗಣಪನಿಗೆ ೪

ಬೇಡ ಬೇಟೆಗೆ ಹೋಗಿ, ಬೆಲ್ಲ ಪುತ್ತರಿ ಕೊಯ್ದ
ಬೇಡ ಕನ್ನಯ್ಯ ಶಿವಪೂಜೆ | ಮಾಡಿದರ
ನಾಡೆಲ್ಲ ನೋಡು ಶಿವರಾತ್ರಿ ೫

ಕನ್ನ ಬೇಟೆಯನಾಡಿ, ಹೊನ್ನಬೆಟ್ಟವ ತಿರುಗಿ
ಪನ್ನಂಗಧರಗೆ ಎಡೆಮಾಡಿ | ನರಿಕೂಗಿ
ಸಣ್ಣ ರಾಸ್ಯುಕ್ಕಿ ಕಣತುಂಬಿ ೬

ಹರನ ಶಿಖರದ ಮೇಲೆ, ಸಿರಿಗಂಧದ ಮರಹುಟ್ಟಿ
ಕಿರಿಟದೊಳೆರಡು ಗಿಳಿಕೂತು | ಓದ್ಯಾವ
ಹರಳಯ್ಯನೆಂಬು ಹಳೆಗಥೆಯ ೭

ಆರಾಣದಡಿವ್ಯಾಗ, ಆರು ಕಾಲಿನ ಮಂಚ
ನಾಗರ ಸರಪು ತೆಲೆಗಿಂಬು | ಶಿವಲಿಂಗ
ಹ್ಯಾಂಗ ಗವಿದಾವ ಸವನಿದ್ದೆ ೮

ಇಂಜಾಣದಡಿವ್ಯಾಗ, ಮಂಜ ಬಿದ್ದವ ತಾಯಿ
ಮಂಜಲ್ಲ ಮಳೆಯ ಸರುವಂದೆ | ಶಿವಲಿಂಗ
ಕೆಂಜಡೆ ಬಿಚ್ಯಾರ ಬಿಸಲೀಗೆ ೯

ಹರೆಯ ಹೊತ್ತೀಲೆದ್ದು, ನರಿಯ ಮಾರಿಯ ಕಂಡೆ
ತಿರುಗಾಡದ ಕಂಡೆ ಪವಳ್ಯಾಗ | ಶಿವಲಿಂಗ
ಸಾಲ ಸಂಪೀಗಿ ವನದಾಗ ೧೦

ಗುಡ್ಡದ ಮಲ್ಲಯ್ಯ, ಗುಡಿಯೆಲ್ಲ ಬಂಗಾರ
ಹಾಸೀಗಿ ಗಲ್ಲು ಹವಳಾವು | ಮಲ್ಲಯ್ಯ
ಬೀಸಣಿಕೆಗೆಲ್ಲ ಬಿಡಿ ಮುತ್ತು ೧೧

ರಾಗಿ ಬಣ್ಣದ ಕುದುರಿ, ರಾಜೇಕ ದೊಡ್ಡದು
ರಾಜರೊಳುರಾಜ ಮಳೆರಾಜ, ಬರುವಾಗ
ರಾಜೀವ ಕೈಯ ಮುಗಿದಾವ ೧೨

ಕೆಂದಗುದುರಿಯನೇರಿ, ಕೆರಿಯಾಗ ನಿಂತವನ್ಯಾರ
ಅಂಜತೀನಯ್ಯ ಹೆಸರ್ಹೇಳ | ಲೋಕಽದ
ಮಂಜಿನಾಗಿರುವ ಮಳೆರಾಜ ೧೩

ಹಚ್ಚನ್ನ ಹರಿನಾಮ, ಮುತ್ತಿನ ಗೋಪಾಳ
ಹೊತ್ತೇರಿ ಬರುವ ಇವನ್ಯಾರ, ಕೆರೂರ
ಗಚ್ಚಿನ ಗುಡಿಯ ಕರಿಹನುಮ ೧೪

ಕಪ್ಪೂರ ಬೆಳಕೀಲೆ, ಗುಗ್ಗೂಳ ಹೊಗೆಯಽಲಿ
ಅಪ್ಪ ರಾಷಣ್ಣ ಬೆವತಾನ, ಪೂಜ್ಯಾರಿ
ಮುತ್ತೀನ ಚೌರಿ ನೀ ಬೀಸೊ ೧೫

ಏಳ ಯಲ್ಲವ ತಾಯಿ, ಎಷ್ಟೊತ್ತ ಮಲಗೀದೆ
ಹೂವೆಂಜಲಾಗಿ ಹುಳಮುಟ್ಟಿ, ಕೊಳ್ಳದ
ನೀರೆಂಜಲಾಗಿ ಗಿಳಿ ಕುಡಿದು ೧೬

ಶರಣರ ನೆನದಽರ, ಸರಗೀಯ ಇಟ್ಹಾ೦ಗ
ಅರಳ ಮಲ್ಲೀಗಿ ಮುಡಿದ್ಹಾಂಗ, ಕಲ್ಯಾಣ
ಶರಣರ ನೆನೆಯೋ ಎಲೆ ಮನವ ೧೭

ದೈವ ದೇವರ ಹಂತಿ, ಭವದೊಳಗೆ ನಮ್ಹಂತಿ
ತೇದುಂಡ ಹಂತಿ ನಂಬಾಳು | ಒಕ್ಕಲಿಗ
ಕೋದ ತೆನಿಹಂತಿ ಜನುಮಾಕೊ ೧೮
*****

Tagged:

Leave a Reply

Your email address will not be published. Required fields are marked *

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...