Home / ಕಥೆ / ಜನಪದ / ಮನೆ ಅಳಿಯ

ಮನೆ ಅಳಿಯ

ಅಳಿಯನಿಗೆ ಮನೆಯಳಿಯ ಮಾಡಿಕೊಂಡಿದ್ದರು ; ಮಗಳಿಗೆ ಮನೆಯಾಗೇ ಇಟ್ಟುಕೊಂಡಿದ್ದರು. ಅಳಿಯ ದನಕರುಗಳನ್ನು ಕಾಯಬೇಕು. ಮನೆಯಲ್ಲಿ ತಂಗುಳಬಂಗುಳ ಉಣ್ಣಬೇಕು – ಈ ರೀತಿ ವ್ಯವಸ್ಥೆಮಾಡಿದ್ದರು. ಅಳಿಯನೆಂದರೆ ದನಕಾಯುವ ಹುಡುಗ ಅಂತ ನಿಷ್ಕಾಳಜಿ ಮಾಡುತ್ತಿದ್ದರು.

“ನನ್ನ ಹಣೇಬರಹದಾಗ ಇಷ್ಟೇ ಬರೆದಾದ. ಅದಕ್ಕ್ಯಾಕ ಚಿಂತಿ ಮಾಡಬೇಕು” ಎಂದು ವಿಚಾರಮಾಡಿ ದಿನಾಲು ಕೆಲಸಮಾಡುತ್ತ ಇದ್ದನು. ಒಂದುದಿನ ಹೊಲದಾಗ ಎತ್ತುಬಿಟ್ಟಿದ್ದ. ಧಾರೆ ಮಳೆ ಸುರೀಲಿಕ್ಕ ಹತ್ತಿತು. ಆ ಸಮಯದಾಗ ನೀರಿನ ಬಿಂದಿಗೆಯೊಳಗಿನ ನೀರೆಲ್ಲ ಚೆಲ್ಲಿ ಅದರಲ್ಲಿ ಅಂಗಿ, ಧೋತರ ತುರುಕಿದನು. ತಾನು ಬರಿಯ ಚಡ್ಡಿಯಮೇಲೆ ನಿಂತನು. ಬಿಂದಿಗೆ ಬೋರಲು ಹಾಕಿದ- ಹಾಂಗೇ ತಾಸು ಗಟ್ಟಲೆ ನಿಂತನು. ಮಳೆ ಹೊಡೆದು ಹೊಡೆದು ಬಹಳ ಹೊತ್ತಿನ ಮೇಲೆ ನಿಂತು ಬಿಟ್ಟಿತು. ಛಕ್ಕನೆ ಬಿಸಿಲುಬಿತ್ತು. ಉಟ್ಟುಕೊಂಡು ತೊಟ್ಟುಕೊಂಡು ನಿಂತನು. ಅಲ್ಲಿಗೆ ಒಬ್ಬ ಗೋಸಾವಿ ಮೈತೋಯಿಸಿಕೊಂಡು ಬಂದನು. “ನಾನು ಇಷ್ಟು ತೋಯಿಸಿಕೂಂಡೀನು. ಈ ಮನುಷ್ಯ ಏನೂ ತೋಯಿಸಿಕೊಂಡಿಲ್ಲ. ಇದರಾಗೇನಿದೆ ಚಮತ್ಕಾರ” ಎಂದುಕೊಂಡನು. “ಯಾಕಪ್ಪ ನಿನ್ನ ಮೈಮ್ಯಾಗ ಮಳೆ ಬಿದ್ದೀಲ್ಲೇನು” ಎಂದು ಕೇಳಿದನು.

“ನಂದು ನನಗೇ ಗೊತ್ತು. ನಿಂದು ನಿನಗೇ ಗೊತ್ತು. ನನಗ ಇದರ ಅರ್ಥಹೇಳು ಅಂದರ, ನಿನ್ನ ಹಂತ್ಯಾಕಿದ್ದ ಮಂತ್ರ ತಂತ್ರ ಹೇಳಿದೆರ ನಾ ನನ್ನ ಹಿಕಮತಿ ಹೇಳತೀನಿ” ಎಂದು ನುಡಿದನು ಅಳಿಯ-

ತನ್ನ ಪರಿಸ್ಥಿತಿಯನ್ನೆಲ್ಲ ಅಳಿಯ ಹೇಳಿದನು. “ಹೂತ್ತರಳಿ ದನಕಾಯಲು ಅತ್ತ ಮಾವ ಕಳಿಸತಾರ. ಅತ್ತಿ ಮಾವ ಹೇಣತಿ ಯಾರೂ ಸೇರೂದಿಲ್ಲ. ಈ ಪರಿಸ್ಥಿತಿ ಹೋಗೂ ಸಲುವಾಗಿ ಒಂದು ಉಪಾಯ ಹೇಳು” ಎಂದು ಗೋಸಾವಿಗೆ ಕೇಳಿಕೊಂಡನು. ಗೋಸಾವಿ ಅಲ್ಲೇಬಿದ್ದ ಏಳು ಹರಳು ಆರಿಸಿಕೊಂಡನು.

“ಒಂದು ಹರಳು ಒಗೆದು ಅಲ್ಲೇ ಚಿಟಕಾಸಿ ಕೂಡು, ಅಂದರ ಅಲ್ಲೇ ನೆಲಕ್ಕ ಹತ್ತಂಡಿ ಆಗಿ ಚಿಟಕಾಸಿಕೊಂಡು ಬಿಡತಾದ. ಅತ್ತಿ ಮಾವ ಮಲಕೊಂಡ ಜಾಗಾದಿಂದ ಏಳಬಾರದು – ಎರಡು ಹರಳು ಒಗೆದರೆ – ಯಾರೂ ಅವರೀಗಿ ಎಬ್ಬಿಸಲಿಕ್ಕೆ ಸಾಧ್ಯವಿಲ್ಲ. ಹೀಂಗ ಏಳು ಹರಳು ಉಪಯೋಗಿಸುವುದರಾಗ ಅತ್ತಿ ಮಾವ ಹಾದೀ ಮ್ಯಾಲ ಬರತಾರ” ಎಂದು ಹೇಳಿ, ಅಳಿಯನ ಹಿಕಮತ್ತಿಯ ಬಗ್ಗೆ ಕೇಳುತ್ತಾನೆ.

“ಗುಂಡರಗಿಯೊಳಗೆ ಅರಿವೆ ತುರುಕಿ ಬಿಂದಿಗೆ ಬೋರಲ ಹಾಕಿದ್ದರಿಂದ ಮಳಿ ಹತ್ತಲಿಲ್ಲ.”

ಅಳಿಯ ಮನೆಗೆ ಬಂದು ಬಂಕಿನಲ್ಲಿ ಮಲಗಿಕೊಂಡನು”. ಬಾಗಿಲಲ್ಲಿ ಬಂದು ಅತ್ತೆ ಮಾವ ಮಲಗಿದಲ್ಲೆ ಮಲಗಲಿ ಎಂದು ಸೈ ಎಂದನು. ಬಾಗಿಲಿಗೆ ಬಂದು ಬಾಗಿಲು ತೆರೆಯಿರಿ ಅನ್ನುತ್ತಾನೆ. ಅವರು ನೆಲಕ್ಕೆ ಮೆತ್ತಿಕೊಂಡವರು ಮೇಲೆ ಏಳಲೊಲ್ಲರಾದರು. “ತೊರೆಯ ಆಚೆಗೆ ಜಾಣಿಹಾಳ. ಅವಳೀಗಿ ಕೇಳಿ ಬರ್ರಿ” ಎಂದು ಮಂದೀಗಿ ಕಳಿಸ್ತಾರ. ಜಾಣಿ ನಡುನೀರೊಳಗಿಂದ ಹಾಯ್ದು ಬರುವಾಗ ಇಂವ ನಿಂತಲ್ಲಿ – ನಿಂತು – ನೀರಾಗ ನಿಂತಕ್ಕಿ ನಿಂತಾಂಗೇ ಇರಲಿ ಎಂದು ಗಟ್ಟಿಯಾಗಿ ಹೇಳುತ್ತಲೇ ಹರಳ ಒಗೆಯುತ್ತಾನೆ.

ಜಾಣಿ ಇವನಿಗೆ ಅಂಗಲಾಚಿ ಬೇಡುತ್ತಾಳೆ – “ನನಗೆ ಬಿಡುಗಡೆ ಮಾಡಿದರೆ ನಿನಗ ಬೇಡಿದ್ದು ಕೊಡುತ್ತೀನಿ.”

ನಡೆ ಅಂದಕೂಡಲೇ ನೀರೂಳಗಿಂದ ಜಾಣಿ ಪಾರಾಗಿ ಮುಂದೆ ಮುಂದೆ ಬಂದಳು. ಬಂದು ಅತ್ತೆ ಮಾವಂದಿರಿಗೆ ಬುದ್ಧಿ ಹೇಳಿದಳು –

“ನಿಮ್ಮ ಅಳಿಯನಿಗೆ ಈ ರೀತಿ ಕಾಡಬೇಡಿರಿ. ಇಲ್ಲ ಅಂದರೆ ನೀವು ನೆಲದ ಮ್ಯಾಗಿಂದ ಏಳಲಿಕ್ಕೆ ಸಾಧ್ಯವೇ ಇಲ್ಲ” ಎಂದು ಗಟ್ಟಿಯಾಗಿ ಹೇಳುತ್ತಾಳೆ.

“ನಾವು ಹಿಂಥಾ ಕೆಲಸ ಇನ್ನೆಂದೂ ಮಾಡೂದಿಲ್ಲ” ಎಂದು ಗಲ್ಲಗಲ್ಲ ಬಡಕೊಳ್ಳುತ್ತಾರೆ. ಏಳಬೇಕೆನ್ನುತ್ತಾರೆ, ಏಳುವದಾಗಲಿಲ್ಲ. ಆಗ ಅಳಿಯ “ನಡೆ” ಅಂದ ಕೂಡಲೇ ಗಪ್ಪನೆ ಎದ್ದು ಕುಳಿತರು.

ಅಂದಿನಿಂದ ಅಳಿಯದೇವರ ಸತ್ಕಾರ ನಡೆಯಲು ಆರಂಭವಾಯಿತು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...