Home / ಕವನ / ಕವಿತೆ / ಯಾಂವ ನನ್ನ ಕೇಳಾಂವ?

ಯಾಂವ ನನ್ನ ಕೇಳಾಂವ?

ಯಾಂವ ನನ್ನ ಕೇಳಾಂವ?
ಯಾಂವ ಯಾಂವ ಯಾಂವ ಯಾಂವ
ಯಾಂವ ನನ್ನ ಕೇಳಾಂವ? ||ಪಲ್ಲ||

ಮನಸಿಗೆ ಬಂದರ ಬರಿಯಾಂವ
ಮನಸಿಗೆ ಬಂದರ ಹಾಡಾಂವ-ನನ
ಮನಸಿಗೆ ಬಂದರ ಕುಣಿಯಾಂವ
ಯಾಂವ ನನ್ನ ಕೇಳಾಂವ? ||ಅ.ಪ||

ಗಾಳಿ ಸುಂಯ್‌ ಸುಂಯ್‌ ಅನ್ತಿರವಲ್ದು
ಬೆಳಕು ತನ್ಕೈ ಚಾಚಿರವಲ್ದು
ಹಾಳು ಕತ್ತಲಿ ಇನ್ನೂ ಮಬ್ಬಿನಾಗ
ತೂಗಾಡ್ತಿದ್ದರ ತೂಗಾಡ್ತಿರಲಿ
ಯಾಂವ ನನ್ನ ಕೇಳಾಂವ? ||೧||

ತೊಟ್ಟಿಲ ಕೂಸು ಆಡತಿರಲಿ
ತಾಯಿ ಜೋಗುಳ ಹಾಡತಿರಲಿ
ಹಕ್ಕಿದನಿಗೆ ದನಿಗೂಡಿಸಿದರು
ನಾಯಾಕ ನನ್ಹಾಡ ಹಾಡಲಿ?
ಯಾಂವ ನನ್ನ ಕೇಳಾಂವ! ||೨||

ತುಂಬಿ ಹೂವಿಗೆ ಮುತ್ತಿಡುತಿರಲಿ
ಸವಿದುಟಿ ಜೇನ ಕುಡಿಯುತ್ತಿರಲಿ
ಹುಂಬನ್ಹಂಗ ಮೈಯ್ಯಮರೆತು
ಗುಂಯ್‌ ಗುಂಯ್‌ ಗುಂಯ್‌ ಗುಂಯ್‌ ಅನ್ನುತ್ತಿರಲಿ
ಯಾಂವ ನನ್ನ ಕೇಳಾಂವ? ||೩||

ಹೆಣ್ಣು ಗಂಡು ಕೂಡಿಕೊಂಡು
ಸಣ್ಣ ಗೂಡ ಕಟ್ಟಿಕೊಂಡು
ತಮ್ಮ ಬಾಳು ಶಾಶ್ವತವೆಂದು
ಹಾಡತಿದ್ದರ ಹಾಡತಿರಲಿ
ಯಾಂವ ನನ್ನ ಕೇಳಾಂವ? ||೪||

ಬರುವುದು ಬರಲಿ ಬಿಡುವುದು ಬಿಡಲಿ
ನ್ಯಾನ್ಯಾಕ್ಯೋಚನೆ ಮಾಡಲಿ?
ಪರಮನ ಕರುಣೆಯು ಕರಗತವಾಗುತ
ಬಾಳುನಂದನವಾಗಲಿ
ಆಗ ನಾನು ಹಾಡಾಂವ
ಆಗ ನಾನು ಬಾರಿಯಾಂವ
ಆಗ ನಾನು ಕುಣಿಯಾಂವ ||೫||

ಯಾಂವ ನನ್ನ ಕೇಳಾಂವ?
ಯಾಂವ ಯಾಂವ ಯಾಂವ ಯಾಂವ
ಯಾಂವ ನನ್ನ ಕೇಳಾಂವ? ||ಪಲ್ಲ||
*****
ಬೆಳಗಾವಿ : ೧೯೪೦

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...