Home / ಕಥೆ / ಜನಪದ / ಮನೆ ಅಳಿಯ

ಮನೆ ಅಳಿಯ

ಅಳಿಯನಿಗೆ ಮನೆಯಳಿಯ ಮಾಡಿಕೊಂಡಿದ್ದರು ; ಮಗಳಿಗೆ ಮನೆಯಾಗೇ ಇಟ್ಟುಕೊಂಡಿದ್ದರು. ಅಳಿಯ ದನಕರುಗಳನ್ನು ಕಾಯಬೇಕು. ಮನೆಯಲ್ಲಿ ತಂಗುಳಬಂಗುಳ ಉಣ್ಣಬೇಕು – ಈ ರೀತಿ ವ್ಯವಸ್ಥೆಮಾಡಿದ್ದರು. ಅಳಿಯನೆಂದರೆ ದನಕಾಯುವ ಹುಡುಗ ಅಂತ ನಿಷ್ಕಾಳಜಿ ಮಾಡುತ್ತಿದ್ದರು.

“ನನ್ನ ಹಣೇಬರಹದಾಗ ಇಷ್ಟೇ ಬರೆದಾದ. ಅದಕ್ಕ್ಯಾಕ ಚಿಂತಿ ಮಾಡಬೇಕು” ಎಂದು ವಿಚಾರಮಾಡಿ ದಿನಾಲು ಕೆಲಸಮಾಡುತ್ತ ಇದ್ದನು. ಒಂದುದಿನ ಹೊಲದಾಗ ಎತ್ತುಬಿಟ್ಟಿದ್ದ. ಧಾರೆ ಮಳೆ ಸುರೀಲಿಕ್ಕ ಹತ್ತಿತು. ಆ ಸಮಯದಾಗ ನೀರಿನ ಬಿಂದಿಗೆಯೊಳಗಿನ ನೀರೆಲ್ಲ ಚೆಲ್ಲಿ ಅದರಲ್ಲಿ ಅಂಗಿ, ಧೋತರ ತುರುಕಿದನು. ತಾನು ಬರಿಯ ಚಡ್ಡಿಯಮೇಲೆ ನಿಂತನು. ಬಿಂದಿಗೆ ಬೋರಲು ಹಾಕಿದ- ಹಾಂಗೇ ತಾಸು ಗಟ್ಟಲೆ ನಿಂತನು. ಮಳೆ ಹೊಡೆದು ಹೊಡೆದು ಬಹಳ ಹೊತ್ತಿನ ಮೇಲೆ ನಿಂತು ಬಿಟ್ಟಿತು. ಛಕ್ಕನೆ ಬಿಸಿಲುಬಿತ್ತು. ಉಟ್ಟುಕೊಂಡು ತೊಟ್ಟುಕೊಂಡು ನಿಂತನು. ಅಲ್ಲಿಗೆ ಒಬ್ಬ ಗೋಸಾವಿ ಮೈತೋಯಿಸಿಕೊಂಡು ಬಂದನು. “ನಾನು ಇಷ್ಟು ತೋಯಿಸಿಕೂಂಡೀನು. ಈ ಮನುಷ್ಯ ಏನೂ ತೋಯಿಸಿಕೊಂಡಿಲ್ಲ. ಇದರಾಗೇನಿದೆ ಚಮತ್ಕಾರ” ಎಂದುಕೊಂಡನು. “ಯಾಕಪ್ಪ ನಿನ್ನ ಮೈಮ್ಯಾಗ ಮಳೆ ಬಿದ್ದೀಲ್ಲೇನು” ಎಂದು ಕೇಳಿದನು.

“ನಂದು ನನಗೇ ಗೊತ್ತು. ನಿಂದು ನಿನಗೇ ಗೊತ್ತು. ನನಗ ಇದರ ಅರ್ಥಹೇಳು ಅಂದರ, ನಿನ್ನ ಹಂತ್ಯಾಕಿದ್ದ ಮಂತ್ರ ತಂತ್ರ ಹೇಳಿದೆರ ನಾ ನನ್ನ ಹಿಕಮತಿ ಹೇಳತೀನಿ” ಎಂದು ನುಡಿದನು ಅಳಿಯ-

ತನ್ನ ಪರಿಸ್ಥಿತಿಯನ್ನೆಲ್ಲ ಅಳಿಯ ಹೇಳಿದನು. “ಹೂತ್ತರಳಿ ದನಕಾಯಲು ಅತ್ತ ಮಾವ ಕಳಿಸತಾರ. ಅತ್ತಿ ಮಾವ ಹೇಣತಿ ಯಾರೂ ಸೇರೂದಿಲ್ಲ. ಈ ಪರಿಸ್ಥಿತಿ ಹೋಗೂ ಸಲುವಾಗಿ ಒಂದು ಉಪಾಯ ಹೇಳು” ಎಂದು ಗೋಸಾವಿಗೆ ಕೇಳಿಕೊಂಡನು. ಗೋಸಾವಿ ಅಲ್ಲೇಬಿದ್ದ ಏಳು ಹರಳು ಆರಿಸಿಕೊಂಡನು.

“ಒಂದು ಹರಳು ಒಗೆದು ಅಲ್ಲೇ ಚಿಟಕಾಸಿ ಕೂಡು, ಅಂದರ ಅಲ್ಲೇ ನೆಲಕ್ಕ ಹತ್ತಂಡಿ ಆಗಿ ಚಿಟಕಾಸಿಕೊಂಡು ಬಿಡತಾದ. ಅತ್ತಿ ಮಾವ ಮಲಕೊಂಡ ಜಾಗಾದಿಂದ ಏಳಬಾರದು – ಎರಡು ಹರಳು ಒಗೆದರೆ – ಯಾರೂ ಅವರೀಗಿ ಎಬ್ಬಿಸಲಿಕ್ಕೆ ಸಾಧ್ಯವಿಲ್ಲ. ಹೀಂಗ ಏಳು ಹರಳು ಉಪಯೋಗಿಸುವುದರಾಗ ಅತ್ತಿ ಮಾವ ಹಾದೀ ಮ್ಯಾಲ ಬರತಾರ” ಎಂದು ಹೇಳಿ, ಅಳಿಯನ ಹಿಕಮತ್ತಿಯ ಬಗ್ಗೆ ಕೇಳುತ್ತಾನೆ.

“ಗುಂಡರಗಿಯೊಳಗೆ ಅರಿವೆ ತುರುಕಿ ಬಿಂದಿಗೆ ಬೋರಲ ಹಾಕಿದ್ದರಿಂದ ಮಳಿ ಹತ್ತಲಿಲ್ಲ.”

ಅಳಿಯ ಮನೆಗೆ ಬಂದು ಬಂಕಿನಲ್ಲಿ ಮಲಗಿಕೊಂಡನು”. ಬಾಗಿಲಲ್ಲಿ ಬಂದು ಅತ್ತೆ ಮಾವ ಮಲಗಿದಲ್ಲೆ ಮಲಗಲಿ ಎಂದು ಸೈ ಎಂದನು. ಬಾಗಿಲಿಗೆ ಬಂದು ಬಾಗಿಲು ತೆರೆಯಿರಿ ಅನ್ನುತ್ತಾನೆ. ಅವರು ನೆಲಕ್ಕೆ ಮೆತ್ತಿಕೊಂಡವರು ಮೇಲೆ ಏಳಲೊಲ್ಲರಾದರು. “ತೊರೆಯ ಆಚೆಗೆ ಜಾಣಿಹಾಳ. ಅವಳೀಗಿ ಕೇಳಿ ಬರ್ರಿ” ಎಂದು ಮಂದೀಗಿ ಕಳಿಸ್ತಾರ. ಜಾಣಿ ನಡುನೀರೊಳಗಿಂದ ಹಾಯ್ದು ಬರುವಾಗ ಇಂವ ನಿಂತಲ್ಲಿ – ನಿಂತು – ನೀರಾಗ ನಿಂತಕ್ಕಿ ನಿಂತಾಂಗೇ ಇರಲಿ ಎಂದು ಗಟ್ಟಿಯಾಗಿ ಹೇಳುತ್ತಲೇ ಹರಳ ಒಗೆಯುತ್ತಾನೆ.

ಜಾಣಿ ಇವನಿಗೆ ಅಂಗಲಾಚಿ ಬೇಡುತ್ತಾಳೆ – “ನನಗೆ ಬಿಡುಗಡೆ ಮಾಡಿದರೆ ನಿನಗ ಬೇಡಿದ್ದು ಕೊಡುತ್ತೀನಿ.”

ನಡೆ ಅಂದಕೂಡಲೇ ನೀರೂಳಗಿಂದ ಜಾಣಿ ಪಾರಾಗಿ ಮುಂದೆ ಮುಂದೆ ಬಂದಳು. ಬಂದು ಅತ್ತೆ ಮಾವಂದಿರಿಗೆ ಬುದ್ಧಿ ಹೇಳಿದಳು –

“ನಿಮ್ಮ ಅಳಿಯನಿಗೆ ಈ ರೀತಿ ಕಾಡಬೇಡಿರಿ. ಇಲ್ಲ ಅಂದರೆ ನೀವು ನೆಲದ ಮ್ಯಾಗಿಂದ ಏಳಲಿಕ್ಕೆ ಸಾಧ್ಯವೇ ಇಲ್ಲ” ಎಂದು ಗಟ್ಟಿಯಾಗಿ ಹೇಳುತ್ತಾಳೆ.

“ನಾವು ಹಿಂಥಾ ಕೆಲಸ ಇನ್ನೆಂದೂ ಮಾಡೂದಿಲ್ಲ” ಎಂದು ಗಲ್ಲಗಲ್ಲ ಬಡಕೊಳ್ಳುತ್ತಾರೆ. ಏಳಬೇಕೆನ್ನುತ್ತಾರೆ, ಏಳುವದಾಗಲಿಲ್ಲ. ಆಗ ಅಳಿಯ “ನಡೆ” ಅಂದ ಕೂಡಲೇ ಗಪ್ಪನೆ ಎದ್ದು ಕುಳಿತರು.

ಅಂದಿನಿಂದ ಅಳಿಯದೇವರ ಸತ್ಕಾರ ನಡೆಯಲು ಆರಂಭವಾಯಿತು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...